Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಫಾಝಿಲ್ಸ್ ಕ್ರಿಯೇಶನ್ಸ್...

ಮಂಗಳೂರು: ಫಾಝಿಲ್ಸ್ ಕ್ರಿಯೇಶನ್ಸ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ29 Jun 2018 6:37 PM IST
share
ಮಂಗಳೂರು: ಫಾಝಿಲ್ಸ್ ಕ್ರಿಯೇಶನ್ಸ್ ಶುಭಾರಂಭ

ಮಂಗಳೂರು, ಜೂ. 29: ನಗರದ ಸಂತ ಅಲೋಶಿಯಸ್ ಕಾಲೇಜಿನ ಸಾನಿಧ್ಯ ಸಭಾಂಗಣದಲ್ಲಿ ಶುಕ್ರವಾರ ಭಾರತದ ಅತ್ಯಂತ ಕಿರಿಯ ಸಿಇಒ ಗಳಲ್ಲಿ ಓರ್ವ ಹಾಗೂ ಮಂಗಳೂರಿನ ವಿದ್ಯಾರ್ಥಿ ಹಾಗು ಯುವ ಉದ್ಯಮಿ ಮೂಸಾ ಫಾಝಿಲ್ ಅವರ ನೂತನ ಕಂಪೆನಿ ‘ಫಾಝಿಲ್ಸ್ ಕ್ರಿಯೇಶನ್ಸ್’ಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ www.fazilcreations.com ವೆಬ್‌ಸೈಟ್, ನೂತನ ಕಂಪೆನಿ ‘ಎಫ್ ಸಿ ಕಾರ್ಟ್ ಡಾಟ್ ಇನ್’(fckart.in) ಲೋಗೋ ಹಾಗೂ ಕೈಪಿಡಿ ಬಿಡುಗಡೆಗೊಳಿಸಲಾಯಿತು

ಮುಖ್ಯ ಅತಿಥಿಯಾಗಿ ಆಗಮಿಸಿದ ಯಲೆ ಲಾಕ್ಸ್‌ನ ವಿತರಕ ಕೆ. ವಿನಾಯಕ ಪ್ರಭು ಮಾತನಾಡಿ, ಗುರಿಯಿಲ್ಲದೆ ಯಾವುದೇ ವ್ಯಾಪಾರ, ವಹಿವಾಟು ನಡೆಸುವುದು ಅಸಾಧ್ಯ. ಹಾಕಿಕೊಂಡ ಗುರಿಯನ್ನು ವಿಭಿನ್ನ ರೀತಿಯಲ್ಲಿ ಕಾರ್ಯರೂಪಕ್ಕೆ ತಂದಾಗ ಯಶಸ್ಸು ಲಭಿಸುತ್ತದೆ ಎಂದರು.

ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ವಸ್ತುವನ್ನು ಗುರುತಿಸಿಕೊಂಡು ಉತ್ಪಾದನೆ ಮಾಡಲು ಮುಂದಾಗಬೇಕು. ಬೇಡಿಕೆ ಇಲ್ಲದ್ದನ್ನು ಉತ್ಪಾದಿಸಿದರೆ ಯಾವುದೇ ಲಾಭವನ್ನು ತಂದು ಕೊಡುವುದಿಲ್ಲ. ವ್ಯಾಪಾರ ಆರಂಭಿಸುವ ಮೊದಲು ಯಾವುದೇ ಲಾಭವನ್ನು ಅಪೇಕ್ಷಿಸಬಾರದು. ಕ್ರಮೇಣ ಗ್ರಾಹಕರು ಹೆಚ್ಚಿದಂತೆ ಕಂಪೆನಿಗೆ ಲಾಭದಾಯವಾಗುತ್ತಾ ಹೋಗುತ್ತದೆ ಎಂದು ಹೇಳಿದರು.

ಜಗತ್ತಿನಲ್ಲಿ ಕುತೂಹಲದಿಂದಲೇ ಎಲ್ಲ ನಡೆಯುತ್ತಿರುವುದು. ಉತ್ಪಾದನಾ ವಸ್ತುವಿನ ಉತ್ತಮ ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಪ್ರಥಮವಾಗಿ ಬೃಹತ್ ಮೊತ್ತದ ವಿಚಾರಗಳಿಂದ ದೂರ ಇರಬೇಕು. ಕಾಲಕ್ರಮೇಣ ಅಭಿವೃದ್ಧಿಯನ್ನು ಕಾಣಬಹುದಾಗಿದೆ. ಇಲ್ಲಿ ತಾಳ್ಮೆ ವಹಿಸುವುದು ತುಂಬ ಅಗತ್ಯವಾಗಿರುತ್ತದೆ ಎಂದರು.

ಮುಂಬೈ ಮಹಾನಗರದಲ್ಲಿ ಐಐಟಿ ಶಿಕ್ಷಣ ಪಡೆದಂತಹ ತುಂಬಾ ಜನ ಚಹಾದ ವ್ಯಾಪಾರ ಮಾಡುತ್ತಿದ್ದಾರೆ. ಕಡಿಮೆ ಖರ್ಚಿನಲ್ಲಿ, ಬುದ್ಧಿವಂತಿಕೆಯನ್ನು ಬಳಸಿ ವ್ಯವಹಾರ ಮಾಡಿದ ಹಲವರು ಇಂದು ದಿನವೊಂದಕ್ಕೆ ಲಕ್ಷಾಂತರ ರೂ. ಗಳಿಸುತ್ತಿದ್ದಾರೆ. ಯಾವ ಕೆಲಸ ಮಾಡುತ್ತಿದ್ದೀರಿ ಎನ್ನುವುದು ಮುಖ್ಯವಲ್ಲ. ಕೆಲಸ ಮಾಡುವ ವಿಧಾನ ಮುಖ್ಯವಾಗುತ್ತದೆ ಎಂದು ಹೇಳಿದರು.

ನೂತನ ವೆಬ್‌ಸೈಟ್ ಅನಾವರಣಗೊಳಿಸಿ ಮಾತನಾಡಿದ ವಿಶ್ವಾಸ್ ಬಾವ ಬಿಲ್ಡರ್ಸ್‌ನ ಅಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಯಾವಾಗಲೂ ಸಣ್ಣ ಪ್ರಮಾಣದಿಂದಲೇ ವ್ಯಾಪಾರ-ವಹಿವಾಟನ್ನು ಪ್ರಾರಂಭಿಸಬೇಕು. ಜೀವನದಲ್ಲಿ ತಾಳ್ಮೆ ಎನ್ನುವುದು ಮುಖ್ಯ. ಸದಾ ಏನಾದರೂ ಕೆಲಸವನ್ನು ಮಾಡುತ್ತಲೇ ಇರಬೇಕು. ಯಾವುದನ್ನೂ ವಿಚಾರ ಮಾಡದೇ ಸುಮ್ಮನೆ ಕುಳಿತು ಸಮಯ ಹಾಳು ಮಾಡುವವನೇ ನಿಜವಾದ ಅಂಗವಿಕಲ ಎಂದು ಹೇಳಿದರು.

ಫಾಝಿಲ್ಸ್ ಕ್ರಿಯೇಶನ್ಸ್‌ನ ಸಿಇಒ ಮೂಸಾ ಫಾಝಿಲ್ ಮಾತನಾಡಿ, ಫಾಝಿಲ್ಸ್ ಕ್ರಿಯೇಶನ್ಸ್ ಡಿಜಿಟಲ್ ಡಿಸೈನ್, ವೆಬ್‌ಸೈಟ್ ಮತ್ತು ಗ್ರಾಫಿಕ್ ಡಿಸೈನ್‌ಗಳಲ್ಲಿ ಪರಿಣತಿಯನ್ನು ಪಡೆದಿದೆ. ಮಾತ್ರವಲ್ಲದೆ ಸಂಸ್ಥೆಯು ಮಲ್ಟಿ ಬ್ರಾಂಡ್‌ಗಳ ಆನ್‌ಲೈನ್ ಸ್ಟೋರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದೆ. ಫಾಝಿಲ್ಸ್ ಕ್ರಿಯೇಶನ್ಸ್ ತಂಡವು ಗ್ರಾಹಕರೊಂದಿಗೆ ಉತ್ತಮವಾದ ಸಂವಹನವನ್ನು ಹೊಂದಲಿದೆ. ವಿಭಿನ್ನ ಯೋಜನೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದರು.

ಇದರ ಜತೆಗೆ ಸಾಮಾಜಿಕ ಕಳಕಳಿಯ ಕಾರ್ಯವನ್ನೂ ಸಂಸ್ಥೆ ಮಾಡುತ್ತಿದೆ. ಪ್ರತಿ ಮಗು ಶಿಕ್ಷಣ ಪಡೆಯಬೇಕು. ಉತ್ತಮ ಬದುಕನ್ನು ಪಡೆಯುವುದು ಎಲ್ಲರ ಹಕ್ಕು ಆಗಿದೆ. ಕಡಿಮೆ ಆದಾಯವನ್ನು ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳ ವಿತರಣೆಯನ್ನೂ ಸಂಸ್ಥೆ ಮಾಡುತ್ತಿದೆ ಎಂದು ಅವರು ಹೇಳಿದರು.

ಆಝಾದ್ ಹಾರ್ಡ್‌ವೇರ್‌ನ ಆಡಳಿತ ನಿರ್ದೇಶಕ ಮನ್ಸೂರ್ ಅಹ್ಮದ್ ಆಝಾದ್ ‘ಎಫ್ ಸಿ ಕಾರ್ಟ್ ಡಾಟ್ ಇನ್’ ಲೋಗೋ ಅನಾವರಣಗೊಳಿಸಿದರು.
ಸಮಾರಂಭದಲ್ಲಿ ಎಕ್ಸ್‌ಪರ್ಟೈಸ್ ಇಂಡಸ್ಟ್ರೀಸ್‌ನ ಆಡಳಿತ ಪಾಲುದಾರ ಮುಹಮ್ಮದ್ ಶಾವಾಝ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X