Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 15 ದಿನದೊಳಗೆ ರಸ್ತೆ ಗುಂಡಿ ಮುಚ್ಚಲು...

15 ದಿನದೊಳಗೆ ರಸ್ತೆ ಗುಂಡಿ ಮುಚ್ಚಲು ಕಟ್ಟುನಿಟ್ಟಿನ ಸೂಚನೆ: ಮೇಯರ್ ಸಂಪತ್‌ ರಾಜ್

ವಾರ್ತಾಭಾರತಿವಾರ್ತಾಭಾರತಿ28 Jun 2018 7:09 PM IST
share
15 ದಿನದೊಳಗೆ ರಸ್ತೆ ಗುಂಡಿ ಮುಚ್ಚಲು ಕಟ್ಟುನಿಟ್ಟಿನ ಸೂಚನೆ: ಮೇಯರ್ ಸಂಪತ್‌ ರಾಜ್

ಬೆಂಗಳೂರು, ಜೂ.28: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕಸ ನಿರ್ವಹಣೆ ಮತ್ತು ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಗಮನಹರಿಸಲು ಇಂಜಿನಿಯರ್‌ಗಳನ್ನು ನೇಮಕ ಮಾಡಲಾಗುವುದೆಂದು ಬಿಬಿಎಂಪಿ ಮೇಯರ್ ಆರ್.ಸಂಪತ್‌ರಾಜ್ ಹೇಳಿದರು.

ಗುರುವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿಯ ಕೆಂಪೇಗೌಡ ಪೌರಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇದೇ ಉದ್ದೇಶಕ್ಕಾಗಿ ಬೇರೆ ಇಲಾಖೆಯಿಂದ ಯರವಲು ಪಡೆದುಕೊಳ್ಳುವುದಿಲ್ಲ. ಬಿಬಿಎಂಪಿಯಲ್ಲಿರುವ ದಕ್ಷ ಇಂಜಿನಿಯರ್ ಅವರನ್ನೇ ನಿಯೋಜಿಸಲಾಗುವುದು ಎಂದು ಹೇಳಿದರು.
15 ದಿನಗಳೊಳಗಾಗಿ ಗುಂಡಿಗಳನ್ನು ಮುಚ್ಚುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಎಲ್ಲೆಲ್ಲಿ ಗುಂಡಿ ಇರುತ್ತವೋ ಅವುಗಳನ್ನು ತಮ್ಮ ಗಮನಕ್ಕೆ ತರುವ ಹೊಣೆ ಆಯಾ ವಲಯದ ಇಂಜಿನಿಯರ್‌ಗಳ ಜವಾಬ್ದಾರಿ ಎಂದು ಹೇಳಿದರು.

ಕಳೆದ ಬಾರಿಯ ಸಭೆಯಲ್ಲಿ ಸಿಬ್ಬಂದಿ ಮತ್ತು ಸುಧಾರಣಾ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ್, ನಮ್ಮ ಸಮಿತಿಗೆ ಅಧಿಕಾರಿಗಳು ಯಾವುದೇ ಕಡತ ಕಳುಹಿಸುತ್ತಿಲ್ಲ. ಹಾಗಾಗಿ ನಮ್ಮ ಸಮಿತಿ ಇದ್ದರೂ ಇಲ್ಲದಂತಾಗಿದೆ ಎಂದು ಗಮನ ಸೆಳೆದಿದ್ದರು. ಹೀಗಾಗಿ, ಸ್ಥಾಯಿ ಸಮಿತಿಗಳಿಗೆ ಸಂಪೂರ್ಣ ಅಧಿಕಾರ ಸಿಗುವಂತಾಗಬೇಕು ಎಂದು ಪ್ರತಿ ಪಕ್ಷ ನಾಯಕ ಪದ್ಮನಾಭರೆಡ್ಡಿ ತಿಳಿಸಿದರು.

ಪಾಲಿಕೆಯಲ್ಲಿ 12 ಸ್ಥಾಯಿ ಸಮಿತಿಗಳಿವೆ. ಇವುಗಳಿಗೆ ಅಧಿಕಾರ ಚಲಾಯಿಸಲು ಕೆಎಂಸಿ ಕಾಯ್ದೆಯಲ್ಲಿ ಅವಕಾಶವೇ ಇಲ್ಲ. ಅಧಿಕಾರಿಗಳು ಕಡತ ಕಳುಹಿಸಬೇಕೆಂಬ ಕಾನೂನಿಲ್ಲ. ಕೌನ್ಸಿಲ್ ಮತ್ತು ಸ್ಥಾಯಿ ಸಮಿತಿಗಳಿಗೆ ಅಧಿಕಾರ ಇಲ್ಲದೆ ಇರುವುದು ಆಶ್ಚರ್ಯ. ಹಾಗಾಗಿ ಕೂಡಲೇ ಕಾಯ್ದೆಗೆ ತಿದ್ದುಪಡಿ ತಂದು ಸ್ಥಾಯಿ ಸಮಿತಿಗಳಿಗೆ ಅಧಿಕಾರ ಕೊಡಬೇಕು ಎಂದು ಪದ್ಮನಾಭರೆಡ್ಡಿ ಸಲಹೆ ನೀಡಿದರು.

ಒಂದು ಕಮಿಟಿಯವರು ತಮಗೆ ಅಧಿಕಾರ ಕೊಡಿ ಎಂದು ಒತ್ತಾಯಿಸುತ್ತಾರೆ. ಆದರೆ, ಇನ್ನೊಂದು ಕಮಿಟಿಯವರು ಅಧಿಕಾರ ವಹಿಸಿಕೊಂಡು 8 ತಿಂಗಳು ಕಳೆದರೂ ಒಂದೇ ಒಂದು ಸಭೆ ನಡೆಸಿಲ್ಲ. ಪಕ್ಷೇತರ ಸದಸ್ಯ ರಮೇಶ್ ರೆಡ್ಡಿ ಅವರನ್ನು ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಈವರೆಗೆ ಒಂದು ಸಭೆ ಕೂಡಾ ನಡೆಸಿಲ್ಲ. ಸತತವಾಗಿ ಮೂರು ಸಭೆ ನಡೆಸದೆ ಇದ್ದರೆ ಅವರು ಅಧಿಕಾರ ಕಳೆದು ಕೊಳ್ಳಬೇಕಾಗುತ್ತೆ. ರಮೇಶ್ ವಿರುದ್ದ ಏನು ಕ್ರಮ ತೆಗೆದುಕೊಳ್ಳುತ್ತೀರಿ ಎಂದು ರೆಡ್ಡಿ ಸಭೆಯಲ್ಲಿ ಪ್ರಶ್ನಿಸಿದರು. ಬಳಿಕ, ಉತ್ತರಿಸಿದ ಮೇಯರ್ ಇದನ್ನೆಲ್ಲ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಸುಳ್ಳು ಲೆಕ್ಕಕ್ಕೆ ಅಸಮಾಧಾನ: ತ್ಯಾಜ್ಯ ವಿಲೇವಾರಿ ಮಾಡುವ ಆಟೋ ಟಿಪ್ಪರ್ ಮತ್ತು ಕಾಂಪ್ಯಾಕ್ಟರ್‌ಗಳ ಬಗ್ಗೆ ಸುಳ್ಳು ಲೆಕ್ಕ ಹೇಳಲಾಗುತ್ತಿದೆ ಎಂದು ಕಾಂಗ್ರೆಸ್‌ನ ಮಂಜುನಾಥ್ ರೆಡ್ಡಿ, ಬಿಜೆಪಿ ಉಮೇಶ್ ಶೆಟ್ಟಿ ಸೇರಿ ಇನ್ನಿತರೆ ಸದಸ್ಯರು ಒಕ್ಕೊರಲಿನಿಂದ ಸಭೆಯಲ್ಲಿ ಹೇಳಿದರು. ಸದಸ್ಯರು ವಿಷಯ ಪ್ರಸ್ತಾಪಿಸಿ, ಸುಳ್ಳು ಲೆಕ್ಕದಿಂದಾಗಿ ನಾಗರಿಕರು ಬಿಬಿಎಂಪಿ ಸದಸ್ಯರ ಮೇಲೆ ಅನುಮಾನ ಪಡುವಂತಾಗಿದೆ ಎಂದು ದೂರಿದರು.

ಸುಳ್ಳು ಲೆಕ್ಕ ನೀಡುವ ಯಾರೇ ಆಗಿರಬಹುದು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಈಗಾಗಲೇ ಬಿಬಿಎಂಪಿ ಎಂದರೆ ಭ್ರಷ್ಟಾಚಾರ ಎಂಬ ಭಾವನೆಯಿದೆ. ಈ ಹಗರಣದಿಂದ ಘನತೆಗೆ ಧಕ್ಕೆ ಉಂಟಾಗುತ್ತದೆ ಎಂದು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X