Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾನು ಮೋದಿಯ ‘ದೊಡ್ಡಮ್ಮ’ ಎಂದು ಕೇಂದ್ರ...

ತಾನು ಮೋದಿಯ ‘ದೊಡ್ಡಮ್ಮ’ ಎಂದು ಕೇಂದ್ರ ಮಾಹಿತಿ ಆಯೋಗಕ್ಕೆ ಪತ್ರ ಬರೆದ ವೃದ್ಧೆ !

ಅರ್ಜಿಯಲ್ಲಿ ಇದ್ದದ್ದೇನು ?

ವಾರ್ತಾಭಾರತಿವಾರ್ತಾಭಾರತಿ24 Jun 2018 10:18 PM IST
share
ತಾನು ಮೋದಿಯ ‘ದೊಡ್ಡಮ್ಮ’ ಎಂದು ಕೇಂದ್ರ ಮಾಹಿತಿ ಆಯೋಗಕ್ಕೆ ಪತ್ರ ಬರೆದ ವೃದ್ಧೆ !

ಹೊಸದಿಲ್ಲಿ, ಜೂ.24: ತನ್ನ ಒಡೆತನದಲ್ಲಿರುವ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಸರಕಾರಿ ಔಷಧಾಲಯದ ಲೀಸ್ ಒಪ್ಪಂದದ ನವೀಕರಣದ ಬಗ್ಗೆ ವಿವರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯ ‘ದೊಡ್ಡಮ್ಮ’ ಎಂದು ಹೇಳಿಕೊಂಡಿರುವ ಗುಜರಾತ್‌ನ 90ರ ಹರೆಯದ ವಿಧವೆಯೊಬ್ಬರು ಕೋರಿಕೆ ಸಲ್ಲಿಸಿದ್ದಾರೆ.

ದಹಿಬೆನ್ ನರೋತ್ತಮ್‌ದಾಸ್ ಮೋದಿ ಎಂಬ ವೃದ್ಧೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕಳೆದ ವಾರ ಮಾಹಿತಿ ಆಯುಕ್ತ ಶ್ರೀಧರ ಆಚಾರ್ಯಲು ನಡೆಸಿದ್ದಾರೆ. ತನ್ನ ಒಡೆತನದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಸರಕಾರಿ ಔಷಧಾಲಯದ ಲೀಸ್ ಒಪ್ಪಂದ ನವೀಕರಣದ ಕುರಿತು ವಿವರ ನೀಡುವಂತೆ ತಾನು ಕಾರ್ಮಿಕ ಸಚಿವಾಲಯಕ್ಕೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದು ಅಲ್ಲಿಂದ ದೊರೆತ ಉತ್ತರ ತೃಪ್ತಿಕರವಾಗಿಲ್ಲ ಎಂದು ದಹಿಬೆನ್ ತಿಳಿಸಿದ್ದಾರೆ.

ಕಟ್ಟಡವನ್ನು 1983ರ ಎಪ್ರಿಲ್ 11ರಂದು ಬೀಡಿ ಕಾರ್ಮಿಕರ ಕಲ್ಯಾಣ ನಿಧಿ ಔಷಧಾಲಯಕ್ಕೆ ತಿಂಗಳಿಗೆ 600 ರೂ. ಬಾಡಿಗೆಗೆ ನೀಡಲಾಗಿತ್ತು. ಬಳಿಕ 1998ರವರೆಗೆ ಬಾಡಿಗೆಯನ್ನು ಪರಿಷ್ಕರಿಸಲಾಗಿದ್ದು 1,500 ರೂ. ಬಾಡಿಗೆ ನಿಗದಿಯಾಗಿತ್ತು. ಆದರೆ ಆ ಬಳಿಕ ಬಾಡಿಗೆಯನ್ನು ಹೆಚ್ಚಿಸಲಾಗಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ(ಸಿಐಸಿ)ಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ದಹಿಬೆನ್ ತಿಳಿಸಿದ್ದಾರೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಕಾರ್ಮಿಕ ಇಲಾಖೆಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಲೀಸ್ ಒಪ್ಪಂದದ ವಿವರ, ನವೀಕರಣ, ಬಾಡಿಗೆ ನಿರ್ಧರಿಸುವ ಮಾನದಂಡ, ಪ್ರತೀ ಐದು ವರ್ಷಕ್ಕೊಮ್ಮೆ ಬಾಡಿಗೆ ನವೀಕರಿಸದಿರಲು ಕಾರಣ ಹಾಗೂ ಲೀಸ್ ಅವಧಿ ನವೀಕರಿಸದ ಕಾರಣ ಬಾಕಿಯಾಗಿರುವ ಮೊತ್ತವನ್ನು ಪಾವತಿಸಲು ಇಲಾಖೆ ಸಿದ್ಧವಿದೆಯೇ ಎಂಬ ವಿವರ ಕೋರಿದ್ದರು. ಆದರೆ ಇಲಾಖೆ ನೀಡಿದ ಉತ್ತರದಿಂದ ತೃಪ್ತಿಯಾಗದ ಕಾರಣ ಮಾಹಿತಿ ಆಯುಕ್ತರಿಗೆ ಅರ್ಜಿ ಸಲ್ಲಿಸಿದ್ದರು.

ತಾನು ಒಬ್ಬಂಟಿಯಾಗಿದ್ದು ಕಟ್ಟಡದಿಂದ ದೊರೆಯುವ 1,500 ರೂ. ಬಾಡಿಗೆ ಮಾತ್ರ ತನ್ನ ಜೀವನಾಧಾರವಾಗಿದೆ ಎಂದು ವೃದ್ಧ ಮಹಿಳೆ ಅರ್ಜಿಯಲ್ಲಿ ತಿಳಿಸಿದ್ದರು. ಬಾಡಿಗೆ ನವೀಕರಿಸಲು ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸುವಂತೆ ಕಟ್ಟಡದ ಮಾಲಕರಿಗೆ 2002ರ ಜುಲೈ 24 ಮತ್ತು 2008ರ ಮೇ 15ರಂದು ತಿಳಿಸಲಾಗಿದೆ. ಆದರೆ ಅವರಿಂದ ಉತ್ತರ ದೊರೆತಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಉಪಕರ ಆಯುಕ್ತ ಎಸ್.ಎಸ್. ಭೋಪ್ಲೆ ಆಯೋಗಕ್ಕೆ ಪತ್ರ ಬರೆದು ತಿಳಿಸಿದ್ದಾರೆ.

ಇದಕ್ಕೆ ಉತ್ತರಿಸಿದ ದಹಿಬೆನ್ ಪರ ವಕೀಲರು, ಮಹಿಳೆ ವಯೋವೃದ್ಧರಾಗಿರುವ ಕಾರಣ ದಸ್ತಾವೇಜೀಕರಣದ ಪ್ರತಿಯೊಂದು ಹಂತದಲ್ಲೂ ಲೋಕೋಪಯೋಗಿ ಇಲಾಖೆಗೆ ಖುದ್ದಾಗಿ ಹಾಜರಾಗಲು ಅಸಾಧ್ಯವಾಗಿದೆ. ಅಲ್ಲದೆ ದಹಿಬೆನ್ ಕೋರಿರುವ ಮಾಹಿತಿಯನ್ನು ಒದಗಿಸಿದರೆ ಮಾತ್ರ ಅವರು ದಾಖಲೆಪತ್ರಗಳನ್ನು ನೀಡಲು ಸಾಧ್ಯ ಎಂದು ತಿಳಿಸಿದ್ದಾರೆ.

ತಾನು 90ರ ಹರೆಯದ ವಿಧವೆಯಾಗಿದ್ದು ನನಗೆ ಮಕ್ಕಳು ಅಥವಾ ಸಹೋದರ, ಸಹೋದರಿಯರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಈ ರೀತಿಯ ಮಾನಸಿಕ ಕ್ರೌರ್ಯ ಅಸಹನೀಯವಾಗಿದೆ ಎಂದು ದಹಿಬೆನ್ ಕೇಂದ್ರ ಮಾಹಿತಿ ಆಯೋಗಕ್ಕೆ ಬರೆದಿರುವ ಮತ್ತೊಂದು ಪತ್ರದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X