Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮಾಜದ ಸ್ವಾಸ್ಥ್ಯಕ್ಕಾಗಿ ಎನ್‍ಕೌಂಟರ್...

ಸಮಾಜದ ಸ್ವಾಸ್ಥ್ಯಕ್ಕಾಗಿ ಎನ್‍ಕೌಂಟರ್ ಗಳು ಸರಕಾರಗಳ ಸಾಧನ ಎಂದ ಬಿಜೆಪಿ ನಾಯಕ!

ವಾರ್ತಾಭಾರತಿವಾರ್ತಾಭಾರತಿ28 Jun 2018 9:13 PM IST
share
ಸಮಾಜದ ಸ್ವಾಸ್ಥ್ಯಕ್ಕಾಗಿ ಎನ್‍ಕೌಂಟರ್ ಗಳು ಸರಕಾರಗಳ ಸಾಧನ ಎಂದ ಬಿಜೆಪಿ ನಾಯಕ!

ಕೊಲ್ಕತ್ತಾ, ಜೂ.28: "ಎನ್‍ ಕೌಂಟರ್ ಗಳು ಆಡಳಿತದ ಅಗತ್ಯ ಸಾಧನವಾಗಿದ್ದು, ಎಲ್ಲಾ ಸರಕಾರಗಳು ಈ ಸಾಧನವನ್ನು ಸಮಾಜದ ರಕ್ಷಣೆಗಾಗಿ ಉಪಯೋಗಿಸಿವೆ. ಶಾಂತಿಗಾಗಿ ಅಗತ್ಯ ಬಿದ್ದಾಗಲೆಲ್ಲಾ ಎನ್‍ ಕೌಂಟರ್ ನಡೆಸುವುದು ಸರಕಾರದ ಜವಾಬ್ದಾರಿ" ಎಂದು ಹಿರಿಯ ಬಿಜೆಪಿ ನಾಯಕ ಹಾಗೂ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್  ತಾವು ತೃಣಮೂಲ ಕಾಂಗ್ರೆಸ್ ನಾಯಕರಿಗೆ ಇತ್ತೀಚೆಗೆ ನೀಡಿದ್ದ ಎನ್‍ ಕೌಂಟರ್ ಬೆದರಿಕೆಗಳ ಬಗ್ಗೆ ಸಮಜಾಯಿಷಿ ನೀಡಿದ್ದಾರೆ.

"ಎಲ್ಲಾ ಸರಕಾರಗಳೂ ತಮ್ಮ ರಾಜ್ಯಗಳಲ್ಲಿ ಇದನ್ನು ಮಾಡುತ್ತವೆ, ಉತ್ತರಪ್ರದೇಶದಿಂದ ಬಂಗಾಳದ ತನಕ, ಉತ್ತರ ಪ್ರದೇಶ ಈ ನಿಟ್ಟಿನಲ್ಲಿ ಚಾಂಪಿಯನ್'' ಎಂದು  ಹೇಳಿದ ಘೋಷ್, ಉತ್ತರ ಪ್ರದೇಶದ ಆದಿತ್ಯನಾಥ್ ಸರಕಾರ ರಾಜ್ಯದಲ್ಲಿ ಅಪರಾಧ ನಿಯಂತ್ರಿಸಲು ವಿವಾದಾತ್ಮಕ ಪೊಲೀಸ್ ಎನ್‍ ಕೌಂಟರ್ ಗಳ ಬಗ್ಗೆ ಧೈರ್ಯದಿಂದ ಹೇಳಿಕೊಂಡಿದೆ ಎಂದಿದ್ದಾರೆ.

ಜಲ್ಪೈಗುರಿ ಜಿಲ್ಲಾಡಳಿತದ ವಿರುದ್ಧ ಕಳೆದ ವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಘೋಷ್ ಬಂಗಾಳದಲ್ಲಿ ಗೂಂಡಾಗಿರಿಯಲ್ಲಿ ತೊಡಗುವ ನಾಯಕರನ್ನು ಜೈಲಿಗಟ್ಟಲಾಗುವುದು ಇಲ್ಲವೇ ಎನ್‍ ಕೌಂಟರ್ ನಡೆಯುವುದು ಎಂದು ಹೇಳಿದ್ದರು. ಅವರ ಈ ಹೇಳಿಕೆಗೆ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ತಾವು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ ಎಂದು ಅವರು ಹೇಳಿದ್ದಾರೆ. ``ಪರಿಸ್ಥಿತಿ ನಿಯಂತ್ರಣ ಮೀರಿದಾಗ ಎನ್‍ಕೌಂಟರ್ ನಡೆಸಿ ಸಮಾಜವನ್ನು ರಕ್ಷಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ಈ ಎನ್‍ ಕೌಂಟರ್ ಬಗೆಗಿನ ಅಭಿಪ್ರಾಯಕ್ಕೆ ಅವರ ಪಕ್ಷದ ನಾಯಕರುಗಳ ಒಪ್ಪಿಗೆಯಿದೆಯೇ  ಎಂಬ ಪ್ರಶ್ನೆಗೆ ತಮಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ಘೋಷ್ ಹೇಳಿದ್ದಾರೆ.

``ಎನ್‍ ಕೌಂಟರ್ ಬಗ್ಗೆ ತಮ್ಮ ಹೇಳಿಕೆಯ ಅರ್ಥ ಬಿಜೆಪಿ  ಕಾರ್ಯಕರ್ತರು ಬೀದಿಗೆ ಶಸ್ತ್ರಗಳೊಂದಿಗೆ ಬೀದಿಗಿಳಿಯುತ್ತಾರೆ ಎಂದಲ್ಲ. ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಾರೆಂದು ಅರ್ಥ. ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಸರಕಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರಕಾರ ಮಾಡುತ್ತಿರುವ ರೀತಿ ಎಂದು ಅರ್ಥ'' ಎಂದು ಘೋಷ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X