Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ರಸ್ತೆಗಳಲ್ಲಿ ವಾಹನ ಚಲಾಯಿಸಿದ...

ಸೌದಿ ರಸ್ತೆಗಳಲ್ಲಿ ವಾಹನ ಚಲಾಯಿಸಿದ ಮಹಿಳೆಯರು

35 ವರ್ಷಗಳ ನಿಷೇಧಕ್ಕೆ ಕೊನೆ

ವಾರ್ತಾಭಾರತಿವಾರ್ತಾಭಾರತಿ24 Jun 2018 9:26 PM IST
share
ಸೌದಿ ರಸ್ತೆಗಳಲ್ಲಿ ವಾಹನ ಚಲಾಯಿಸಿದ ಮಹಿಳೆಯರು

ರಿಯಾದ್, ಜೂ. 24: ಸೌದಿ ಅರೇಬಿಯದ ಮಹಿಳೆಯರು ರವಿವಾರ ಬೆಳಗ್ಗೆಯಾಗುವವರೆಗೂ ಕಾಯಲಿಲ್ಲ! ಶನಿವಾರ ಮಧ್ಯರಾತ್ರಿ ಕಳೆಯುತ್ತಿದ್ದಂತೆಯೇ ಅವರು ತಮ್ಮ ಕಾರುಗಳೊಂದಿಗೆ ರಸ್ತೆಗಿಳಿದರು ಹಾಗೂ ಆ ಮೂಲಕ ದಾಖಲೆ ಪುಸ್ತಕಗಳಿಗೆ ಸೇರ್ಪಡೆಗೊಂಡರು.

 ರವಿವಾರ ಸೌದಿ ಮಹಿಳೆಯರ ಮೇಲಿದ್ದ 35 ವರ್ಷಗಳ ವಾಹನ ಚಾಲನೆ ನಿಷೇಧ ಕೊನೆಗೊಂಡಿತು.

ಶನಿವಾರ ಮಧ್ಯರಾತ್ರಿ 12 ಗಂಟೆ ಬಾರಿಸುತ್ತಿದ್ದಂತೆಯೇ, ಹಲವಾರು ಮಹಿಳೆಯರು ತಮ್ಮ ನೂತನ ವಾಹನ ಚಾಲನಾ ಪರವಾನಿಗೆಗಳೊಂದಿಗೆ ರಾಜಧಾನಿ ರಿಯಾದ್‌ನ ನಿಬಿಡ ತಹ್ಲಿಯ ರಸ್ತೆ ಹಾಗೂ ಇತರ ರಸ್ತೆಗಳಲ್ಲಿ ಕಾರುಗಳನ್ನು ಚಲಾಯಿಸಿದರು.

ಕೆಂಪು ಸಮುದ್ರದ ನಗರ ಜಿದ್ದಾ ಮತ್ತು ಸೌದಿಯ ಇತರ ನಗರಗಳ ಬೀದಿಗಳಲ್ಲೂ ಇದೇ ದೃಶ್ಯಗಳು ಕಂಡುಬಂದವು.

 ‘‘ಇಂದು ಭಾವನೆಗಳು ಗರಿಗೆದರಿದ ದಿನ. ಈ ದಿನ ಅಂತಿಮವಾಗಿ ಬಂದಿರುವುದಕ್ಕೆ ನಾನು ರೋಮಾಂಚಿತಗೊಂಡಿದ್ದೇನೆ. ಇದು ನಿಜವಾಗಿಯೂ ಕನಸು ನನಸಾದ ಕ್ಷಣ. ನನ್ನ ದೇಶದ ರಸ್ತೆಗಳಲ್ಲಿ ಕೊನೆಗೂ ವಾಹನ ಚಲಾಯಿಸಲು ಸಾಧ್ಯವಾಗಿರುವುದಕ್ಕೆ ನನಗೆ ಸಂತೋಷವಾಗಿದೆ’’ ಎಂದು ಸ್ಥಳೀಯ ನಿವಾಸಿ ಸಲ್ಮಾ ರಶೀದ್ ಅಲ್‌ಸುನೈದ್ ಹೇಳಿದರು.

‘‘ಇದು ಸೌದಿ ಅರೇಬಿಯದ ಪ್ರತಿಯೊಬ್ಬ ಮಹಿಳೆಯರ ಪಾಲಿಗೆ ಅತ್ಯಂತ ಮಹತ್ವದ ದಿನ. ನನ್ನ ಭಾವನೆಗಳನ್ನು ವರ್ಣಿಸಲು ಸಾಧ್ಯವಿಲ್ಲ. ನನ್ನ ದೇಶದಲ್ಲಿ, ನನ್ನ ನಗರದಲ್ಲಿ ಮೊದಲ ಬಾರಿಗೆ ವಾಹನ ಚಲಾಯಿಸುವುದಕ್ಕೆ ನಾನು ರೋಮಾಂಚಿತಳಾಗಿದ್ದೇನೆ’’ ಎಂದು ರಿಯಾದ್ ಸಮೀಪದ ಅಲ್-ಖರ್ಜ್‌ನಲ್ಲಿರುವ ಪ್ರಿನ್ಸ್ ಸತ್ತಮ್ ಬಿನ್ ಅಬ್ದುಲಝೀಝ್ ವಿಶ್ವವಿದ್ಯಾನಿಲಯದ ಟೆಕ್ನಾಲಜಿ ವಿಭಾಗದ ಸಹಾಯಕ ಪ್ರೊಫೆಸರ್ ತಹಾನಿ ಅಲ್ದುಸೆಮಾನಿ ಹೇಳಿದರು.

ಐತಿಹಾಸಿಕ ನಿರ್ಧಾರ

ಮಹಿಳೆಯರಿಗೆ ವಾಹನ ಚಾಲನೆಗೆ ಅವಕಾಶ ನೀಡುವ ಐತಿಹಾಸಿಕ ನಿರ್ಧಾರವನ್ನು ದೊರೆ ಸಲ್ಮಾನ್ ಬಿನ್ ಅಬ್ದುಲಝೀಝ್ 2017ರ ಸೆಪ್ಟಂಬರ್‌ನಲ್ಲಿ ತೆಗೆದುಕೊಂಡಿರುವುದನ್ನು ಸ್ಮರಿಸಬಹುದಾಗಿದೆ.

ಅವರ ಈ ನಿರ್ಧಾರವು ಜಗತ್ತಿನಾದ್ಯಂತ ಭಾರೀ ಪ್ರಶಂಸೆಗೆ ಪಾತ್ರವಾಗಿತ್ತು.

ಶನಿವಾರ ಮಧ್ಯರಾತ್ರಿಯವರೆಗೆ ಸೌದಿ ಅರೇಬಿಯ ಮಹಿಳೆಯರ ವಾಹನ ಚಾಲನೆಗೆ ಅವಕಾಶ ನೀಡದ ಜಗತ್ತಿನ ಏಕೈಕ ದೇಶವಾಗಿತ್ತು.

ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್‌ರ ‘ಮುನ್ನೋಟ 2030’ನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ದೊರೆ ತೆಗೆದುಕೊಂಡಿದ್ದಾರೆ.

ಮಹಿಳಾ ಸಬಲೀಕರಣ ‘ಮುನ್ನೋಟ 2030’ರ ಪ್ರಮುಖ ಅಂಶವಾಗಿದೆ.

ವಿದೇಶಿ ಚಾಲಕರ ಕೆಲಸಕ್ಕೆ ಕುತ್ತು: ಕನಿಷ್ಠ 50 ಶೇ. ಚಾಲಕರು ಸ್ವದೇಶಕ್ಕೆ ವಾಪಸ್

ಸೌದಿ ಅರೇಬಿಯದಲ್ಲಿ ಮಹಿಳೆಯರ ವಾಹನ ಚಾಲನೆಗೆ ಅವಕಾಶ ಲಭಿಸಿರುವ ಹಿನ್ನೆಲೆಯಲ್ಲಿ, ಭಾರತ ಸೇರಿದಂತೆ ಏಶ್ಯ ಮತ್ತು ಆಫ್ರಿಕದ ಅಭಿವೃದ್ಧಿಶೀಲ ದೇಶಗಳ ಚಾಲಕರಿಗೆ ಬೇಡಿಕೆ ಕಡಿಮೆಯಾಗಲಿದೆ.

ಮುಂದಿನ 10 ವರ್ಷಗಳಲ್ಲಿ ವಿದೇಶಿ ಚಾಲಕರ ನೇಮಕಾತಿಯಲ್ಲಿ 50 ಶೇಕಡ ಕಡಿತ ಉಂಟಾಗಲಿದೆ ಎಂದು ಪರಿಣತರು ಅಭಿಪ್ರಾಯಪಡುತ್ತಾರೆ.

ನೇಮಕಾತಿ ಶುಲ್ಕ ಕಡಿಮೆಯಾಗಲಿದೆ ಹಾಗೂ ವಿದೇಶಿ ಚಾಲಕರೂ ತಮ್ಮ ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ನೇಮಕಾತಿ ಏಜಂಟ್ ಹಮದ್ ಅಲ್-ಬೈಶನ್ ಅಭಿಪ್ರಾಯಪಡುತ್ತಾರೆ.

ಮಹಿಳೆಯರ ವಾಹನ ಚಾಲನೆಗೆ ಅವಕಾಶ ನೀಡುವ ಮೂಲಕ ಸೌದಿ ಅರೇಬಿಯವು ವರ್ಷಕ್ಕೆ 20 ಬಿಲಿಯ ರಿಯಾಲ್ (36,193 ಕೋಟಿ ರೂಪಾಯಿ) ಉಳಿಸಬಹುದಾಗಿದೆ ಎಂಬುದಾಗಿ ಸೌದಿ ಎಕನಾಮಿಕ್ ಅಸೋಸಿಯೇಶನ್ ಹೇಳಿರುವುದನ್ನು ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X