Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೌದಿ ಅರೇಬಿಯಾದಲ್ಲಿ ಕುಸಿದು ಆಸ್ಪತ್ರೆಗೆ...

ಸೌದಿ ಅರೇಬಿಯಾದಲ್ಲಿ ಕುಸಿದು ಆಸ್ಪತ್ರೆಗೆ ದಾಖಲಾದ ಉಳ್ಳಾಲದ ವ್ಯಕ್ತಿ

ಊರಿಗೆ ಕರೆತರಲು ಮನೆಮಂದಿಯಿಂದ ಸಚಿವರಿಗೆ ಮೊರೆ

ವಾರ್ತಾಭಾರತಿವಾರ್ತಾಭಾರತಿ24 Jun 2018 10:06 PM IST
share
ಸೌದಿ ಅರೇಬಿಯಾದಲ್ಲಿ ಕುಸಿದು ಆಸ್ಪತ್ರೆಗೆ ದಾಖಲಾದ ಉಳ್ಳಾಲದ ವ್ಯಕ್ತಿ

ಮಂಗಳೂರು, ಜೂ. 24: ಉಳ್ಳಾಲದ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದ ಅಲ್‌ಬಹಾ ಎಂಬಲ್ಲಿ ಕ್ರಿಕೆಟ್ ಆಟವಾಡುತ್ತಿದ್ದಾಗ ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ವಾರದ ಹಿಂದೆ ನಡೆದಿದ್ದು, ಇದೀಗ ಮನೆಮಂದಿಯು ಯುವಕನನ್ನು ಊರಿಗೆ ಕರೆತರಲು ಸಚಿವ ಯು.ಟಿ.ಖಾದರ್‌ರ ಮೊರೆ ಹೊಗಿದ್ದಾರೆ.

ಉಳ್ಳಾಲದ ಮಾಸ್ತಿಕಟ್ಟೆಯ ಯು.ಕೆ. ಇಸ್ಮಾಯೀಲ್-ಹವ್ವಮ್ಮ ದಂಪತಿಯ ಏಕೈಕ ಪುತ್ರ ರಹ್ಮತುಲ್ಲಾ (40) ಆಸ್ಪತ್ರೆಗೆ ದಾಖಲಾದವರು. ಇವರು ರಿಯಾದ್‌ನಲ್ಲಿ ಗ್ಲಾಸ್ ಡಿಸೈನಿಂಗ್ ಕೆಲಸ ಮಾಡುತ್ತಿದ್ದಾರೆ. ಇವರ ಅನೇಕ ಗೆಳೆಯರು ರಿಯಾದ್‌ನಿಂದ ಸುಮಾರು 1,300 ಕಿ.ಮೀ. ದೂರವಿರುವ ಅಲ್ ಬಹಾದಲ್ಲಿದ್ದಾರೆ. ಆ ಹಿನ್ನೆಲೆಯಲ್ಲಿ ಈದುಲ್ ಫಿತ್ರ್ ಆಚರಿಸಲು ಅಲ್‌ಬಹಾಕ್ಕೆ ತೆರಳಿದ್ದರು. ಹಬ್ಬವನ್ನು ಅತ್ಯಂತ ಸಂತೋಷವಾಗಿಯೇ ಆಚರಿಸಿದ್ದ ರಹ್ಮತುಲ್ಲಾ ಜೂ.16ರಂದು ಸ್ನೇಹಿತರ ಜೊತೆಗೂಡಿ ಕ್ರಿಕೆಟ್ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ರಹ್ಮತುಲ್ಲಾರನ್ನು ಸ್ಥಳೀಯ ಕಿಂಗ್ ಫಹಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಒಂದು ವಾರವಾದರೂ ಕೂಡ ಅವರ ಆರೋಗ್ಯ ಯಥಾಸ್ಥಿತಿಯಲ್ಲಿದೆ. ವೈದ್ಯರ ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ.

ವಿಷಯ ತಿಳಿದ ಸಚಿವ ಖಾದರ್ ರವಿವಾರ ರಹ್ಮತುಲ್ಲಾರ ಮನೆಗೆ ತೆರಳಿ ಹೆತ್ತವರಿಗೆ ಧೈರ್ಯ ತುಂಬಿದ್ದಾರೆ. ಅಲ್ಲದೆ ರಹ್ಮತುಲ್ಲಾರನ್ನು ಊರಿಗೆ ಕರೆತರಲು ಸೂಕ್ತ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಅಂದಹಾಗೆ, ರಹ್ಮತುಲ್ಲಾ ತನ್ನ 18ನೆ ವರ್ಷಕ್ಕೇ ಗಲ್ಫ್‌ಗೆ ತೆರಳಿದ್ದರು. ಕಳೆದ 22 ವರ್ಷದಿಂದ ಅಲ್ಲೇ ಉದ್ಯೋಗದಲ್ಲಿರುವ ಅವರು 3 ವರ್ಷದ ಹಿಂದೆ ಊರಿಗೆ ಬಂದು ಕೆಲಕಾಲ ಇದ್ದು ಮತ್ತೆ ಗಲ್ಫ್‌ಗೆ ಮರಳಿದ್ದರು. ಇದೀಗ ಬಕ್ರೀದ್‌ಗೆ ಮುನ್ನ ಊರಿಗೆ ಬರುವವರಿದ್ದರು. ಅದರೆ ಇದೀಗ ಕುಸಿದು ಬಿದ್ದು ದೇಹದ ಬಲಪಾರ್ಶ್ವವು ಸಂಪೂರ್ಣ ಬಲಕಳಕೊಂಡು ಆಸ್ಪತ್ರೆಗೆ ದಾಖಲಾಗಿರುವುದು ಮನೆ ಮಂದಿಯನ್ನು ಆತಂಕಕ್ಕೀಡು ಮಾಡಿದೆ.

ರಹ್ಮತುಲ್ಲಾರ ತಂದೆ-ತಾಯಿ,ಅಕ್ಕ-ತಂಗಿಯರಲ್ಲದೆ, ಪತ್ನಿ ಮತ್ತು ಇಬ್ಬರು ಮಕ್ಕಳು ಕೂಡಾ ಕಣ್ಣಾರೆ ಕಾಣಲು ಕಾತರರಾಗಿದ್ದಾರೆ. ಅಲ್ಲದೆ ಆರೋಗ್ಯಯುತವಾಗಿ ಊರಿಗೆ ಮರಳಲಿ ಎಂದು ಆಶಿಸುತ್ತಿದ್ದಾರಲ್ಲದೆ, ಊರಲ್ಲೇ ಚಿಕಿತ್ಸೆ ಕೊಡಿಸಲು ಉತ್ಸುಕರಾಗಿದ್ದಾರೆ. ಈ ಮಧ್ಯೆ ರಹ್ಮತುಲ್ಲಾರ ಸ್ನೇಹಿತ ತಲಪಾಡಿಯ ಸುರೇಶ್ ಎಂಬವರು ಕೆಲಸಕ್ಕೆ ರಜೆ ಹಾಕಿ ರಹ್ಮತುಲ್ಲಾರ ಆರೈಕೆಯಲ್ಲಿ ತೊಡಗಿಸಿಕೊಂಡಿರುವುದು ಮನೆ ಮಂದಿಗೆ ಕೊಂಚ ನೆಮ್ಮದಿ ನೀಡಿದೆ.

ಆದಾಗ್ಯೂ ಸಚಿವ ಖಾದರ್ ಹಾಗೂ ಸೌದಿ ಅರೇಬಿಯಾದಲ್ಲಿರುವ ದ.ಕ.ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಈ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ವಹಿಸಿ ರಹ್ಮತುಲ್ಲಾರನ್ನು ಊರಿಗೆ ಕಳುಹಿಸಿಕೊಡುವ ಬಗ್ಗೆ ಪ್ರಯತ್ನಿಸಬೇಕು ಎಂದು ಮನೆ ಮಂದಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X