Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಧಿಕಾರ ವ್ಯಾಮೋಹದಿಂದ ಬೆಳವಣಿಗೆ ಅಸಾಧ್ಯ:...

ಅಧಿಕಾರ ವ್ಯಾಮೋಹದಿಂದ ಬೆಳವಣಿಗೆ ಅಸಾಧ್ಯ: ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ

ವಾರ್ತಾಭಾರತಿವಾರ್ತಾಭಾರತಿ24 Jun 2018 7:25 PM IST
share
ಅಧಿಕಾರ ವ್ಯಾಮೋಹದಿಂದ ಬೆಳವಣಿಗೆ ಅಸಾಧ್ಯ: ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ

ಬೆಂಗಳೂರು, ಜೂ.24 : ಅಧಿಕಾರದ ವ್ಯಾಮೋಹ ಹಾಗೂ ಗೌಪ್ಯ ಆಡಳಿತ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೂ ಯಾವ ಸಂಸ್ಥೆಗಳೂ ಬೆಳವಣಿಗೆ ಆಗುವುದಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಹೇಳಿದ್ದಾರೆ.

ನಗರದ ಉದಯಭಾನು ಕಲಾ ಸಂಘ ವತಿಯಿಂದ ಹಮ್ಮಿಕೊಂಡಿದ್ದ ಉದಯಭಾನು ಕಲಾ ಸಂಘದ 54ನೆ ಸಂಸ್ಥಾಪನಾ ದಿನಾಚರಣೆ ಮತ್ತು ತ್ರೈಮಾಸಿಕ ಸುದ್ದಿಪತ್ರಿಕೆ ಉದಯಸೌರಭ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಸರಕಾರ ಸೇರಿದಂತೆ ಪ್ರತಿ ಸಂಸ್ಥೆಗಳೂ ಅಧಿಕಾರದ ವ್ಯಾಮೋಹದಿಂದ ಕೆಲಸ ನಿರ್ವಹಿಸುತ್ತಿವೆ. ನಿರ್ವಂಚನೆಯಿಂದ ಸೇವೆ ಸಲ್ಲಿಸುವವರ ಸಂಖ್ಯೆ ಅತಿ ವಿರಳ ಎಂದರು.

ಎಲ್ಲ ಸಂಸ್ಥೆಗಳು ಅಧಿಕಾರದ ವ್ಯಾಮೋಹ ಬಿಟ್ಟು ಸೇವೆ ಸಲ್ಲಿಸಬೇಕು. ಆಗ ಪ್ರತಿಯೊಬ್ಬರೂ ಹೃದಯ ತೆರೆದು ನೋಡುತ್ತಾರೆ. ಸಂಸ್ಥೆಗಳು ಅಭಿವೃದ್ಧಿ ಹೊಂದುತ್ತವೆ. ಆದರೆ, ನಮ್ಮಲ್ಲಿ ಅಂತಹ ಸಂಸ್ಥೆಗಳು ಇಲ್ಲದಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.

ಯಾವುದೇ ಆಡಳಿತ ಮಂಡಳಿಗಳು ಅಧಿಕಾರ, ಅಲ್ಲಿನ ನಿರ್ಣಯ ಸೇರಿದಂತೆ ಎಲ್ಲವನ್ನೂ ಗೌಪ್ಯವಾಗಿಡುತ್ತವೆ. ಅದನ್ನು ಬಿಟ್ಟು ಸೇವೆ ಮಾಡುವ ಕಡೆಗೆ ಗಮನ ಹರಿಸಬೇಕು. ಎಲ್ಲಿ ಸೇವೆ ನಿರ್ವಂಚನೆಯಿಂದ ಮಾಡಲಾಗುತ್ತದೆ ಅಲ್ಲಿ ಕಾರ್ಯಕರ್ತರು ತಾವಾಗಿಯೇ ಉತ್ಪತ್ತಿ ಆಗುತ್ತಾರೆ. ಹೆಚ್ಚಿನ ಮಂದಿಯ ಸಹಕಾರ, ಪ್ರೋತ್ಸಾಹ ಸಿಗುತ್ತದೆ. ಸಂಘ ಸಂಸ್ಥೆಗಳೂ ಸೇರಿದಂತೆ ಪ್ರತಿಯೊಬ್ಬರೂ ನಮ್ಮ ಭಾಷೆ, ಸಂಸ್ಕೃತಿ, ಆಚಾರ, ವಿಚಾರವನ್ನು ಉಳಿಸಿ, ಬೆಳೆಸಿ, ಅದನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ತಾವಾಗಿಯೇ ಸಮಾಜ ಸೇವೆ ಮಡಲು ಮುಂದಾಗಬೇಕು ಎಂದು ತಿಳಿಸಿದರು.

ವಿಮರ್ಶಕ ಡಾ.ಜಿ.ಕೃಷ್ಣಪ್ಪ ‘ಸಾಹಿತ್ಯ-ಸಂಸ್ಕೃತಿ’, ಆರ್.ವಿ.ಶಿಕ್ಷಣ ಸಮಿತಿ ಟ್ರಸ್ಟ್‌ನ ನಿರ್ದೇಶಕ ಡಾ.ಟಿ.ವಿ.ರಾಜು ‘‘ ಶಿಕ್ಷಣ-ಉನ್ನತ ಅಧ್ಯಯನ’, ವೈದ್ಯೆ ಡಾ.ಚಂದ್ರಕಲಾ ಎಚ್.ಎನ್.ರಾಜಣ್ಣ ‘ಸಾರ್ವಜನಿಕ ಆರೋಗ್ಯ ಪಾಲನೆ’, ಮಾಜಿ ಉಪ ಮೇಯರ್ ಶ್ರೀರಾಮೇಗೌಡ ‘ನಗರ ಕಲ್ಯಾಣ-ಸಾಮಾಜಿಕ ಸೇವೆ’ ಕುರಿತು ವಿಷಯ ಮಂಡಿಸಿದರು. ನಂತರ ಸಂಘದ ಸಾಧನ ಪಥ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಡಾ.ಉದಯ್ ಗರುಡಾಚಾರ್, ಪಾಲಿಕೆ ಸದಸ್ಯ ಡಿ.ಎನ್.ರಮೇಶ್, ಪತ್ರಿಕೆ ಸಂಪಾದಕ ಡಾ.ನಾ.ಗೀತಚಾರ್ಯ, ಪ್ರೊ.ಶಾಂತರಾಜು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X