Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ನಾಡಪ್ರಭು ಕೆಂಪೇಗೌಡ ಜಯಂತಿ...

ಮಂಡ್ಯ: ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 Jun 2018 10:26 PM IST
share
ಮಂಡ್ಯ: ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ

ಮಂಡ್ಯ, ಜೂ.27: ಕೆಂಪೇಗೌಡರು ತಮ್ಮ ಜೀವನದಲ್ಲಿ ಇತಿಹಾಸ ಸೃಷ್ಟಿಸಿದ ವೀರ ವ್ಯಕ್ತಿಯಾಗಿದ್ದು, ಜೀವನದಲ್ಲಿ ಯಾರಾದರೂ ಸಾಧನೆ ಮಾಡಬೇಕಾದರೆ ಇತಿಹಾಸದ ಅರಿವು ಅಗತ್ಯ ಎಂದು ನಿವೃತ್ತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರೇಗೌಡ ಹೇಳಿದ್ದಾರೆ.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಬುಧವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅವರು ಕೆಂಪೇಗೌಡರ ಕುರಿತು ಉಪನ್ಯಾಸ ನೀಡಿದರು. ಇತಿಹಾಸ ಅರಿತವರಿಂದ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ. ಕೆಂಪೇಗೌಡರು ಮುಂದಾಲೋಚನೆಯಿಂದ ಕಟ್ಟಿದ ನಗರ ಬೆಂಗಳೂರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದೆ. ಕೆಂಪೇಗೌಡ ಬೆಂಗಳೂರು ಕಟ್ಟದಿದ್ದರೆ ಮತ್ತೊಂದು ಜಿಲ್ಲೆ ರಾಜ್ಯದ ರಾಜ್ಯಧಾನಿಯಾಗುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ಕೆಂಪೇಗೌಡರು ಜನಪರ ಆಡಳಿತ ನೀಡಿದರು. ಕೆಂಪೇಗೌಡ ನಂಬಿಕೆಯ ಭಕ್ತರಾಗಿದ್ದನು. ಒಂದು ಸಣ್ಣ ಸೈನ್ಯವನ್ನು ಇಟ್ಟುಕೊಂಡು ದೊಡ್ಡ ಸೈನ್ಯವನ್ನು ಸೋಲಿಸುವುದು ಸಾಧಾರಣ ಕೆಲಸವಲ್ಲ. ಯಾವುದೇ ಕಾರ್ಯಕ್ಕೆ ಮುಂದಾದರೂ ನಂಬಿಕೆ ಬಹಳ ಮುಖ್ಯ. ಆದ್ದರಿಂದ ಪ್ರತಿಯೊಬ್ಬರೂ ನಂಬಿಕೆಯಿಂದ ಮುನ್ನಡೆದರೆ ಯಶಸ್ಸು ಖಚಿತ ಎಂದು ಅವರು ಹೇಳಿದರು.

ಬೆಂಗಳೂರಿನ ಜನತೆಗೆ ಅಗತ್ಯ ವಸ್ತುಗಳು ಸಿಗಬೇಕು ಎನ್ನುವ ಉದ್ದೇಶದಿಂದ 25ಕ್ಕೂ ಹೆಚ್ಚು ಪೇಟೆಗಳನ್ನು ಕೆಂಪೇಗೌಡ ನಿರ್ಮಿಸಿದರು. ಅವುಗಳನ್ನು ಇಂದಿಗೂ ಕಾಪಾಡಿಕೊಂಡು ಬರುತ್ತಿರುವುದು ಮೆಚ್ಚುಗೆಯ ವಿಚಾರ ಎಂದು ತಿಳಿಸಿದರು.

ಶಾಸಕ ಎಂ.ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಪಂ ಅಧ್ಯಕ್ಷೆ ನಾಗರತ್ನಸ್ವಾಮಿ, ಜಿಲ್ಲಾಧಿಕಾರಿ ಮಂಜುಶ್ರೀ, ಎಸ್ಪಿ, ರಾಧಿಕಾ, ಎಡಿಸಿ ವಿಜಯ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಭಾವಚಿತ್ರ ಮೆರವಣಿಗೆ: ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಮುಂಭಾಗ ನಾಡಪ್ರಭು ಕೆಂಪೇಗೌಡರ ಅಲಂಕೃತ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್ ಚಾಲನೆ ನೀಡಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X