Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಸ: ಪತಿ, ಅತ್ತೆಯ ಕಿರುಕುಳಕ್ಕೆ...

ಕಳಸ: ಪತಿ, ಅತ್ತೆಯ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ; ಅರೋಪ

ವಾರ್ತಾಭಾರತಿವಾರ್ತಾಭಾರತಿ24 Jun 2018 10:14 PM IST
share
ಕಳಸ: ಪತಿ, ಅತ್ತೆಯ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ; ಅರೋಪ

ಕಳಸ, ಜೂ. 24: ಪತಿ ಹಾಗೂ ಅತ್ತೆ ನೀಡುತ್ತಿದ್ದ ಮಾನಸಿಕ, ದೈಹಿಕ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾದ ಘಟನೆ ಮೂಡಿಗೆರೆ ತಾಲೂಕಿನ ಕಳಸ ಪಟ್ಟಣದಲ್ಲಿ ನಡೆದಿದೆ. 

ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಜಯಲಕ್ಷ್ಮಿ (27)ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಗೃಹಿಣಿಯ ಸಹೋದರ ಶ್ರೀಕಾಂತ್ ಪ್ರಭು ಎಂಬವರು ರಾಜೇಶ್ ಪ್ರಭು ಹಾಗೂ ಆತನ ತಾಯಿ ರೇಖಾ ಎಂಬವರ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಮಾನಸಿಕ, ದೈಹಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ರಾಜೇಶ್ ಪ್ರಭು ತಲೆ ಮರೆಸಿಕೊಂಡು ನಾಪತ್ತೆಯಾಗಿದ್ದಾನೆಂದು ತಿಳಿದು ಬಂದಿದೆ.

ಪಟ್ಟಣದ ರಾಮಚಂದ್ರ ಪ್ರಭು ಎಂಬವರ ಮಗ ರಾಜೇಶ್ ಪ್ರಭುಗೆ 2013ರಲ್ಲಿ ವಿವಾಹ ಮಾಡಿಕೊಡಲಾಗಿತ್ತು. ಒಂದೂವರೆ ವರ್ಷದ ತನಕ ಚೆನ್ನಾಗಿದ್ದ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ರಾಜೇಶ್ ತಂದೆ ರಾಮಚಂದ್ರ ಪ್ರಭು ಬಡ್ಡಿ ವ್ಯಾಪಾರ ಮಾಡುತ್ತಿದ್ದು, ರಾಜೇಶ್‍ನೂ ತಂದೆ ವ್ಯವಹಾರ ನೋಡಿಕೊಳ್ಳುತ್ತಿದ್ದ. ಈ ಹಿಂದೆ ಬೆಟ್ಟಿಂಗ್ ದಂಧೆಯಲ್ಲಿ ಭಾರೀ ಹಣ ಕಳೆದುಕೊಂಡ ರಾಜೇಶ್ ಈ ವಿಚಾರದಲ್ಲಿ ಪತ್ನಿ ಜಯಲಕ್ಷ್ಮಿಗೆ ಹಣಕ್ಕಾಗಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಜಯಲಕ್ಷ್ಮೀ ಪೋಷಕರು ಮನೆಯೊಂದನ್ನು ಮಾರಾಟ ಮಾಡಿ ರಾಜೇಶನಿಗೆ ಹಣ ನೀಡಿದ್ದರು ಎಂದು ತಿಳಿದು ಬಂದಿದೆ.

'ಹಣಕ್ಕಾಗಿ ರಾಜೇಶ್ ತನ್ನ ತಾಯಿ ರೇಖಾ ಜತೆ ಸೇರಿ ತನ್ನ ಸಹೋದರಿ ಜಯಲಕ್ಷ್ಮೀಗೆ ದೈಹಿಕ, ಮಾನಸಿಕ ಹಿಂದೆ ನೀಡುತ್ತಿದ್ದ, ಕಳೆದ ಮೂರು  ವರ್ಷಗಳಿಂದ ಪತಿ ಹಾಗೂ ಅತ್ತೆ ನೀಡುತ್ತಿದ್ದ ಮಾನಸಿಕ, ದೈಹಿಕ ಹಿಂಸೆಯಿಂದ ಜಯಲಕ್ಷ್ಮೀ ಮಾನಸಿಕವಾಗಿ ನೊಂದಿದ್ದಳು. ಕಳೆದ ಗುರುವಾರ ಮತ್ತೆ ತಾಯಿ ಮಗ ಸೇರಿಕೊಂಡು ದೈಹಿಕ ಹಿಂಸೆ ನೀಡಿದ್ದಾರೆ. ಅಲ್ಲದೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರೇಪಿಸಿದ್ದರಿಂದ ಅಂದು ಸಂಜೆ ಪತಿಯ ಮನೆಯಲ್ಲಿ ಪ್ಯಾನ್‍ಗೆ ನೇಣು ಬಿಗಿದುಕೊಂಡು ಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಗೃಹಿಣಿಯ ಸಹೋದರ ಶ್ರೀಕಾಂತ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕೋರಿದ್ದಾರೆ.

ದೂರಿನಂತೆ ಕಳಸ ಪೊಲೀಸರು ಶವದ ಮಹಜರು ನಡೆಸಿ ರಾಜೇಶ್ ಹಾಗೂ ಆತನ ತಾಯಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ರಾಜೇಶ್ ನಾಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆಂದು ತಿಳಿದು ಬಂದಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X