Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಜೂ.28: ಯುಎಇ-ಒಮಾನಿನಲ್ಲಿ 'ಹೊಟ್ಟೆಗಾಗಿ...

ಜೂ.28: ಯುಎಇ-ಒಮಾನಿನಲ್ಲಿ 'ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ' ಚಿತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ26 Jun 2018 11:01 AM IST
share
ಜೂ.28: ಯುಎಇ-ಒಮಾನಿನಲ್ಲಿ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಚಿತ್ರ ಬಿಡುಗಡೆ

ದುಬೈ, ಜೂ.26: ಕರ್ನಾಟಕದಲ್ಲಿ ಕನ್ನಡ ಸಿನಿ ರಸಿಕರ ಮನಗೆದ್ದ ಹಿರಿಯ ನಟ ಅನಂತ್‌ನಾಗ್‌ ಮತ್ತು ರಾಧಿಕಾ ಚೇತನ್‌ ಅಭಿನಯದ 'ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ' ಚಿತ್ರ ಜೂನ್ 28 ರಂದು ಯುಎಇ ಮತ್ತು ಒಮಾನ್ ನಲ್ಲಿ ಬಿಡುಗಡೆಯಾಗಲಿದೆ.

ಅಂದು ದುಬೈ-ಶಾರ್ಜಾ ನೋವಾ ಸಿನೆಮಾ, ವಾಕ್ಸ್ ಸಿನೆಮಾ, ಅಬುಧಾಬಿಯ ಸ್ಟಾರ್ ಸಿನೆಮಾ, ಆಸ್ಕರ್ ಸಿನೆಮಾ ಹಾಗೂ ಒಮಾನಿನ ಸ್ಟಾರ್ ಸಿನೆಮಾ ಮಂದಿರಗಳಲ್ಲಿ ಈ ಚಿತ್ರ ತೆರೆ ಕಾಣಲಿದೆ. ಸಿನೆಮಾದ ಪ್ರದರ್ಶನದ ಸಮಯ ಜೂ.27ರಂದು ಬಿಡುಗಡೆಯಾಗಲಿದೆ.

ಎರಡು ತಲೆಮಾರಿನ ಮನಸ್ಸುಗಳ ತಳಮಳ, ಲಿವ್ ಇನ್‌ ರಿಲೇಷನ್‌ಶಿಪ್‌ ಸಾಧಕ-ಬಾಧಕಗಳ ಮೇಲೆ ಬೆಳಕು ಚೆಲ್ಲುವ ಈ ಸಿನೆಮಾದ ಕಥೆ ಕನ್ನಡ ಚಿತ್ರರಂಗಕ್ಕೆ ಅಪರೂಪ. ಅನಂತನಾಗ್‌ ಅವರನ್ನು ಮನಸ್ಸಿನಲ್ಲಿಟ್ಟುಕೊಂಡೇ ನಿರ್ದೇಶಕ ನರೇಂದ್ರ ಬಾಬು ಚಿತ್ರಕತೆ ಹೆಣೆದಂತಿದೆ. ಇದು ಅನಂತನಾಗ್‌ ಅವರ ಸಿನಿಮಾ ಬದುಕಿನ ಅಪರೂಪದ ಪಾತ್ರವೂ ಆಗಿದೆ. 

ಈ ಸಿನೆಮಾವನ್ನು ಕಲರ್ಸ್‌ ಆಫ್ ಆನೇಕಲ್‌ ಹೆಸರಿನಲ್ಲಿ ಸುದರ್ಶನ್‌, ರಾಮಮೂರ್ತಿ ಹಾಗೂ ಮಂಗಳೂರು ಮೂಲದ ದುಬೈಯ ಹೆಸರಾಂತ ಉದ್ಯಮಿ, ಗಾಯಕರು ಆಗಿರುವ ಹರೀಶ್  ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ದಂಪತಿಯ ಆಕ್ಮೇ ಮೂವೀಸ್ ಇಂಟರ್ ನ್ಯಾಶನಲ್ ಬ್ಯಾನರಿನಡಿಯಲ್ಲಿ ನಿರ್ಮಿಸಲಾಗಿದೆ.  

ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ, ಪ್ರದರ್ಶನ  ಕಂಡಿರುವ ಈ ಸಿನೆಮಾದ ಬಗ್ಗೆ ಬಹುತೇಕ ಮಾಧ್ಯಮಗಳು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿವೆ.
ನಿವೃತ್ತಿಯ ನಂತರ ಕೆಲಸಕ್ಕೆ ಸೇರಿಕೊಳ್ಳುವ ಶ್ಯಾಮ್ ಪ್ರಸಾದ್‌ (ಅನಂತನಾಗ್), ಆತ್ಮವಿಶ್ವಾಸವೇ ಮೈವೆತ್ತಂತಿರುವ ಕಂಪೆನಿ ಮುಖ್ಯಸ್ಥೆ ಶ್ರಾವ್ಯಾ, ಗೆಳೆಯನೊಂದಿಗಿನ ಆಕೆಯ ಲಿವ್‌ ಇನ್‌ ರಿಲೇಷನ್‌ಶಿಪ್‌, ಬದ್ಧತೆಯಿಲ್ಲದ ಸಂಬಂಧದಿಂದಾಗಿ ನಲುಗುವ ಮನಸ್ಸುಗಳ ಬಗ್ಗೆ ಚಿತ್ರದಲ್ಲಿ ಪ್ರಸ್ತಾಪವಾಗುತ್ತದೆ. ಹಳೆಯ ತಲೆಮಾರಿನ ವ್ಯಕ್ತಿ ಶ್ಯಾಮ್‌ ಪ್ರಸಾದ್ ತಮ್ಮ ಜೀವನಪ್ರೀತಿಯಿಂದ‌ ಕಚೇರಿಯ ಹೊಸ ತಲೆಮಾರಿನ ಹುಡುಗರಿಗೆ ಸ್ಫೂರ್ತಿಯಾಗುತ್ತಾರೆ.
ದುಬೈಯ ಹಲವೆಡೆ ಈ ಸಿನೆಮಾದ ಸನ್ನಿವೇಶ ಹಾಗೂ ಹಾಡನ್ನು ಚಿತ್ರೀಕರಿಸಲಾಗಿದ್ದು, ಉತ್ತಮವಾಗಿ ಮೂಡಿಬಂದಿದೆ.

ಇಡೀ ಸಿನಿಮಾದಲ್ಲಿ ಪ್ರಮುಖವಾಗಿ ಕಾಣಿಸುವುದು ಅನಂತನಾಗ್‌ ಮತ್ತು ರಾಧಿಕಾ ಚೇತನ್ ಪಾತ್ರಗಳು. ಅನಂತನಾಗ್‌ ಅವರಿಗೆ ಅತ್ಯಂತ ಸೂಕ್ತವಾಗಿ ಹೊಂದುವ ಪಾತ್ರವಿದು. ಎಂದಿನಂತೆ ಅವರು ಪಾತ್ರವನ್ನು ಜೀವಿಸಿದ್ದಾರೆ. ನಟಿ ರಾಧಿಕಾ ಚೇತನ್‌ ಅಚ್ಚುಕಟ್ಟಾದ ಪಾತ್ರ ನಿರ್ವಹಣೆಯಿಂದಾಗಿ ಗಮನ ಸೆಳೆಯುತ್ತಾರೆ. ಕಲಾವಿದರ ಭಾವಗಳನ್ನು ಛಾಯಾಗ್ರಾಹಕ ಪಿ.ಕೆ.ಎಚ್.ದಾಸ್‌ ಸೊಗಸಾಗಿ ಸೆರೆಹಿಡಿದಿದ್ದಾರೆ. ರಾಮಚಂದ್ರ ಹಡಪದ ಸಂಗೀತದಲ್ಲಿ ಮೂಡಿಬಂದಿರುವ ಹಾಡುಗಳು ಮತ್ತೆ ಮತ್ತೆ ಕೇಳುವಂತೆ ಮಾಡಿಬಂದಿದೆ.

ನೋವಾ ಸಿನೆಮಾ, ವಾಕ್ಸ್ ಸಿನೆಮಾ, ಅಬುಧಾಬಿಯ ಸ್ಟಾರ್ ಸಿನೆಮಾ, ಆಸ್ಕರ್ ಸಿನೆಮಾ ಹಾಗು ಒಮಾನಿನ ಸ್ಟಾರ್ ಸಿನೆಮಾ ಮಂದಿರಗಳಲ್ಲಿ ಈಗಾಗಲೇ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X