Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಹಿಂದೆ ಬಿಜೆಪಿ ಐದು ವರ್ಷ...

ಈ ಹಿಂದೆ ಬಿಜೆಪಿ ಐದು ವರ್ಷ ಜಿಎಸ್‌ಟಿಯನ್ನು ವಿರೋಧಿಸಿದ್ದಾದರೂ ಯಾಕೆ: ಚಿದಂಬರಂ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ25 Jun 2018 9:34 PM IST
share
ಈ ಹಿಂದೆ ಬಿಜೆಪಿ ಐದು ವರ್ಷ ಜಿಎಸ್‌ಟಿಯನ್ನು ವಿರೋಧಿಸಿದ್ದಾದರೂ ಯಾಕೆ: ಚಿದಂಬರಂ ಪ್ರಶ್ನೆ

ಹೊಸದಿಲ್ಲಿ, ಜೂ.25: ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ)ಯನ್ನು ಪ್ರಾಮಾಣಿಕತೆಯ ಆಚರಣೆ ಎಂದು ವ್ಯಾಖ್ಯಾನಿಸಿರುವ ಕೇಂದ್ರ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಈ ಮಾತು ನಿಜವಾಗಿದ್ದರೆ 2014ಕ್ಕಿಂತ ಮೊದಲ ಐದು ವರ್ಷಗಳ ಕಾಲ ಬಿಜೆಪಿ ಜಿಎಸ್‌ಟಿಯನ್ನು ವಿರೋಧಿಸಿದ್ದಾದರೂ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಜಿಎಸ್‌ಟಿಯ ಅನುಷ್ಠಾನದ ನಂತರ ದೇಶದ ಲಕ್ಷಾಂತರ ವ್ಯಾಪಾರಿಗಳು ಮತ್ತು ರಫ್ತುದಾರರು ತಮ್ಮ ಹಣವನ್ನು ತಡೆಹಿಡಿಯಲಾಗಿರುವ ಮತ್ತು ಸರಿಯಾಗಿ ಪುನರ್‌ಪಾವತಿ ಮಾಡಲಾಗದ ಕಾರಣ ಸಂಕಷ್ಟಕ್ಕೀಡಾಗಿರುವುದು ಸರಕಾರಕ್ಕೆ ತಿಳಿದಿಲ್ಲವೇ ಎಂದು ಹಿರಿಯ ಕಾಂಗ್ರೆಸ್ ನಾಯಕ ಟ್ವೀಟ್ ಮಾಡಿದ್ದಾರೆ. ಜಿಎಸ್‌ಟಿಯು ಸಮಗ್ರತೆಯ ವಿಜಯ ಮತ್ತು ಪ್ರಾಮಾಣಿಕತೆಯ ಆಚರಣೆಯಾಗಿದ್ದರೆ ಐದು ವರ್ಷಗಳ ಕಾಲ ಬಿಜೆಪಿ ಅದಕ್ಕೆ ತಡೆಯೊಡ್ಡಿದ್ದಾದರೂ ಯಾಕೆ?, ಪ್ರಧಾನಿ, ವಿತ್ತ ಸಚಿವರು ಹಾಗೂ ಪ್ರಭಾರ ವಿತ್ತ ಸಚಿವರು ಜಿಎಸ್‌ಟಿಯ ಅನುಷ್ಠಾನದಲ್ಲಿ ಉಂಟಾಗಿರುವ ಲೋಪಗಳ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಎಂದು ಮಾಜಿ ವಿತ್ತ ಸಚಿವರು ಪ್ರಶ್ನಿಸಿದ್ದಾರೆ.

ಜಿಎಸ್‌ಟಿಯನ್ನು ಸಹಕಾರ ಸಂಯುಕ್ತ ವ್ಯವಸ್ಥೆಯ ಉತ್ತಮ ಉದಾಹರಣೆ ಎಂದು ವ್ಯಾಖ್ಯಾನಿಸಿರುವ ಪ್ರಧಾನಿ ಮೋದಿ, ನೂತನ ವ್ಯವಸ್ಥೆಯು ಪ್ರಾಮಾಣಿಕತೆಯ ಹಬ್ಬವಾಗಿದ್ದು, ದೇಶದಲ್ಲಿ ಇನ್ಸ್‌ಪೆಕ್ಟರ್ ರಾಜ್‌ಗೆ ಕೊನೆಹಾಡಿದೆ ಎಂದು ರವಿವಾರ ತಿಳಿಸಿದ್ದರು.

ಸರಕಾರವು ತಾತ್ಕಾಲಿಕ ಜಿಎಸ್‌ಟಿಆರ್-3ಬಿ ಫಾರ್ಮನ್ನು ಎಷ್ಟು ಸಮಯ ಬಳಸಬಹುದು ಎಂದು ಚಿದಂಬರಂ ಪ್ರಶ್ನಿಸಿದ್ದು ಹನ್ನೆರಡು ತಿಂಗಳು ಕಳೆದರೂ ಜಿಎಸ್‌ಟಿಆರ್-ಫಾರ್ಮ್2 ಹಾಗೂ ಜಿಎಸ್‌ಟಿಆರ್-ಫಾರ್ಮ್3ಯನ್ನು ಯಾಕೆ ಪರಿಚಯಿಸಿಲ್ಲ ಎಂದು ಕೇಳಿದ್ದಾರೆ. ಸರಕು ಹಾಗೂ ಸೇವಾ ತೆರಿಗೆಯಲ್ಲಿ ನೋಂದಾವಣೆಗೊಂಡಿರುವ ಎಲ್ಲರೂ ಜಿಎಸ್‌ಟಿಆರ್ 3ಬಿ ಫಾರ್ಮನ್ನು ತುಂಬಿಸುವುದು ಕಡ್ಡಾಯವಾಗಿದೆ. ಜಿಎಸ್‌ಟಿಆರ್ 3ಬಿ ಒಂದು ಸರಳ ತೆರಿಗೆ ಪಾವತಿ ಫಾರ್ಮ್ ಆಗಿದ್ದು ಜುಲೈ ಮತ್ತು ಆಗಸ್ಟ್ ತಿಂಗಳ ತೆರಿಗೆ ಪಾವತಿಗಾಗಿ ಅಬಕಾರಿ ಮತ್ತು ಕಸ್ಟಮ್ಸ್ ಕೇಂದ್ರ ಮಂಡಳಿಯಿಂದ ಪರಿಚಯಿಸಲ್ಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X