Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಳೆ ‘ಪಿಂಚಣಿ’ ಜಾರಿಗೊಳಿಸದಿದ್ದಲ್ಲಿ...

ಹಳೆ ‘ಪಿಂಚಣಿ’ ಜಾರಿಗೊಳಿಸದಿದ್ದಲ್ಲಿ ಉಗ್ರ ಹೋರಾಟ: ಸರ್ಕಾರಿ ಎನ್ಪಿಎಸ್ ನೌಕರರರಿಂದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ27 Jun 2018 8:29 PM IST
share

ಪುತ್ತೂರು, ಜೂ. 27: ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನವನ್ನು ಕೇಂದ್ರ ಸರ್ಕಾರದ ಮಾದರಿಯಲ್ಲೇ 2006ರ ಎಪ್ರಿಲ್ 1ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸದಿದ್ದಲ್ಲಿ ‘ರಕ್ತಕೊಟ್ಟೇವು-ಪಿಂಚಣಿ ಬಿಡೆವು’ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಬ್ರಾಹಿಂ ಎಂ ತಿಳಿಸಿದ್ದಾರೆ.

ಅವರು ಬುಧವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಎನ್‌ಪಿಎಸ್ (ಹೊಸ ಪಿಂಚಣಿ ಸ್ಕೀಂ) ನೀತಿಯನ್ನು ರದ್ದು ಪಡಿಸಿ, ಒಪಿಎಸ್ (ಹಳೆಯ ಪಿಂಚಣಿ ಸ್ಕೀಂ) ಜಾರಿಗೊಳಿಸುವ ಮೂಲಕ 2006ಕ್ಕಿಂತ ಮೊದಲು ರಾಜ್ಯ ಸರ್ಕಾರಿ ನೌಕರರಿಗೆ ಕೊಡುತ್ತಿದ್ದ ಪಿಂಚಣಿಯನ್ನು ನಮಗೂ ಕೊಡಬೇಕು ಎಂದು ಆಗ್ರಹಿಸಿದರು.

ನಿಶ್ಚಿತ ಪಿಂಚಣಿಯನ್ನು ಮರುಸ್ಥಾಪಿಸುವ ಕುರಿತಂತೆ ಕಳೆದ ಜನವರಿ 20ರಂದು ‘ಫ್ರೀಡಂ ಪಾರ್ಕ್ ಚಲೋ’ ಚಳುವಳಿ ಒಂದು ಮೈಲುಗಲ್ಲು ಆಗಿದ್ದು, ನಮ್ಮ ಹೋರಾಟವನ್ನು ಬೆಂಬಲಿಸಿ ಮಾಜಿ ಪ್ರಧಾನಿ ಎಚ್.ಡಿ,ದೇವೇ ಗೌಡ ಅವರು ನೀಡಿರುವ ಹೇಳಿಕೆ ಮತ್ತು ಸಕಾರಾತ್ಮಕ ಸ್ಪಂದನೆ , ಇದೇ ಅಂಶ ಜೆಡಿಎಸ್ ಪ್ರಣಾಳಿಕೆಯಲ್ಲಿ ಮೂಡಿ ಬಂದಿರುವುದು ನೌಕರರ ಪಾಲಿಗೆ ಆಶಾದಾಯಕವಾಗಿದೆ ಎಂದರು. ಪ್ರಸ್ತುತ ಸರ್ಕಾರ ನಿವೃತ್ತಿ ವೇತನ ಹಾಗೂ ಮರಣ ಉಪಧನ ಮತ್ತು ಪಿಂಚಣಿಯನ್ನು 2018ರ ಎಫ್ರಿಲ್ 1ರಿಂದ ಜಾರಿಗೊಳಿಸಿದೆ .ಎನ್‌ಪಿಎಸ್ ನೌಕರರ ಖಾತೆಯಲ್ಲಿ ಇರುವ ತಮ್ಮ ಪಾಲಿನ ವಂತಿಗೆಯ ಶೇ.25ರಷ್ಟನ್ನು ಅನಿವಾರ್ಯ ಸಂದರ್ಭದಲ್ಲಿ ಹಿಂಪಡೆಯುವಂತೆ ಆದೇಶಿಸಿದೆ. ಈ ಆದೇಶಗಳು ಸ್ವಾಗತಾರ್ಹವಾಗಿದ್ದರೂ ಸರ್ಕಾರ ಕೆಲವೊಂದು ಷರತ್ತುಗಳನ್ನು ವಿಧಿಸಿರುವುದನ್ನು ನಾವು ಖಂಡಿಸುತ್ತೇವೆ ಎಂದರು.

ಮರಣ ಹೊಂದಿರುವ ಎಸ್‌ಪಿಎಸ್ ನೌಕರರ ಅವಲಂಬಿತ ಕುಟುಂಬಕ್ಕೆ ಪಿಂಚಣಿ ನೀಡಲು ಪ್ರಸ್ತುತ ವಿಧಿಸಿರುವ ಷರತ್ತನ್ನು ಮಾರ್ಪಡಿಸಿ ನೌಕರನ ಖಾತೆಗೆ ಸರ್ಕಾರ ಪಾವತಿಸಿರುವ ತನ್ನಪಾಲಿನ ಮೊತ್ತವನ್ನು ಮಾತ್ರ ಹಿಂಪಡೆಯುವ ಪರತ್ತಿನೊಂದಿಗೆ 2016ರ ಎಫ್ರಿಲ್ 1ರಿಂದಲೇ ಕುಟುಂಬ ಪಿಂಚಣಿ ಪಡೆಯಲು ಅವಕಾಶ ನೀಡಬೇಕು . ಎಸ್‌ಪಿಎಸ್ ನೌಕರರ ಕಾಫಿಯಲ್ಲಿರುವ ನೌಕರರ ಪಾಲಿನ ವಂತಿಗೆಯಲ್ಲಿ ಶೇ.25ರಷ್ಟನ್ನು ಹಿಂಪಡೆಯುವ ಷರತ್ತನ್ನು ಮಾರ್ಪಡಿಸಿ,ನೌಕರರ ಖಾತೆಯಲ್ಲಿನ ಹುಟ್ಟು ವಂತಿಕೆಯಲ್ಲಿ (ನೌಕರ+ಸರ್ಕಾರ) ಶೇ.25ರಷ್ಟನ್ನು ಹಿಂಪಡೆಯಲು ಅವಕಾಶ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಸಂಘವು ಹೋರಾಟದ ಹಾದಿ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ ಅವರು ‘ರಕ್ತ ಕೊಟ್ಟೇವು-ಪಿಂಚಣಿ ಬಿಡೆವು’ ನಮ್ಮ ಮುಂದಿನ ಹೋರಾಟವಾಗಿದ್ದು, ಏಕಕಾಲದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಸರ್ಕಾರಿ ಎನ್‌ಪಿಎಸ್ ನೌಕರರು ರಕ್ತದಾನ ಮಾಡುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಆದರ್ಶ ಬಂಟ್ವಾಳ, ಪುತ್ತೂರು ತಾಲೂಕು ಘಟಕದ ಕಾರ್ಯದರ್ಶಿ ವಿಮಲ್‌ಕುಮಾರ್ ನೆಲ್ಯಾಡಿ, ತಾಲೂಕು ಸಂಚಾಲಕ ಧರ್ಮಾನಂದ ಮತ್ತು ತಾಲೂಕು ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಅಶ್ರಫ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X