Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಜಬ್ದಾರಿಯುತ ತನಿಖೆ ನಡೆಸಿದ ಪೊಲೀಸ್...

ಬೇಜಬ್ದಾರಿಯುತ ತನಿಖೆ ನಡೆಸಿದ ಪೊಲೀಸ್ ಇಲಾಖೆಗೆ ಚಾಟಿ ಬೀಸಿದ ಹೈಕೋರ್ಟ್

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ24 Jun 2018 8:30 PM IST
share
ಬೇಜಬ್ದಾರಿಯುತ ತನಿಖೆ ನಡೆಸಿದ ಪೊಲೀಸ್ ಇಲಾಖೆಗೆ ಚಾಟಿ ಬೀಸಿದ ಹೈಕೋರ್ಟ್

ಬೆಂಗಳೂರು, ಜೂ.24: ಐಪಿಎಲ್ ಕ್ರಿಕೆಟ್ ಪಂದ್ಯವೊಂದರ ಬೆಟ್ಟಿಂಗ್ ಕುರಿತ ಪ್ರಕರಣದಲ್ಲಿ ಬೇಜಬ್ದಾರಿಯುತ ತನಿಖೆ ನಡೆಸಿದ್ದ ರಾಜ್ಯ ಪೊಲೀಸ್ ಇಲಾಖೆಗೆ ಹೈಕೋರ್ಟ್ ಚೀಮಾರಿ ಹಾಕಿದೆ. ಅಲ್ಲದೆ, ಇಂತಹ ಪ್ರಕರಣಗಳ ಸಮರ್ಥ ತನಿಖೆಗೆ ತನಿಖಾಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ಟಿ.ವಿಯಲ್ಲಿ ಐಪಿಎಲ್ ಪಂದ್ಯ ವೀಕ್ಷಿಸುತ್ತಿದ್ದ ಕಾರಣಕ್ಕೆ ಇಬ್ಬರನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದ ದಾವಣಗೆರೆ ಕೆಟಿಜೆ ಠಾಣಾ ಪೊಲೀಸರು, ಪ್ರಕರಣದಲ್ಲಿ ಯಾರೆಲ್ಲಾ ಬೆಟ್ಟಿಂಗ್‌ನಲ್ಲಿ ಪಾಲ್ಗೊಂಡಿದ್ದರು? ಬೆಟ್ಟಿಂಗ್ ನಡೆಸಿದವರು ಯಾರಿಗೆ ಹಣ ಮರು ಪಾವತಿಸದೆ ವಂಚಿಸಿದ್ದರು ಎಂಬಿತ್ಯಾದಿ ವಿಚಾರಗಳನ್ನು ಕಂಡು ಹಿಡಿದಿರಲಿಲ್ಲ. ಇದರಿಂದ ಪೊಲೀಸರು ಸಮರ್ಥ ತನಿಖೆ ನಡೆಸಿಲ್ಲ ಎಂದು ಹೈಕೋರ್ಟ್ ಪ್ರಕರಣವನ್ನು ರದ್ದುಪಡಿಸಿದೆ. ಹಾಗೆಯೇ, ಇಂತಹ ಪ್ರಕರಣಗಳ ತನಿಖೆ ವೇಳೆ ತನಿಖಾಧಿಕಾರಿಗಳಿಗೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಆಯುಕ್ತರು ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಆದೇಶಿಸಿ, ಆದೇಶದ ಪ್ರತಿ ಕಳುಹಿಸಿಕೊಡಲು ರಿಜಿಸ್ಟ್ರಾರ್ ಗೆ ನಿರ್ದೇಶಿಸಿದೆ.

ಐಪಿಎಲ್ ಪಂದ್ಯಾವಳಿಯ ಗುಜರಾತ್ ಲಯನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಕ್ರಿಕೆಟ್ ಪಂದ್ಯದ ಸಂಬಂಧ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂದು 2016ರ ಎ.16ರಂದು ರಾತ್ರಿ ಕೆಟಿಜೆ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತವರ ಸಿಬ್ಬಂದಿ ದಾವಣಗೆರೆ ಸೆಂಟ್ರಲ್ ವೃತ್ತದ ಪಿ.ಬಿ.ರಸ್ತೆಯ ಲಾಡ್ಜ್ ಮೇಲೆ ದಾಳಿ ನಡೆಸಿತ್ತು. ಈ ವೇಳೆ ರಾಹುಲ್ ಮತ್ತು ಪಿ.ರಾಕೇಶ್ ಎಂಬುವರನ್ನು ಬಂಧಿಸಿ ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 78(6) ಅಡಿ ಎಫ್‌ಐಆರ್ ದಾಖಲಿಸಿತ್ತು. ಬಳಿಕ ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಲು ಕೋರಿ ಆರೋಪಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್‌ನಲ್ಲಿ ವಿಚಾರಣೆಯ ವೇಳೆ ಪೊಲೀಸರು, ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ್ದೆವು. ರಾಹುಲ್ ಮತ್ತು ರಾಕೇಶ್ ಲಾಡ್ಜ್‌ನ ಕೊಠಡಿ ಸಂಖ್ಯೆ-152ರಲ್ಲಿ ಟಿವಿಯಲ್ಲಿ ಐಪಿಎಲ್ ಪಂದ್ಯ ನೋಡುತ್ತಿದ್ದರು. ಅವರು ಜನರಿಂದ ಹಣ ಸಂಗ್ರಹಿಸಿ, ಮರು ಪಾವತಿಸದೆ ವಂಚಿಸಿದ್ದಾರೆ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಪ್ರಕರಣವನ್ನು ಸಮರ್ಪಕವಾಗಿ ತನಿಖೆ ನಡೆಸಿಲ್ಲ. ಆರೋಪ ಸಾಬೀತುಪಡಿಸುವ ಸಾಕ್ಷಾಧಾರವನ್ನು ಆರೋಪಪಟ್ಟಿಯಲ್ಲಿ ಒದಗಿಸಿಲ್ಲ. ಹೀಗಾಗಿ, ಬೆಟ್ಟಿಂಗ್ ನಡೆಸಲಾಗುತ್ತಿತ್ತು ಎನ್ನಲಾಗದು ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಅರ್ಜಿದಾರರ ವಿರುದ್ಧ ಕೆಟಿಜೆ ಪೊಲೀಸರು ದಾಖಲಿಸಿದ್ದ ದೂರು ಮತ್ತದರ ದಾವಣಗೆರೆ 2ನೆ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿನ ವಿಚಾರಣೆ ರದ್ದುಪಡಿಸಿತು.

ಪ್ರಕರಣದಲ್ಲಿ ಅಸಮರ್ಪಕ ತನಿಖೆ ನಡೆಸಿರುವುದಕ್ಕೆ ಪೊಲೀಸರಿಗೆ ಚಾಟಿ ಬೀಸಿರುವ ಹೈಕೋರ್ಟ್, ಪ್ರಕರಣದಲ್ಲಿ ಬೆಟ್ಟಿಂಗ್‌ನಲ್ಲಿ ಯಾರು ಪಾಲೊಂಡಿದ್ದರು? ಆರೋಪಿಗಳಿಗೆ ಯಾರು ಹಣ ಪಾವತಿಸಿದ್ದರು? ಈ ಕುರಿತು ಯಾರು ದೂರು ದಾಖಲಿಸಿದ್ದಾರೆ ಎಂಬ ಅಂಶಗಳನ್ನು ಪೊಲೀಸರು ಕಂಡುಹಿಡಿದಿಲ್ಲ. ಎರಡು ಕೈಗಳಿಲ್ಲದೆ ಚಪ್ಪಾಳೆ ಹೊಡೆಯಲು ಆಗಲ್ಲ. ಅದೇ ರೀತಿ ಸಾರ್ವಜನಿಕ ಸಹಾಯವಿಲ್ಲದೆ ಬೆಟ್ಟಿಂಗ್ ನಡೆಸಲಾಗದು ಎಂಬುದು ಸತ್ಯ ಎಂದು ಟೀಕಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X