Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಟ್ಟೆ ತ್ಯಾಜ್ಯ ವಿಲೇವರಿ ಘಟಕಕ್ಕೆ...

ನಿಟ್ಟೆ ತ್ಯಾಜ್ಯ ವಿಲೇವರಿ ಘಟಕಕ್ಕೆ ಪಡುಬಿದ್ರೆ ಗ್ರಾಪಂ ನಿಯೋಗ ಭೇಟಿ

ವಾರ್ತಾಭಾರತಿವಾರ್ತಾಭಾರತಿ27 Jun 2018 8:32 PM IST
share
ನಿಟ್ಟೆ ತ್ಯಾಜ್ಯ ವಿಲೇವರಿ ಘಟಕಕ್ಕೆ ಪಡುಬಿದ್ರೆ ಗ್ರಾಪಂ ನಿಯೋಗ ಭೇಟಿ

ಪಡುಬಿದ್ರೆ, ಜೂ. 27: ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ವಹಿಸಿ ಜಿಲ್ಲೆಯಲ್ಲಿ ಪೈಲೆಟ್ ಗ್ರಾಮ ಪಂಚಾಯ್ತಿಯಾಗಿ ಆಯ್ಕೆಯಾದ ಉಡುಪಿ ಜಿಲ್ಲಾಧಿಕಾರಿಯವರ ಮೆಚ್ಚುಗೆಗೆ ಪಾತ್ರವಾದ ನಿಟ್ಟೆ ಗ್ರಾಮ ಪಂಚಾಯ್ತಿಗೆ ಪಡುಬಿದ್ರೆ ಗ್ರಾಮ ಪಂಚಾಯ್ತಿ ನಿಯೋಗ ಬುಧವಾರ ಭೇಟಿ ನೀಟಿ ಮಾಹಿತಿ ಪಡೆದುಕೊಂಡರು.

ನಿಟ್ಟೆ ಗ್ರಾಮ ಪಂಚಾಯ್ತಿ ಕಟ್ಟಡದ ಆವರಣದಲ್ಲೇ ಅತ್ಯಂತ ಸುವ್ಯಸ್ಥಿತವಾಗಿ ಕೇವಲ ಐವರು ಸ್ವಯಂ ಸೇವಕರ ನೆರವಿನೊಂದಿಗೆ ವ್ಯವಸ್ಥಿತಿ ರೀತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ನಡೆಸಿ ಜಿಲ್ಲೆಯಲ್ಲೇ ನಿಟ್ಟೆ ಗ್ರಾಮ ಪಂಚಾಯಿತಿ ಗಮನಸೆಳೆದಿದೆ.

ಈಗಾಗಲೇ ಎರಡು ಹಂತದಲ್ಲಿ ತ್ಯಾಜ್ಯ ವಿಲೇವಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ ನಿಟ್ಟೆ ಮೂರನೇ ಹಂತದಲ್ಲಿ ಸರ್ಕಾರದಿಂದ ಒದಗಿಸಲಾದ ಒಂದೂವರೆ ಎಕ್ರೆ ಜಾಗದಲ್ಲಿ ಬ್ರಹತ್ ಮಟ್ಟದ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಮುಂದಾಗಿದೆ. ಈ ಆಧುನಿಕ ಘಟಕ ಆರಂಭಗೊಂಡಲ್ಲಿ ನಿಟ್ಟೆಯಲ್ಲದೆ ಆಸುಪಾಸಿನ ಗ್ರಾಮಗಳ ತ್ಯಾಜ್ಯಗಳನ್ನೂ ಸ್ವೀಕರಿಸುವ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಪಂಚಾಯ್ತಿ ಪಿಡಿಒ ಮಾಧವರಾವ್ ದೇಶಪಾಂಡೆ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸುಮಾರು 3 ಸಾವಿರ ಮನೆಗಳಿರುವ ನಿಟ್ಟೆಯಲ್ಲಿ ಪ್ರಥಮ ಹಂತವಾಗಿ 300 ಅಂಗಡಿ ಮತ್ತು ಮನೆಗಳನ್ನು ಆರಿಸಿ ಅಲ್ಲಿಂದ ದಿನಕ್ಕೆ 2 ಬಾರಿ ಕಸ ಸಂಗ್ರಹಿಸಿ ಪಂಚಾಯಿತಿ ಆವರಣದಲ್ಲಿಯೇ ವಿಂಗಡಿಸಿ ವಿಲೇವಾರಿ ಮಾಡಲಾಗುತ್ತಿದೆ. 2ನೇ ಹಂತದಲ್ಲಿ ನಿಟ್ಟೆ ವಿವಿಧ ವ್ಯಾಪ್ತಿಯನ್ನು ಆರಿಸಿ ಅವರದೇ ಅನುದಾನ ಬಳಸಿ ತ್ಯಾಜ್ಯ ವಿಲೇವಾರಿಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ.

ಪಂಚಾಯ್ತಿಯಿಂದ ಗೋಶಾಲೆ: ಪಂಚಾಯ್ತಿ ವತಿಯಿಂದಲೇ ಗೋ ಶಾಲೆಯೊಂದನ್ನು ಆರಂಭಿಸಿದ್ದು, ತರಕಾರಿ ಮತ್ತಿತರ ತ್ಯಾಜ್ಯಗಳನ್ನು ಬಳಸಲಾಗುತ್ತಿದೆ. ಕೋಳಿ ಸಾಕಣಿಕೆಯನ್ನು ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಕಟ್ಟಡದ ತಾರಸಿಯಲ್ಲಿ ತರಕಾರಿ ಬೆಳೆಗಳನ್ನು ನಡೆಸಲಾಗಿದೆ. ಪ್ಲಾಸ್ಟಿಕ್‌ಗಳನ್ನು ವಿಂಗಡಿಸಿ ಗುಜರಿ ಅಥವಾ ಪ್ಲಾಸ್ಟಿಕ್ ಕಂಪನಿಗಳಿಗೆ ನೀಡಲಾಗುತ್ತಿದೆ. ಕಸದಿಂದ ತಯಾರಿಸಿದ ವಿವಿಧ ಬಗೆಯ ಗೊಬ್ಬರಗಳಿಗೆ ಹೆಚ್ಚು ಬೇಡಿಕೆಯಿದೆ. ಅದಕ್ಕಾಗಿ ಪ್ರತ್ಯೇಕ ಮಾರಾಟ ಕೌಂಟರ್ ಆರಂಭಿಸಲಾಗಿದೆ.

ಡಿಸಿಯ ಮೆಚ್ಚುಗೆ ಪಡೆದ ಗ್ರಾಪಂ: ಜಿಲ್ಲಾಧಿಕಾರಿಯವರಿಗೂ ಇಲ್ಲಿನ ಘಟಕದ ಬಗ್ಗೆ ಮೆಚ್ಚುಗೆ ಇದ್ದು ಇತರ ಗ್ರಾಮ ಪಂಚಾಯ್ತಿಗಳಿಗೆ ಪೈಲೆಟ್ ಗ್ರಾಮವನ್ನಾಗಿ ಗುರುತಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಬಹುಗ್ರಾಮ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗಾಗಿ ನಿಟ್ಟೆ ಗ್ರಾಮದ ಮದನಾಡು ಎಂಬಲ್ಲಿ ಒಂದೂವರೆ ಎಕ್ರೆ ಜಾಗವನ್ನು ಗ್ರಾಪಂಗೆ ಒದಗಿಸಲಾಗಿದೆ. ಆ ಬಳಿಕ ಗ್ರಾಮದ ಪ್ರತಿಯೊಂದು ಮನೆಯಿಂದಲೂ ಕಸ ಸಂಗ್ರಹ ಆರಂಬಿಸಲಾಗುವುದು. ಗ್ರಾಮದ ನಾಗರಿಕರು ಹಾಗೂ ಪಂಚಾಯಿತಿ ಸದಸ್ಯರು ಘಟಕ ಆರಂಭಕ್ಕೆ ಸಂಪೂರ್ಣ ಬೆಂಬಲ ನೀಡಿದ್ದು ಯೋಜನೆ ಯಶಸ್ಸಿಗೆ ಪೂರಕವಾಗಿದೆ ಎಂದು ದೇಶಪಾಂಡೆ ಹೇಳಿದರು.

ಶೀಘ್ರದಲ್ಲೇ ಘಟಕ: ಪಡುಬಿದ್ರೆಯಲ್ಲಿ ಸರ್ಕಾರಿ ಜಾಗದ ಕೊರತೆಯಿದೆ. ಸರ್ಕಾರ ಆಸಕ್ತಿ ವಹಿಸಿ ಸೂಕ್ತ ಜಾಗ ನೀಡಿದಲ್ಲಿ ಅತೀ ಶೀಘ್ರದಲ್ಲಿ ಘಟಕ ಆರಂಭಿಸಲಾಗುವುದು ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ದಮಯಂತಿ ವಿ.ಅಮೀನ್ ಹೇಳಿದ್ದಾರೆ.

ಪಡುಬಿದ್ರಿಯ ಎನ್‌ಟಿಪಿಸಿ ಗೋಡೌನ್ ಹಾಗೂ ಅದರ ಪಕ್ಕ 42 ಸೆಂಟ್ಸ್ ಸರಕಾರಿ ಜಾಗ ನೀಡುವಂತೆ ಜಿಲ್ಲಾಡಳಿತಕ್ಕೆ ಪಡುಬಿದ್ರಿ ಪಂಚಾಯಿತಿ ವತಿಯಿಂದ ಮನವಿ ಮಾಡಲಾಗಿದೆ. ಅದು ದೊರೆತಲ್ಲಿ ನಿಟ್ಟೆ ಘಟಕ ಮಾದರಿಯಲ್ಲಿ ಸುವ್ಯವಸ್ಥಿತ ಘನ ತ್ಯಾಜ್ಯ ಘಟಕ ಆರಂಭಿಸಲಿದ್ದೇವೆ. ಅಲ್ಲಿವರೆಗೆ ಪಂಚಾಯಿತಿ ಆವರಣ ಅಥವಾ ಮಾರ್ಕೆಟ್ ಬಳಿಯ ಸರ್ಕಾರಿ ಜಾಗದಲ್ಲಿ ಶೀಘ್ರ ತ್ಯಾಜ್ಯ ಘಟಕ ಆರಂಭಿಸಲಿದ್ದೇವೆ. ಇಲ್ಲಿ ಸುಮಾರು 6500 ಮನೆಗಳಿದ್ದು ಘನ ತ್ಯಾಜ್ಯ ಅಧಿಕವಾಗಿ ಹೊರಬರುತ್ತಿದೆ. ಅದಕ್ಕೆ ಪೂರಕವಾಗಿ ಘಟಕ ಸ್ಥಾಪನೆ ಮಾಡಲಾಗುವುದು ಎಂದು  ಪಿಡಿಒ ಪಂಚಾಕ್ಷರಿ ಸ್ವಾಮಿ ಹೇಳಿದ್ದಾರೆ.

ಗ್ರಾಪಂ ಸದಸ್ಯರಾದ ನವೀನ್ ಎನ್.ಶೆಟ್ಟಿ, ಶ್ರೀನಿವಾಸ ಶರ್ಮ, ರವಿ ಶೆಟ್ಟಿ, ಸೇವಂತಿ ಸದಾಶಿವ್, ಲಕ್ಷ್ಮಣ ಅಮೀನ್, ಜಾನಕಿ, ಸುಮಿತ್ರಾ, ಸಾಧನಾ, ಸಂಜೀವಿ ಪೂಜಾರ್ತಿ ಭಾಗವಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X