Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜುಲೈ 2ರಂದು 10 ಲಕ್ಷ ವ್ಯಾಪಾರಿಗಳಿಂದ...

ಜುಲೈ 2ರಂದು 10 ಲಕ್ಷ ವ್ಯಾಪಾರಿಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Jun 2018 10:08 PM IST
share
ಜುಲೈ 2ರಂದು 10 ಲಕ್ಷ ವ್ಯಾಪಾರಿಗಳಿಂದ ಪ್ರತಿಭಟನೆ

ಹೊಸದಿಲ್ಲಿ, ಜೂ.28: ವಿದೇಶಿ ಆನ್‌ಲೈನ್ ಸರಕು ಮಾರಾಟ ಸಂಸ್ಥೆ ಮಾಲ್ಮಾರ್ಟ್ ಮತ್ತು ಭಾರತದ ಫ್ಲಿಪ್‌ಕಾರ್ಟ್ ನಡುವೆ ನಡೆದಿರುವ ಒಪ್ಪಂದವನ್ನು ವಿರೋಧಿಸಿ ದೇಶದ ಹತ್ತು ಲಕ್ಷಕ್ಕೂ ಅಧಿಕ ಸಣ್ಣ ವ್ಯಾಪಾರಿಗಳು ಜುಲೈ ಎರಡರಂದು ಬೀದಿಗಿಳಿದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

“ಈ ಒಪ್ಪಂದದಿಂದ ವಾಲ್ಮಾರ್ಟ್ ನಮ್ಮ ಮಾರುಕಟ್ಟೆಗಳಲ್ಲಿ ಅಂಗಡಿಗಳನ್ನು ತೆರೆಯಲು ಸಾಧ್ಯವಾಗುತ್ತದೆ ಮತ್ತು ಆನ್‌ಲೈನ್‌ನಲ್ಲಿ ಆರ್ಡರ್ ಪಡೆದು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಈ ರೀತಿಯಾದರೆ ಜನರು ಮಾರುಕಟ್ಟೆಗೆ ಬರುವುದನ್ನು ನಿಲ್ಲಿಸುತ್ತಾರೆ. ಆಗ ನಮ್ಮ ಗತಿಯೇನು” ಎಂದು ಸಣ್ಣ ವ್ಯಾಯಾಪಾರಿಗಳು ಅಲವತ್ತುಕೊಂಡಿದ್ದಾರೆ. ಅಖಿಲ ಭಾರತ ವ್ಯಾಪಾರಿಗಳ ಸಂಘಟನೆ (ಸಿಎಐಟಿ) ಈ ಪ್ರತಿಭಟನೆಯನ್ನು ಆಯೋಜಿಸಿದೆ. ವಾಲ್ಮಾರ್ಟ್ ಮತ್ತು ಫ್ಲಿಪ್‌ಕಾರ್ಟ್ ಒಪ್ಪಂದವನ್ನು ಈ ಸಂಘಟನೆ ಆರಂಭದಿಂದಲೂ ವಿರೋಧಿಸುತ್ತಾ ಬಂದಿದೆ.

ವ್ಯಾಪಾರಿ ಸಂಘಟನೆ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದೆ. ಮೊದಲನೆಯದಾಗಿ, ವಾಲ್ಮಾರ್ಟ್-ಫ್ಲಿಪ್‌ಕಾರ್ಟ್ ಒಪ್ಪಂದವನ್ನು ರದ್ದು ಮಾಡುವುದು. ಎರಡನೆಯದಾಗಿ, ಇ-ಕಾಮರ್ಸ್ ನೀತಿಯನ್ನು ರಚಿಸುವುದು ಮತ್ತು ಮೂರನೆಯದಾಗಿ, ಇ-ಕಾಮರ್ಸ್ ಉದ್ದಿಮೆಯ ನಿಯಂತ್ರಣ ಮಂಡಳಿಯನ್ನು ರಚಿಸುವುದು. “ಸರಕಾರವು ನಮ್ಮ ಮನವಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅವರು ಈ ಒಪ್ಪಂದದ ಬಗ್ಗೆ ವಿಭಿನ್ನವಾದ ಅಭಿಪ್ರಾಯವನ್ನು ಹೊಂದಿದ್ದಾರೆ. ದೇಶದ 6.5 ಕೋಟಿ ಸಣ್ಣ ವ್ಯಾಪಾರಿಗಳನ್ನು ಸಂಕಷ್ಟಕ್ಕೀಡು ಮಾಡುವ ವಿಷಯದ ಬಗ್ಗೆ ಸರಕಾರ ಯಾಕೆ ಮೌನ ತಾಳಿದೆ” ಎಂದು ಸಿಎಐಟಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕಂಡೇಲ್ವಾಲ್ ತಿಳಿಸಿದ್ದಾರೆ. ಜುಲೈ 2ರಂದು ಹತ್ತು ಲಕ್ಷಕ್ಕೂ ಅಧಿಕ ವ್ಯಾಪಾರಿಗಳು ದೇಶದ ಒಂದು ಸಾವಿರ ಕಡೆ ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ. ಈ ಸಂದರ್ಭ ಒಪ್ಪಂದದ ವಿರುದ್ಧ ಘೋಷಣೆಗಳನ್ನು ಕೂಗಲಾಗುವುದು ಮತ್ತು ವಾಲ್ಮಾರ್ಟ್‌ನ ಪ್ರತಿಕೃತಿ ದಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ನಂತರ ಪ್ರತಿಭಟನಾಕಾರರು ಆಯಾ ಪ್ರದೇಶದ ಜಿಲ್ಲಾಯುಕ್ತರನ್ನು ಅಥವಾ ಮ್ಯಾಜಿಸ್ಟ್ರೇಟ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ. ವಾಲ್ಮಾರ್ಟ್-ಫ್ಲಿಪ್‌ಕಾರ್ಟ್ ಒಪ್ಪಂದವು ವಿದೇಶಿ ನೇರ ಬಂಡವಾಳ ನೀತಿಯ ಹಲವು ಅಂಶಗಳನ್ನು ಉಲ್ಲಂಘಿಸುತ್ತದೆ. ಜೊತೆಗೆ ದತ್ತಾಂಶ ಭದ್ರತೆ ಹಾಗೂ ನ್ಯಾಯಸಮ್ಮತವಲ್ಲದ ಪದ್ಧತಿಗಳನ್ನು ಹೊಂದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X