Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಂಕಿತ 8 ಸಿಮಿ ಕಾರ್ಯಕರ್ತರ ಎನ್‌ಕೌಂಟರ್...

ಶಂಕಿತ 8 ಸಿಮಿ ಕಾರ್ಯಕರ್ತರ ಎನ್‌ಕೌಂಟರ್ ಪ್ರಕರಣ: ಪೊಲೀಸರಿಗೆ ನ್ಯಾಯಾಂಗ ಸಮಿತಿಯ ಕ್ಲೀನ್ ಚಿಟ್

ವಾರ್ತಾಭಾರತಿವಾರ್ತಾಭಾರತಿ25 Jun 2018 8:45 PM IST
share
ಶಂಕಿತ 8 ಸಿಮಿ ಕಾರ್ಯಕರ್ತರ ಎನ್‌ಕೌಂಟರ್ ಪ್ರಕರಣ: ಪೊಲೀಸರಿಗೆ ನ್ಯಾಯಾಂಗ ಸಮಿತಿಯ ಕ್ಲೀನ್ ಚಿಟ್

ಭೋಪಾಲ್,ಜೂ.25: ಇಲ್ಲಿನ ಕೇಂದ್ರೀಯ ಕಾರಾಗೃಹದಲ್ಲಿ 2016ರಲ್ಲಿ ನಡೆದ ಎಂಟು ಮಂದಿ ಶಂಕಿತ ಸಿಮಿ ಕಾರ್ಯಕರ್ತರ ಪೊಲೀಸ್ ಎನ್‌ಕೌಂಟರ್ ಪ್ರಕರಣದ ತನಿಖೆಗಾಗಿ, ಮಧ್ಯಪ್ರದೇಶದ ಬಿಜೆಪಿ ಸರಕಾರವು ನೇಮಿಸಿದ್ದ ನ್ಯಾಯಾಂಗ ಸಮಿತಿಯು, ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದೆ.

 ‘‘2016ರ ಅಕ್ಟೋಬರ್ 31ರಂದು ಪೊಲೀಸರು ನಡೆಸಿದ ಎನ್‌ಕೌಂಟರ್ ಆಗಿನ ಸನ್ನಿವೇಶದಲ್ಲಿ ಸಮಂಜಸವಾದುದಾಗಿತ್ತು. ಪೊಲೀಸರ ಈ ಕೃತ್ಯವು ಭಾರತೀಯ ಕ್ರಿಮಿನಲ್ ದಂಡಸಂಹಿತೆಯ ಸೆಕ್ಷನ್ 41 ಹಾಗೂ 46(2)(3)ರ ನಿಯಮಾವಳಿಗೆ ಅನುಗುಣವಾಗಿದೆ’’ ಎಂದು ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಎಸ್.ಕೆ. ಪಾಂಡೆ ನೇತೃತ್ವದ ಆಯೋಗವು ವರದಿಯಲ್ಲಿ ತಿಳಿಸಿದೆ.

ಸೋಮವಾರ ಬೆಳಗ್ಗೆ ಮಧ್ಯಪ್ರದೇಶ ವಿಧಾನಸಭಾ ಕಲಾಪದ ಶೂನ್ಯವೇಳೆಯಲ್ಲಿ ಈ ಏಕ ಸದಸ್ಯ ಆಯೋಗದ ವರದಿಯನ್ನು ಸಾಮಾನ್ಯ ಆಡಳಿತ ಖಾತೆಯ ಸಹಾಯಕ ಸಚಿವ ಲಾಲ್ ಸಿಂಗ್ ಆರ್ಯ ಮಂಡಿಸಿದರು.

ಜೈಲಿನಿಂದ ಪರಾರಿಯಾಗುತ್ತಿದ್ದ ಕೈದಿಗಳ ಮೇಲೆ ಅನಿವಾರ್ಯವಾಗಿ ಬಲಪ್ರಯೋಗಿಸಬೇಕಾಗಿ ಬಂದಿದ್ದರಿಂದ ಅವರು ಸಾವನ್ನಪ್ಪಬೇಕಾಯಿತು ಹಾಗೂ ಅದು ಆಗಿನ ಪರಿಸ್ಥಿತಿಯಲ್ಲಿ ಸಮಂಜಸವೇ ಆಗಿತ್ತು ಎಂದು ವರದಿಯು ಅಭಿಪ್ರಾಯಿಸಿದೆ.

 ಜೈಲಿನಿಂದ ಕೈದಿಗಳು ಪರಾರಿಯಾಗುವ ಅಥವಾ ತಲೆಮರೆಸಿಕೊಳ್ಳುವ ಘಟನೆಗಳು ಪುನರಾವರ್ತಿಸುವುದನ್ನು ತಡೆಯುವ ನಿಟ್ಟಿನಲ್ಲಿ ಸಮಿತಿಯೊಂದನ್ನು ನೇಮಿಸಬೇಕೆಂದು ತನಿಖಾ ಆಯೋಗವು ರಾಜ್ಯ ಸರಕಾರಕ್ಕೆ ಸಲಹೆ ನೀಡಿದೆ.

ಪಂಜಾಬ್ ರಾಜ್ಯದ ಮಾದರಿಯಲ್ಲಿ ಮಧ್ಯಪ್ರದೇಶ ಸರಕಾರ ಕೂಡಾ ಜೈಲು ಇಲಾಖೆಯ ಸಿಬ್ಬಂದಿಗಾಗಿ ತರಬೇತಿ ಸಂಸ್ಥೆಯೊಂದನ್ನು ಸ್ಥಾಪಿಸಬೇಕೆಂದು ಆಯೋಗವು ಶಿಫಾರಸು ಮಾಡಿದೆ. ಜೈಲು ಇಲಾಖೆಗೆ ಅಧಿಕಾರಿಗಳ ಹಾಗೂ ಸಿಬ್ಬಂದಿಯ ನೇಮಕದ ನೀತಿಯನ್ನು ಕೂಡಾ ಕಟ್ಟುನಿಟ್ಟಾಗಿ ಅನುಸರಿಸುವಂತೆಯೂ ಅದು ಸೂಚಿಸಿದೆ.

 ಜೈಲಿನ ಗೋಡೆಗಳು ಹೆಚ್ಚು ಎತ್ತರವಿಲ್ಲದೆ ಇದ್ದುದರಿಂದ ವಿಚಾರಣಾಧೀನ ಕೈದಿಗಳಿಗೆ ಸುಲಭದಲ್ಲಿ ಪರಾರಿಯಾಗಲು ಸಾಧ್ಯವಾಯಿತೆಂದು ಅಭಿಪ್ರಾಯಿಸಿರುವ ಆಯೋಗವು, ಜೈಲಿನ ಗೋಡೆಯ ಎತ್ತರವನ್ನು ಹೆಚ್ಚಿಸುವಂತೆ ಶಿಫಾರಸು ಮಾಡಿದೆ.

ಮೌನ ವಹಿಸಿದ ಕಾಂಗ್ರೆಸ್

ಈ ಹಿಂದೆ ಶಂಕಿತ ಸಿಮಿ ಕಾರ್ಯಕರ್ತರ ಎನ್‌ಕೌಂಟರ್ ಪ್ರಕರಣವನ್ನು ಪ್ರಮುಖ ರಾಜಕೀಯ ವಿಷಯವನ್ನಾಗಿ ಪರಿಗಣಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಆಯೋಗದ ವರದಿಯ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲು ನಿರಾಕರಿಸಿದೆ.

ಪರಾರಿಯಾದ ಕೆಲವೇ ತಾಸುಗಳಲ್ಲಿ ನಡೆದಿತ್ತು ಎನ್‌ಕೌಂಟರ್

2016ರ ಅಕ್ಟೋಬರ್ 30-31ರ ಮಧ್ಯರಾತ್ರಿಯ ವೇಳೆ ಬಿಗಿಭದ್ರತೆಯ ಭೋಪಾಲ್ ಸೆಂಟ್ರಲ್ ಜೈಲಿನಿಂದ ಶಂಕಿತ ಸಿಮಿ ಕಾರ್ಯಕರ್ತರೆನ್ನಲಾದ ಎಂಟು ಮಂದಿ ವಿಚಾರಣಾಧೀನ ಕೈದಿಗಳು, ಕೀಲಿಕೈ ಬಳಸಿ ತಾವಿದ್ದ ಸೆಲ್‌ನಿಂದ ಹೊರಬಂದಿದ್ದರು ಎನ್ನಲಾಗಿದೆ. ಜೈಲುಕಾವಲುಗಾರ ರಾಮ್‌ಶಂಕರ್ ಯಾದವ್‌ರನ್ನು ಹತ್ಯೆಗೈದ ಅವರು ಬೆಡ್‌ಶೀಟ್‌ಗಳು ಹಾಗೂ ಮರದತುಂಡುಗಳನ್ನು ಏಣಿಯಾಗಿ ಬಳಸಿಕೊಂಡು, ಜೈಲು ಗೋಡೆಯೇರಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ. ಕೆಲವೇ ತಾಸುಗಳ ಬಳಿಕ ಪೊಲೀಸರು ಭೋಪಾಲ್ ನಗರದ ಹೊರವಲಯಲ್ಲಿರುವ ಮಾಣಿಖೇಡಿ ಕೋಟ್ ಪಥರ್ ಗ್ರಾಮದಲ್ಲಿ ಎನ್‌ಕೌಂಟರ್ ನಡೆಸಿ, ಈ ಎಂಟು ಮಂದಿಯನ್ನು ಹತ್ಯೆಗೈದಿದ್ದರು. ಜೈಲ್‌ಬ್ರೇಕ್ ಹಾಗೂ ಆನಂತರ ನಡೆದ ಶಂಕಿತ ಸಿಮಿ ಕಾರ್ಯಕರ್ತರ ಹತ್ಯೆ ಪ್ರಕರಣದ ಬಗ್ಗೆ ತನಿಖೆಗಾಗಿ 2016ರ ನವೆಂಬರ್ 7ರಂರು ಶಿವರಾಜ್‌ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರಕಾರವು ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಿತ್ತು.

‘ಎನ್‌ಕೌಂಟರ್ ಅನಿವಾರ್ಯವಾಗಿತ್ತು’

 ಹತ್ಯೆಯಾದವರನ್ನು ಶರಣಾಗತರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಅದಕ್ಕೆ ಒಪ್ಪುವ ಬದಲು ಪೊಲೀಸರು ಹಾಗೂ ಸಾರ್ವಜನಿಕರ ಮೇಲೆ ಗುಂಡುಹಾರಿಸತೊಡಗಿದ್ದರು. ಹೀಗಾಗಿ ಕಾನೂನುಬದ್ಧವಾದ ಕಸ್ಟಡಿಯಿಂದ ಪರಾರಿಯಾಗಿದ್ದ ವ್ಯಕ್ತಿಗಳ ಮೇಲೆ ಗುಂಡೆಸೆಯುವುದು ಅತ್ಯವಶ್ಯವಾಗಿತ್ತು. ಪೊಲೀಸರು ಗುಂಡುಹಾರಿಸತೊಡಗಿದ ಬಳಿಕವೂ ಅವರು ಶರಣಾಗುವ ಇಚ್ಛೆಯನ್ನು ಪ್ರದರ್ಶಿಸಲಿಲ್ಲ. ಇದರ ಪರಿಣಾಮವಾಗಿ ಅವರು ಗುಂಡೇಟಿನಿಂದ ಗಾಯಗೊಂಡು, ಸ್ಥಳದಲ್ಲೇ ಸಾವನ್ನಪ್ಪಿದರು’’ ಎಂದು ಆಯೋಗವು ಅಫಿದಾವಿತ್‌ನಲ್ಲಿ ನೀಡದ ವಿವರಣೆಗಳನ್ನು ಉಲ್ಲೇಖಿಸಿ ತಿಳಿಸಿದೆ.

ಈ ಎಂಟು ಮಂದಿಯೂ ಮರಣದಂಡನೆ ಹಾಗೂ ಜೀವಾವಧಿ ಶಿಕ್ಷೆ ವಿಧಿಸಬಹುದಾದಂತಹ ಅಪರಾಧಗಳು ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ವಿಚಾರಣೆಯನ್ನೆದುರಿಸುತ್ತಿದ್ದರೆಂದು ಆಯೋಗವು ವರದಿಯಲ್ಲಿ ಉಲ್ಲೇಖಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X