Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುರಿದು ಬಿದ್ದ ಮಂಗಳೂರು-ಬಂಟ್ವಾಳ...

ಮುರಿದು ಬಿದ್ದ ಮಂಗಳೂರು-ಬಂಟ್ವಾಳ ಸಂಪರ್ಕಿಸುವ ಫಲ್ಗುಣಿ ಸೇತುವೆ

ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ, ಹಲವು ಪ್ರದೇಶಗಳ ಸಂಪರ್ಕ ಕಡಿತ

ವಾರ್ತಾಭಾರತಿವಾರ್ತಾಭಾರತಿ25 Jun 2018 7:06 PM IST
share
ಮುರಿದು ಬಿದ್ದ ಮಂಗಳೂರು-ಬಂಟ್ವಾಳ ಸಂಪರ್ಕಿಸುವ ಫಲ್ಗುಣಿ ಸೇತುವೆ

ಬಂಟ್ವಾಳ, ಜೂ. 25: ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿದ ಪರಿಣಾಮ ಬಂಟ್ವಾಳ ಮತ್ತು ಮಂಗಳೂರು ಸಂಪರ್ಕದ ಮುಲಾರಪಟ್ನದ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸುಮಾರು 38 ವರ್ಷದ ಹಳೇ ಸೇತುವೆಯ ಎರಡು ಸ್ಯಾಬ್‍ಗಳು ಸೋಮವಾರ ಸಂಜೆ ಕುಸಿದುಬಿದ್ದಿದೆ. ಆದರೆ ಈ ದುರಂತಕ್ಕೆ ಅಕ್ರಮ ಮರಳುಗಾರಿಕೆಯೇ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಘಟನೆಯು ಸೋಮವಾರ ಸಂಜೆ ಸುಮಾರು 6.15ಕ್ಕೆ ಘಟನೆ ನಡೆದಿದೆ ಎನ್ನಲಾಗಿದ್ದು, ಸೇತುವೆ  ಕುಸಿಯುವ ಮುನ್ನ ಬಂಟ್ವಾಳದಿಂದ ಆದ್ಯಪಾಡಿ ಕಡೆಗೆ ತೆರಳುವ ಬಸ್ ಸೇತುವೆ ದಾಟಿದ ಕಾರಣ ಭಾರಿ ಅನಾಹುತವೊಂದು ತಪ್ಪಿದ್ದು, ಯಾವುದೇ ಅಪಾಯ ಸಂಭವಿಸಿದ ಬಗ್ಗೆ ಇದುವರೆಗೂ ವರದಿಯಾಗಿಲ್ಲ.

ಅಲ್ಲದೆ, ಮಂಗಳೂರು ಉತ್ತರ ಕ್ಷೇತ್ರಕ್ಕೆ ಸೇರಿದ ಭಾಗದ ಎರಡನೆ ಮತ್ತು ಮೂರನೆ ಪಣ ಕುಸಿದುಬಿದ್ದಿದೆ. ಬಂಟ್ವಾಳ ಕ್ಷೇತ್ರದ ಭಾಗವೂ ಬಿರುಕುಬಿಟ್ಟಿದೆ.
ಬಂಟ್ವಾಳ ಸೋರ್ನಾಡು ಮೂಲಕ ಮಂಗಳೂರು ಕುಪ್ಪೆಪದವು ಕೈಕಂಬ, ಕಟೀಲು, ಇರುವೈಲು, ಎಡಪದವು, ಗಂಜಿಮಠ, ಸುರತ್ಕಲ್ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಮುಲಾರಪಟ್ನ ಈ ಸೇತುವೆ ಕುಸಿದು ಬಿದ್ದಿದ್ದು, ಈ ಭಾಗದ ಜನರಿಗೆ ಸಂಪರ್ಕ ಕಡಿತಗೊಂಡಿದೆ.

1979ನೆ ಇಸವಿಯಲ್ಲಿ ನಿರ್ಮಿಸಲಾಗಿರುವ ಈ ಸೇತುವೆ ಹಳೇ ತಂತ್ರಜ್ಞಾನದಲ್ಲಿ ಕಟ್ಟಲಾಗಿದೆ. ಎಡಪದವು-ಕುಪ್ಪೆಪದವು, ಅರಳ ಸೊರ್ನಾಡಿನ ಜಿಲ್ಲಾ ಮುಖ್ಯರಸ್ತೆಯ ಕಿ.ಮೀ. 7.40ರಲ್ಲಿ ಬರುವ ಮೂಲರಪಟ್ನ ಎಂಬಲ್ಲಿ ಬಂಟ್ವಾಳದ ಗಡಿಭಾಗದ ಮಂಗಳೂರು ತಾಲೂಕಿನ ವ್ಯಾಪ್ತಿಗೊಳಪಡುವ ಸೇತುವೆಯಾಗಿದೆ. 

ಕಪ್ಪು ಕಲ್ಲಿನಿಂದ ನಿರ್ಮಿಸಲಾದ ಸೇತುವೆಯು 176.40 ಮೀಟರ್ ಉದ್ದ, 20 ಮೀಟರ್ ಅಗಲ, 8 ಪಿಲ್ಲರ್‍ಗಳನ್ನೊಳಗೊಂಡಿದೆ. ಈ ಸೇತುವೆಯನ್ನು ಅಂದಿನ ಮುಖ್ಯಮಂತ್ರಿಯಾದ ಗುಂಡೂರಾವ್ ಅವರ ಕಾಲದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತಿದೆಯಾದರೂ, ಈ ಸೇತುವೆಯನ್ನು ಇದುವರೆಗೂ ಅಧಿಕೃತವಾಗಿ ಉದ್ಘಾಟನೆ ಮಾಡಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಪಿಲ್ಲರ್ ಗಳು ಶಿಥಿಲಗೊಂಡದ್ದೇ ಕುಸಿತಕ್ಕೆ ಕಾರಣ ಎಂದು ಪಿಡಬ್ಲುಡಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಘಟನೆ ಬಳಿಕ ಮುತ್ತೂರು ಕೊಳವೂರು ಮತ್ತು ಬಡಗಬೆಳ್ಳೂರು ಭಾಗಗಳಿಗೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಇದೀಗ ಸೇತುವೆಯ ಮಂಗಳೂರು ಮತ್ತು ಬಂಟ್ವಾಳ ಕಡೆ ಎರಡೂ ಕಡೆ ಬ್ಯಾರಿಕೇಡ್ ಹಾಕಲಾಗಿದೆ. ಪ್ರತಿನಿತ್ಯ ಇಲ್ಲಿ ಸುಮಾರು 15ರಷ್ಟು ಬಸ್‍ಗಳ ಸಂಚಾರ ಹಾಗೂ ನೂರಾರು ವಾಹನಗಳು ಸಂಚರಿಸುತ್ತವೆ ಎಂದು ತಿಳಿದುಬಂದಿದೆ.

ಬಂಟ್ವಾಳ ಭಾಗದಿಂದ ಪೊಳಲಿ ಕಡೆಗೆ ತೆರಳುವವರು ಈ ರಸ್ತೆಯನ್ನೂ ಅವಲಂಬಿಸಿದ್ದು, ಗುರುಪುರ ಕಡೆಯಿಂದ ಬಂಟ್ವಾಳಕ್ಕೆ ಬರಲೂ ಈ ರಸ್ತೆ ಅನುಕೂಲವಾಗುತ್ತಿದ್ದವು. ಸ್ಥಳೀಯರಿಗೆ ಕೊಳತ್ತಮಜಲು ಪೊಳಲಿ ಸಂಪರ್ಕಿಸುವ ತೂಗುಸೇತುವೆಯಿದ್ದು, ಇದರಲ್ಲಿ ವಾಹನ ಸಂಚಾರ ಸಾಧ್ಯವಿಲ್ಲ. ಇದರಿಂದ ಅರಳ, ಮುತ್ತೂರು, ಮೂಲರಪಟ್ನ ಭಾಗದ ಜನರು ಇದೇ ರಸ್ತೆಯ ಮೂಲಕ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಸೇತುವೆ ಕುಸಿತದ ಸುದ್ದಿ ಸಾಮಾಜಿಕ ಜಾಲತಾಣಗಳ ಮೂಲಕ ಹರಡತೊಡಗಿದಂತೆ ಎರಡೂ ಪಾರ್ಶ್ವಗಳಲ್ಲಿ ಜನರು ಜಮಾಯಿಸತೊಡಗಿದರು. 

ಭೇಟಿ-ಪರಿಶೀಲನೆ: 

ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಂಗಳೂರು ಉತ್ತರ ಶಾಸಕ ವೈ. ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ ಅವರೂ ಸ್ಥಳಕ್ಕೆ ಭೇಟಿ ನೀಡಿದರು. ಬಂಟ್ವಾಳ ತಹಶೀಲ್ದಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅಗ್ನಿಶಾಮಕ ದಳದ ಅಧಿಕಾರಿಗಳು, ಗ್ರಾಮಾಂತರ ಠಾಣೆ ಎಸ್ಸೈ ಪ್ರಸನ್ನ, ಟ್ರಾಫಿಕ್ ಎಸ್ಸೈ ಯಲ್ಲಪ್ಪ, ಜಿಪಂ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಮುಖಂಡರಾದ ಗೋವಿಂದ ಪ್ರಭು, ದೇವದಾಸ ಶೆಟ್ಟಿ, ಪ್ರಭಾಕರ ಪ್ರಭು, ದೇವಪ್ಪ ಪೂಜಾರಿ, ಉಮೇಶ ಅರಳ, ಉದಯ ಕುಮಾರ್ ರಾವ್, ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿದರು.

ಸೇತುವೆ ಮತ್ತೆ ನಿರ್ಮಿಸಲು ಮಳೆಗಾಲ ಮುಗಿದ ಬಳಿಕವಷ್ಟೇ ಸಾಧ್ಯ. ಹೀಗಾಗಿ ಬದಲಿ ವ್ಯವಸ್ಥೆಯ ಕುರಿತು ತಾನು ಮತ್ತು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಚರ್ಚಿಸಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಅಲ್ಲಿಯವರೆಗೆ ಸಹಕರಿಸಬೇಕು. 
ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಂಟ್ವಾಳ ಶಾಸಕ 

ಮುಲಾರಪಟ್ನ ಸೇತುವೆಯ ಸುರಕ್ಷತೆಯ ದೃಷ್ಟಿಯಿಂದ "ದ.ಕ. ಜಿಲ್ಲೆಯಲ್ಲಿ ನಿಷೇಧದ ನಡುವೆಯೂ ಮರುಳುಗಾರಿಕೆ-ಅಪಾಯದಲ್ಲಿ ಸೇತುವೆಗಳು" ಎಂಬ ಶೀರ್ಷಿಕೆಯಡಿ 'ವಾರ್ತಾಭಾರತಿ' ಪತ್ರಿಕೆಯು ಕಳೆದ ಅಕ್ಟೋಬರ್ 12ರಂದು ಇದರ ಬಗ್ಗೆ ಸುದೀರ್ಘ ವರದಿಯೊಂದನ್ನು ಪ್ರಕಟಿಸಿತ್ತು. ಅಧಿಕಾರಿಗಳ ಕಣ್ಣೆದುರಲ್ಲೇ ಪ್ರಾಕೃತಿಕ ಸಂಪತ್ತಿನ ಲೂಟಿ ಹಾಗೂ ಫಲ್ಗುಣಿ ಸೇತುವೆಯ ಪಿಲ್ಲರ್‌ಗಳು ಶಿಥಿಲಾವ್ಯವಸ್ಥೆಯಲ್ಲಿದೆ ಎಂದು ಜಿಲ್ಲಾಧಿಕಾರಿ, ಅಧಿಕಾರಿಗಳನ್ನು ವರದಿಯ ಮೂಲಕ ಎಚ್ಚರಿಸಿತ್ತು. ಆದರೆ, ಈ ಬಗ್ಗೆ ಗಂಭೀರತೆ ವಹಿಸದಿರುವ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X