Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಜ್ ಭವನಕ್ಕೆ ಅಬ್ದುಲ್ ಕಲಾಂ ಹೆಸರಿಡಲಿ:...

ಹಜ್ ಭವನಕ್ಕೆ ಅಬ್ದುಲ್ ಕಲಾಂ ಹೆಸರಿಡಲಿ: ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ24 Jun 2018 6:58 PM IST
share
ಹಜ್ ಭವನಕ್ಕೆ ಅಬ್ದುಲ್ ಕಲಾಂ ಹೆಸರಿಡಲಿ: ಯಡಿಯೂರಪ್ಪ

ಬೆಂಗಳೂರು, ಜೂ.24: ಹಜ್ ಭವನಕ್ಕೆ ‘ಟಿಪ್ಪು ಸುಲ್ತಾನ್ ಘರ್’ ಎಂಬ ಹೆಸರಿಡುವ ಬದಲು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಸಲಹೆ ನೀಡಿದ್ದಾರೆ.

ರವಿವಾರ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸರಕಾರದ ನಾಲ್ಕು ವರ್ಷದ ಸಾಧನೆಗಳ ಕುರಿತಾದ ಶುದ್ಧ ನಡೆ-ಸೂಕ್ತ ವಿಕಾಸ್ ಎಂಬ ಕನ್ನಡ ಅವತರಣಿಕೆಯನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, ಹಜ್ ಭವನದ ಹೆಸರು ಬದಲಿಸಲೇಬೇಕಾದರೆ ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಂ ಅವರ ಹೆಸರನ್ನು ಇಡಲಿ ಎಂದು ಸಲಹೆ ನೀಡಿದರು.

ನಾಲ್ಕು ವರ್ಷಗಳಲ್ಲಿ ಮೋದಿ ಸರಕಾರದ ಸಾಧನೆಗಳನ್ನು ತಿಳಿಸಲು ನಮ್ಮ ಕಾರ್ಯಕರ್ತರು ಈ ಪುಸ್ತಕವನ್ನು ಹೊರ ತಂದಿದ್ದಾರೆ. ಹತ್ತು ವರ್ಷ ಆಡಳಿತ ನಡೆಸಿದ ಯುಪಿಎ ಸರಕಾರವು ಅತ್ಯಂತ ಹೆಚ್ಚು ಭ್ರಷ್ಟಾಚಾರ ಮತ್ತು ಆಡಳಿತ ಕುಸಿತ ಕಂಡಿತ್ತು. ಆದರೆ, ಎನ್‌ಡಿಎ ಸರಕಾರದಲ್ಲಿ ದೇಶದ ಆರ್ಥಿಕತೆ ಸುಭದ್ರವಾಗಿದೆ. ರಕ್ಷಣೆ ವ್ಯವಸ್ಥೆ ಬಲಿಷ್ಠವಾಗಿದೆ. ಅಂತರರಾಷ್ಟ್ರೀಯ ಸಂಬಂಧದಲ್ಲಿ ವೃದ್ಧಿಯಾಗಿ ಜನರಲ್ಲಿ ಭರವಸೆ ಮೂಡಿಸಿದೆ ಎಂದು ತಿಳಿಸಿದರು.

ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಆರು ರಾಜ್ಯಗಳಲ್ಲಿ ಮಾತ್ರ ಬಿಜೆಪಿ ಅಧಿಕಾರದಲ್ಲಿತ್ತು. ಆದರೆ, ಇಂದು 20 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮೋದಿ ಅವರನ್ನು ಹೆದರಿಸಲು ಶಕ್ತಿ ಇಲ್ಲದೆ ವಿರೋಧ ಪಕ್ಷಗಳು ಒಂದಾಗಿದ್ದು, ಇದಕ್ಕೆ ಹೆದರುವ ಪ್ರಶ್ನೆಯೆ ಇಲ್ಲ. ಕೇಂದ್ರದ ಜನಪರ ಯೋಜನೆ ನಮ್ಮ ಶಕ್ತಿ ತುಂಬಲಿದೆ. ಹೀಗಾಗಿಯೇ ಸರಕಾರದ ಸಾಧನೆಗಳ ಪಟ್ಟಿಯನ್ನು ರೆಡಿ ಮಾಡಿದ್ದೇವೆ. ಕೈಪಿಡಿಯನ್ನು ಕೊಟ್ಟು ಮನವರಿಕೆ ಮಾಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಕುಮಾರಸ್ವಾಮಿ ಚುನಾವಣಾ ಪೂರ್ವದಲ್ಲಿ ಹಲವು ಭರವಸೆಯನ್ನು ನೀಡಿದ್ದರು. ಹೀಗಾಗಿ, ಜೆಡಿಎಸ್‌ನಿಂದ 37 ಜನರು ಗೆದ್ದಿದ್ದಾರೆ. ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಎಲ್ಲ ಭರವಸೆಗಳನ್ನು ಜಾರಿ ಮಾಡುತ್ತೇನೆಂದು ಹೇಳಿದ್ದರು. ಆದರೆ, ಇನ್ನು ಏನೂ ಮಾಡಿಲ್ಲ. ಕಾದುನೋಡೋಣ ಅಂತ ಕಾರ್ಯಕರ್ತರಿಗೆ ಹೇಳಿದ್ದೇನೆ. ಅಲ್ಲದೆ, ರೈತರ ಹಿತದೃಷ್ಟಿಯಿಂದ ಎಲ್ಲ ರೀತಿಯ ಸಹಕಾರ ಕೊಡುತ್ತಿದ್ದೇವೆ. ಈ ಮೊದಲು ಇದ್ದ ಸರಕಾರ, ಈಗ ಇರುವ ಸರಕಾರ ರೈತರ ವಿಚಾರದಲ್ಲಿ ತಪ್ಪು ಹೆಜ್ಜೆಗಳನ್ನು ಇಟ್ಟಿವೆ ಎಂದು ಆರೋಪಿಸಿದರು.

ಡಿ.ಕೆ.ಶಿವಕುಮಾರ್ ಅವರು ತಮ್ಮ ಹತ್ತಿರ ಇರುವ ಡೈರಿಗಳನ್ನು ಬಿಡುಗಡೆ ಮಾಡಲಿ ಬೇಡ ಅಂದವರು ಯಾರು. ತಮ್ಮ ಹುಳುಕನ್ನು ಮುಚ್ಚಿಕೊಳ್ಳಲು ಕುಂಟು ನೆಪ ಹೇಳುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಿಕಿತ್ಸೆಗಾಗಿ ಧರ್ಮಸ್ಥಳಕ್ಕೆ ಹೋಗಿದ್ದು, ಅತ್ತಕಡೆ ಹೆಚ್ಚಿನ ಗಮನ ಹರಿಸಲಿ. ಬಿ.ಜೆ.ಪುಟ್ಟಸ್ವಾಮಿ ಅವರು ಅಸಮಾಧಾನದಿಂದಾಗಿ ರಾಜೀನಾಮೆ ನೀಡುವ ಬಗ್ಗೆ ಹೇಳುತ್ತಿದ್ದಾರೆ. ಅವರನ್ನು ಕರೆದು ಮಾತುನಾಡುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ಸಹ ವಕ್ತಾರ ಎ.ಎಚ್.ಆನಂದ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X