Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಫಿತ್ರ್ ಕಮಿಟಿಯಿಂದ 1914...

ಭಟ್ಕಳ: ಫಿತ್ರ್ ಕಮಿಟಿಯಿಂದ 1914 ಕುಟುಂಬಗಳಿಗೆ 957 ಕ್ವಿಂಟಲ್ ಧಾನ್ಯ ವಿತರಣೆ

ವಾರ್ತಾಭಾರತಿವಾರ್ತಾಭಾರತಿ24 Jun 2018 8:47 PM IST
share
ಭಟ್ಕಳ: ಫಿತ್ರ್ ಕಮಿಟಿಯಿಂದ 1914 ಕುಟುಂಬಗಳಿಗೆ 957 ಕ್ವಿಂಟಲ್ ಧಾನ್ಯ ವಿತರಣೆ

ಭಟ್ಕಳ, ಜೂ. 24: ಈದುಲ್ ಫಿತ್ರ್ ಹಬ್ಬದಂದು ಫಿತ್ರ ಕಮಿಟಿಯಿಂದ ಭಟ್ಕಳ ತಾಲೂಕು ಸೇರಿದಂತೆ ಕುಂದಾಪುರ ತಾಲೂಕಿನ ಕೆಲ ಗ್ರಾಮದ 1914 ಬಡ ಕುಟುಂಬಗಳಿಗೆ 957 ಕ್ವಿಂಟಲ್ ಅಕ್ಕಿ ವಿತರಣೆ ಮಾಡಲಾಗಿದೆ ಎಂದು ಫಿತ್ರ ಕಮಿಟಿಯ ಸಂಚಾಲಕ ಮೌಲಾನ ಮುಹಮ್ಮದ್ ಇಲ್ಯಾಸ್ ನದ್ವಿ ಹೇಳಿದರು.

ಅವರು ಶನಿವಾರ ಸಂಜೆ ಅಬುಲ್ ಹಸನ್ ಅಲಿ ಅಕಾಡಮಿ ಸಭಾಂಗಣದಲ್ಲಿ ಜರಗಿದ ಫಿತ್ರ ಕಮಿಟಿಯ ಅವಲೋಕನ ಸಭೆಯಲ್ಲಿ ಪ್ರಸ್ತಾವಿಕವಾಗಿ ವಾತನಾಡುತ್ತ ಈ ವಿಷಯ ತಿಳಿಸಿದರು.

ರಮಝಾನ್ ತಿಂಗಳ ಪೂರ್ತಿ ಉಪವಾಸಾಚರಣೆಯ ನಂತರ ಈದುಲ್ ಫಿತ್ರ್ ಹಬ್ಬ ಆಚರಿಸಲಾಗುತ್ತಿದೆ. ಫಿತ್ರ್ ಅಂದರೆ ದಾನವಾಗಿದ್ದು ಬಡವರು ಸಹ ಈದ್ (ಹಬ್ಬದ)ಖುಷಿಯಲ್ಲಿ ಪಾಲ್ಗೊಳ್ಳುವಂತಾಗಲು ಕುಟುಂಬದ ಪ್ರತಿಯೊರ್ವ ಸದಸ್ಯನು ಕಡ್ಡಾಯವಾಗಿ ನೀಡಲೇಬೇಕಾದ ದಾನ ಫಿತ್ರ ಝಕಾತ್ ಅಗಿದ್ದು ಇದನ್ನು ಸಾಮೂಹಿಕವಾಗಿ ಕ್ರೊಢೀಕರಣ ಮಾಡುವ ಕೆಲಸವನ್ನು ಭಟ್ಕಳ ಫಿತ್ರ್  ಕಮಿಟಿ ಕಳೆದ 24 ವರ್ಷಗಳಿಂದ ಮಾಡುತ್ತ ಬಂದಿದ್ದು ಈ ನಿಟ್ಟಿನಲ್ಲಿ ಪ್ರತಿವರ್ಷ ಫಿತ್ರ್ ದಾನ ನೀಡುವವರಲ್ಲಿ ಹೆಚ್ಚಳವಾಗುತ್ತಿದೆ. ತಮ್ಮ ಸಮೀಪದ ಮೊಹಲ್ಲ, ಪಟ್ಟಣ ಕೇರಿಗಳಲ್ಲಿ ವಾಸಿಸುವ ಬಡವರನ್ನು ಗುರುತಿಸಿ ಅವರ ಮನೆಗೆ ಅಕ್ಕಿಯನ್ನು ವಿತರಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿರುವುದು ಶ್ಲಾಘನೀಯ ಎಂದ ಅವರು ಇದಕ್ಕಾಗಿ ಯುವಕರು ತಮ್ಮನ್ನು ತೊಡಗಿಸಿಕೊಂಡಿರುವುದು ಸಂತೋಷದ ವಿಷಯವಾಗಿದೆ ಎಂದರು.

ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮೌಲಾನ ಮಖ್ಬೂಲ್ ಆಹ್ಮದ್ ಕೋಬಟ್ಟೆ ಮಾತನಾಡಿ, ಭೂಮಿಯಲ್ಲಿ ವಾಸಿಸುವ ಎಲ್ಲರಿಗೂ ಹಬ್ಬವನ್ನು ಸಂತೋಷ ಸಡಗರದಿಂದ ಆಚರಿಸುವಂತಾಗಲು ಇಸ್ಲಾಮ್ ಧರ್ಮ ಕಂಡುಕೊಂಡಂತಹ ದಾರಿ ಫಿತ್ರ್ ದಾನವಾಗಿದೆ ಈ ಮೂಲಕ ಸಮಾಜದ ಕಟ್ಟಕಡೆಯವ ವ್ಯಕ್ತಿಯೂ ಕೂಡ ಹಬ್ಬದ ಸಂತೋಷದಿಂದ ವಂಚಿತನಾಗಕೂಡದು ಎಂಬ ಆಶಯವನ್ನು ಇಟ್ಟುಕೊಳ್ಳಲಾಗಿದೆ. ಸಮೂಹಿಕವಾಗಿ ಮಾಡುವ ಮಾನವ ಸೇವೆಯೂ ಇಸ್ಲಾಮ್ ಧರ್ಮದ ವೈಶಿಷ್ಠ್ಯತೆಗಳಲ್ಲೊಂದಾಗಿದೆ ಎಂದರು.

ತಂಝೀಮ್ ಉಪಾಧ್ಯಕ್ಷ ಮುಹಮ್ಮದ್ ಜಾಫರ್ ಮೊಹತೆಶಮ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.  ಮೌಲಾನ ಅಬ್ದುಲ್ ಮತೀನ್ ಮುನಿರಿ, ಅಂಜುಮನ್ ಶಿಕ್ಷಣ ಸಂಸ್ಥೆಯ ಸಿದ್ದೀಕ್ ಮೀರಾ, ದುಬೈ ಜಮಾಅತ್ ನ ಅಬ್ದುಸ್ಸಮಿ ಕೋಲಾ, ನೋಮಾನ್ ಮತ್ತಿತರರು ಮಾತನಾಡಿದರು.

ಜಾಮೀಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಯ ಹಿರಿಯ ಸದಸ್ಯರಾದ ಅಬ್ದುಲ್ ಹಮೀದ್ ಸಾಹೇಬ್, ವೇದಿಕೆಯಲ್ಲಿ ಉಪಸ್ಥಿತಿತರಿದ್ದರು. ಎಸ್.ಎಂ.ಸೈಯ್ಯದ್, ಸೈಯ್ಯದ್ ಪರ್ವೇರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X