Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ವಾರಾಂತ್ಯದಲ್ಲಿ 6 ಬೋಗಿಯ...

ಬೆಂಗಳೂರು: ವಾರಾಂತ್ಯದಲ್ಲಿ 6 ಬೋಗಿಯ ಮೆಟ್ರೊ ಸಂಚಾರವಿಲ್ಲ

ವಾರ್ತಾಭಾರತಿವಾರ್ತಾಭಾರತಿ28 Jun 2018 9:37 PM IST
share
ಬೆಂಗಳೂರು: ವಾರಾಂತ್ಯದಲ್ಲಿ 6 ಬೋಗಿಯ ಮೆಟ್ರೊ ಸಂಚಾರವಿಲ್ಲ

ಬೆಂಗಳೂರು, ಜೂ.28: ಬೆಂಗಳೂರು ಮೆಟ್ರೊ ರೈಲು ನಿಗಮದ ಮೊದಲ 6 ಬೋಗಿಗಳ ರೈಲಿನ ಸಂಚಾರ ಸಮಯ ಬದಲಾವಣೆ ಮಾಡಿದ್ದು, ವಾರಾಂತ್ಯಗಳಲ್ಲಿ ಈ 6 ಬೋಗಿಗಳ ಮೆಟ್ರೊ ರೈಲು ಸಂಚರಿಸುವುದಿಲ್ಲ.

ಶನಿವಾರ ಹಾಗೂ ರವಿವಾರ ಐಟಿ-ಬಿಟಿ ಉದ್ಯೋಗಿಗಳಿಗೆ ರಜೆ ಇರಲಿದೆ. ಹಾಗೂ ರವಿವಾರ ಬಹುತೇಕ ಸರಕಾರಿ-ಖಾಸಗಿ ಉದ್ಯೋಗಿಗಳಿಗೆ ರಜೆ ಇರುತ್ತದೆ. ಈ ದಿನಗಳಲ್ಲಿ ಮೆಟ್ರೊ ಸಂಚಾರದಲ್ಲಿ ಜನದಟ್ಟಣೆ ಇರುವುದಿಲ್ಲ. ಹೀಗಾಗಿ 6ಬೋಗಿಯ ಮೆಟ್ರೋ ರೈಲು ಸಂಚಾರ ರದ್ದು ಪಡಿಸಲಾಗಿದೆ.

ಆರು ಬೋಗಿಗಳ ರೈಲಿನ ಸಂಚಾರದಲ್ಲಿ ಬೆಳಗಿನ ಹೊತ್ತು ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಯವರೆಗೆ ನೇರಳೆ ಬಣ್ಣದ ಮಾರ್ಗದಲ್ಲಿ ಸಂಪೂರ್ಣ ಎರಡು ಸುತ್ತು ಸಂಚರಿಸಲಿದೆ. ಈ ಮೊದಲು ಪಶ್ಚಿಮ ದಿಕ್ಕಿಗೆ ಈ ನೇರಳೆ ಬಣ್ಣದ ಮೆಟ್ರೊ ರೈಲು ವಿಜಯನಗರದವರೆಗೆ ಮಾತ್ರ ಸಂಚರಿಸುತ್ತಿತ್ತು. ಮತ್ತೊಂದು ಬದಲಾವಣೆಯೆಂದರೆ ಒಂದು ಸುತ್ತಿನ ಪ್ರಯಾಣ ವಿಸ್ತರಣೆಯಾಗಿದೆ.

ವಿಜಯನಗರ ಮತ್ತು ಎಂಜಿ ರಸ್ತೆಯ ನಡುವೆ ಸಂಚರಿಸುವ ಬದಲು ಇನ್ನು ಮುಂದೆ ವಿಜಯನಗರ ಮತ್ತು ಬೈಯಪ್ಪನಹಳ್ಳಿ ಮಧ್ಯೆ ಎರಡೂ ಮಾರ್ಗಗಳಲ್ಲಿ ರೈಲು ಸಂಚರಿಸಲಿದೆ. ಬೆಳಗ್ಗೆ ಮತ್ತು ಸಾಯಂಕಾಲ ಹೊತ್ತು ರೌಂಡ್ ಟ್ರಿಪ್‌ನಲ್ಲಿ ಬದಲಾವಣೆಯಾಗಿದ್ದು, ಪ್ರಯಾಣಿಕರ ಅಗತ್ಯಗಳಿಗೆ ತಕ್ಕಂತೆ ಬದಲಾವಣೆ ಮಾಡಲಾಗಿದೆ.

ಮೆಟ್ರೊ ಸಂಚಾರದ ವೇಳಾಪಟ್ಟಿಯಲ್ಲಿ ಆಗಿಂದಾಗ್ಗೆ ಬದಲಾವಣೆಯಾಗಲಿದೆ. ಜನರ ಬೇಡಿಕೆಗೆ ತಕ್ಕಂತೆ ಮುಂದಿನ ದಿನಗಳಲ್ಲಿ ಬದಲಾಗಬಹುದು. ಒಂದು ವಾರ-ಹತ್ತು ದಿನಗಳ ಕಾಲ ನೋಡಿಕೊಂಡು ನಂತರ ಮತ್ತೊಂದು ವೇಳಾಪಟ್ಟಿ ನಿಗದಿಪಡಿಸಲಾಗುವುದು ಎಂದು ಮೆಟ್ರೊ ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ್‌ರಾವ್ ತಿಳಿಸಿದ್ದಾರೆ.

ಹಲವು ಮಹಿಳೆಯರು ಮಹಿಳಾ ಬೋಗಿಗಳಿಗೆ ಹತ್ತದೆ ಸಾಮಾನ್ಯ ಬೋಗಿಗಳಲ್ಲಿ ಪ್ರಯಾಣಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಮಹಿಳಾ ಬೋಗಿಗಳನ್ನು ಮಹಿಳೆಯರು ಹೆಚ್ಚೆಚ್ಚು ಬಳಸಿದರೆ ಸಾಮಾನ್ಯ ಬೋಗಿಗಳಲ್ಲಿ ಹೆಚ್ಚು ಪ್ರಯಾಣಿಕರು ಪ್ರಯಾಣಿಸಬಹುದು. ಪ್ರಸ್ತುತ ಆರು ಬೋಗಿಗಳ ರೈಲಿನಲ್ಲಿ 1500ರಿಂದ 1600 ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಸ್ಥಳವನ್ನು ಸೂಕ್ತವಾಗಿ ಬಳಸಿಕೊಂಡರೆ 2 ಸಾವಿರಕ್ಕೆ ಅಧಿಕ ಪ್ರಯಾಣಿಕರು ಪ್ರಯಾಣಿಸಬಹುದು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X