Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ:...

ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ: ಮಡಿಕೇರಿ ನಗರಸಭೆಯಲ್ಲಿ ಸಮ್ಮಿಶ್ರ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ28 Jun 2018 11:58 PM IST
share
ಸ್ಥಾಯಿ ಸಮಿತಿಗೆ ಸದಸ್ಯರ ಆಯ್ಕೆ: ಮಡಿಕೇರಿ ನಗರಸಭೆಯಲ್ಲಿ ಸಮ್ಮಿಶ್ರ ಫಲಿತಾಂಶ

ಮಡಿಕೇರಿ, ಜೂ.28: ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿಗೆ ಚುನಾವಣೆಯ ಮೂಲಕ ಸದಸ್ಯರ ಆಯ್ಕೆಯಾಗಿದ್ದು, ಆಶ್ಚರ್ಯಕರ ರೀತಿಯಲ್ಲಿ ಸಮ್ಮಿಶ್ರ ಫಲಿತಾಂಶ ಹೊರ ಬಿದ್ದಿದೆ. 27 ಮತದಾರರು ಮತ ಚಲಾಯಿಸುವ ಮೂಲಕ ಸಮಿತಿಗೆ 11 ಸದಸ್ಯರನ್ನು ಆಯ್ಕೆ ಮಾಡಿದರು.

ಬಹುಮತದ ನಿರೀಕ್ಷೆಯಲ್ಲಿದ್ದ ಬಿಜೆಪಿ 3 ಸದಸ್ಯ ಬಲಕ್ಕೆ ತೃಪ್ತಿ ಪಟ್ಟುಕೊಂಡರೆ, ಕಾಂಗ್ರೆಸ್ 1 ಸ್ಥಾನದ ಮೂಲಕ ಮುಖಭಂಗ ಅನುಭವಿಸಿತು. ಉಳಿದಂತೆ ಎಸ್‍ಡಿಪಿಐ 3, ಜೆಡಿಎಸ್ 2 ಹಾಗೂ ಕಾಂಗ್ರೆಸ್‍ನ ಬಂಡಾಯ ಇಬ್ಬರು ಸದಸ್ಯರು ಆಯ್ಕೆಯಾಗಿದ್ದಾರೆ. 

ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾಗಿರುವ ಲೀಲಾಶೇಷಮ್ಮ ಅತ್ಯಧಿಕ 22 ಮತಗಳನ್ನು ಪಡೆಯುವ ಮೂಲಕ ಗಮನ ಸೆಳೆದರು. ಬಂಡಾಯ ಕಾಂಗ್ರೆಸ್ಸಿಗರಾದ ವೀಣಾಕ್ಷಿ 21 ಮತಗಳು ಹಾಗೂ ಜೆಡಿಎಸ್ ನ ಸಂಗೀತಾ ಪ್ರಸನ್ನ 20 ಮತಗಳನ್ನು ಪಡೆಯುವ ಮೂಲಕ ಕ್ರಮವಾಗಿ ಮೂವರು ಮಹಿಳೆಯರು ನಿರ್ಣಾಯಕರೆನಿಸಿಕೊಂಡರು. ಉಳಿದಂತೆ ಬಂಡಾಯ ಕಾಂಗ್ರೆಸ್ಸಿಗರಾದ ಶ್ರೀಮತಿ ಬಂಗೇರಾ 18, ಬಿಜೆಪಿಯ ಪಿ.ಟಿ.ಉಣ್ಣಿಕೃಷ್ಣ 16. ಪಿ.ಡಿ.poನ್ನಪ್ಪ 15 ಮತಗಳು, ಸವಿತಾ ರಾಕೇಶ್ 14, ಎಸ್‍ಡಿಪಿಐ ಸದಸ್ಯರಾದ ಕೆ.ಜೆ.ಪೀಟರ್ 16, ಅಮೀನ್ ಮೊಯ್ಸಿನ್ 14,  ಮನ್ಸೂರ್ 14, ಕಾಂಗ್ರೆಸ್ ನ ತಜುಸಂ 14 ಮತಗಳನ್ನು ಗಳಿಸಿ ಸ್ಥಾಯಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು. 

ಸೋತವರು ಪಡೆದ ಮತಗಳು
ಕಾಂಗ್ರೆಸ್ ನ ಪ್ರಕಾಶ್ ಆಚಾರ್ಯ 10, ಜುಲೈಕಾಬಿ 11, ಎಚ್.ಎಂ.ನಂದಕುಮಾರ್ 12,  ಬಿಜೆಪಿಯ ಅನಿತಾ ಪೂವಯ್ಯ 10, ಎ.ಕೆ.ಲಕ್ಷ್ಮಿ 11, ಕೆ.ಎಸ್.ರಮೇಶ್ 13, ಐ.ಜಿ.ಶಿವಕುಮಾರಿ 12, ಎಸ್‍ಡಿಪಿಐ ನ  ನೀಮಾ ಅರ್ಶದ್ 13 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 

ಬಿಜೆಪಿ ವಿಫಲ: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಸ್ತಾಯಿ ಸಮಿತಿ ಸದಸ್ಯರ ಆಯ್ಕೆಯ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಬಹುಮತಗಳಿಸುವ ಭಾರೀ ಭರವಸೆಯಲ್ಲಿದ್ದರು. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸುನೀಲ್ ಸುಬ್ರಮಣಿ, ಸಂಸದ ಪ್ರತಾಪ್ ಸಿಂಹ ಕೂಡ ಬಿಜೆಪಿ ಸದಸ್ಯರ ಪರ ಮತ ಚಲಾಯಿಸಲು ಸ್ಥಾಯಿ ಸಮಿತಿ ಚುನಾವಣೆಗೆ ಬಂದಿದ್ದರು. ಆದರೆ, ನಿರೀಕ್ಷಿತ ಸದಸ್ಯರನ್ನು ಗೆಲ್ಲಿಸುವಲ್ಲಿ ಬಿಜೆಪಿ ವಿಫಲವಾಯಿತು.

ಆಡಳಿತರೂಡ ಕಾಂಗ್ರೆಸ್ ಮತ್ತೊಮ್ಮೆ ಹೀನಾಯವಾಗಿ ಚುನಾವಣೆಯಲ್ಲಿ ಸೋಲು ಕಂಡಿತು. ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮತದಾನಕ್ಕೆ ಬಂದಿದ್ದರೂ ಕಾಂಗ್ರೆಸ್ ನ ತಜುಸಂ ಮಾತ್ರ ಗೆಲವು ಸಾಧಿಸಿದರು. ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಈ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದವು. 

ಕುತೂಹಲ ಮೂಡಿಸಿದ ಅಧ್ಯಕ್ಷರ ಆಯ್ಕೆ

ಆಯ್ಕೆಯಾಗಿರುವ 11 ಸದಸ್ಯರಲ್ಲಿ ಒಬ್ಬರು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕಾಗಿದ್ದು, ಅಧ್ಯಕ್ಷ ಸ್ಥಾನ ಯಾರ ಪಾಲಾಗಲಿದೆ ಎನ್ನುವ ಕುತೂಹಲ ಈಗ ನಾಲ್ಕೂ ಪಕ್ಷಗಳಲ್ಲಿ ಮೂಡಿದೆ. ಜೆಡಿಎಸ್ ನ ಲೀಲಾ ಶೇಷಮ್ಮ ಅತ್ಯಧಿಕ 22 ಮತಗಳನ್ನು ಗಳಿಸಿರುವುದರಿಂದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಬಂಡಾಯ ಕಾಂಗ್ರೆಸ್ಸಿಗರಾದ ವೀಣಾಕ್ಷಿ, ಜೆಡಿಎಸ್‍ನ ಸಂಗೀತಾ ಪ್ರಸನ್ನ ಕೂಡ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಆದರೆ ಸಮ್ಮಿಶ್ರ ಫಲಿತಾಂಶ ಹೊರ ಬಿದ್ದಿರುವುದರಿಂದ ಅಧ್ಯಕ್ಷ ಸ್ಥಾನದ ಅದೃಷ್ಟ ಯಾರ ಪಾಲಾಗಲಿದೆ ಎನ್ನುವುದನ್ನು ಕಾದು ನೋಡಬೇಕಷ್ಟೆ.

ನಗರಸಭೆಯ ಪೌರಾಯುಕ್ತೆ ಬಿ.ಶುಭಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ ಹಾಗೂ ಉಪಾಧ್ಯಕ್ಷ ಟಿ.ಎಸ್.ಪ್ರಕಾಶ್ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X