ಜೂ.30ರಂದು ಸಚಿವ ಮಹೇಶ್ ಉಡುಪಿಗೆ
ಉಡುಪಿ, ಜೂ.28: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಜೂ.30ರ ಶನಿವಾರ ಉಡುಪಿಗೆ ಆಗಮಿಸಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಜೂ.30ರಂದು ಬೆಳಗ್ಗೆ 11 ಗಂಟೆಗೆ ಅಜ್ಜರಕಾಡಿನ ಪುರಭವನದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಘಟಕ ಹಮ್ಮಿಕೊಂಡ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Next Story