Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ...

ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ

ಸರಣಿ 2-0 ಕೈ ವಶ: ರಾಹುಲ್ 70, ರೈನಾ 69

ವಾರ್ತಾಭಾರತಿವಾರ್ತಾಭಾರತಿ29 Jun 2018 11:30 PM IST
share
ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ

ಡಬ್ಲಿನ್, ಜೂ.29: ಐರ್ಲೆಂಡ್ ವಿರುದ್ಧದ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಭಾರತ 143 ರನ್‌ಗಳ ಭರ್ಜರಿ ಜಯ ಗಳಿಸಿದ್ದು, 2 ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.

ಗೆಲುವಿಗೆ 214 ರನ್‌ಗಳ ಸವಾಲು ಪಡೆದ ಐರ್ಲೆಂಡ್ 12.3 ಓವರ್‌ಗಳಲ್ಲಿ 70 ರನ್‌ಗಳಿಗೆ ಆಲೌಟಾಗಿದೆ.

ಭಾರತ 213/4: 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 213 ರನ್ ಗಳಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಟೀಮ್ ಇಂಡಿಯಾ ಪರ ಆರಂಭಿಕ ದಾಂಡಿಗ ಲೋಕೇಶ್ ರಾಹುಲ್ 70 ರನ್(36ಎ, 3ಬೌ,6ಸಿ) ಮತ್ತು ಸುರೇಶ್ ರೈನಾ 69 ರನ್(45ಎ, 5ಬೌ,3ಸಿ) ದಾಖಲಿಸಿ ಐರ್ಲೆಂಡ್‌ಗೆ ಕಠಿಣ ಸವಾಲು ವಿಧಿಸಲು ನೆರವಾದರು.

 ತಂಡದ ಸ್ಕೋರ್ 2.4 ಓವರ್‌ಗಳಲ್ಲಿ 22 ರನ್‌ಗಳಾಗುವಷ್ಟರಲ್ಲಿ ಆರಂಭಿಕ ದಾಂಡಿಗ ನಾಯಕ ವಿರಾಟ್ ಕೊಹ್ಲಿ ಚೇಸ್ ಎಸೆತದಲ್ಲಿ ಡೊಕ್ರೇಲ್‌ಗೆ ಕ್ಯಾಚ್ ನೀಡಿದರು. ಎರಡನೇ ವಿಕೆಟ್‌ಗೆ ರಾಹುಲ್ ಮತ್ತು ರೈನಾ 106 ರನ್‌ಗಳ ಜೊತೆಯಾಟ ನೀಡಿದರು. ರಾಹುಲ್ 13ನೇ ಓವರ್‌ನ ಮೊದಲ ಎಸೆತದಲ್ಲಿ ಕೆವಿನ್ ಒ ಬ್ರಿಯಾನ್‌ಗೆ ರಿಟರ್ನ್ ಕ್ಯಾಚ್ ನೀಡಿ ವಾಪಸಾದರು. ಬಳಿಕ ಕ್ರೀಸ್‌ಗೆ ಆಗಮಿಸಿದ ರೋಹಿತ್ ಶರ್ಮಾ ಖಾತೆ ತೆರೆಯದೆ ನಿರ್ಗಮಿಸಿದರು. 17.3ನೇ ಓವರ್‌ನಲ್ಲಿ ಸುರೇಶ್ ರೈನಾ ಔಟಾದರು. ಐದನೇ ವಿಕೆಟ್‌ಗೆ ಮನೀಷ್ ಪಾಂಡೆ ಮತ್ತು ಹಾರ್ದಿಕ್ ಪಾಂಡ್ಯ ಮುರಿಯದ ಜೊತೆಯಾಟದಲ್ಲಿ 44 ರನ್ ಜಮೆ ಮಾಡಿದರು.

ಮನೀಶ್ ಪಾಂಡೆ ಔಟಾಗದೆ 21 ರನ್, ಹಾರ್ದಿಕ್ ಪಾಂಡ್ಯ ಔಟಾಗದೆ 32 ರನ್(9ಎ, 1ಬೌ,4ಸಿ) , ನಾಯಕ ವಿರಾಟ್ ಕೊಹ್ಲಿ 9ರನ್ ಗಳಿಸಿದರು. ರೋಹಿತ್ ಶರ್ಮಾ (0) ಖಾತೆ ತೆರೆಯದೆ ನಿರ್ಗಮಿಸಿದರು.

  ಐರ್ಲೆಂಡ್ ತಂಡದ ಕೆವಿನ್ ಒ ಬ್ರಿಯನ್ 40ಕ್ಕೆ 3 ಮತ್ತು ಚೇಸ್ 42ಕ್ಕೆ 1 ವಿಕೆಟ್ ಪಡೆದರು.

ಟ್ವೆಂಟಿ -20: ಕನಿಷ್ಠ ಮೊತ್ತಕ್ಕೆ ಭಾರತ ವಿರುದ್ಧ  ಆಲೌಟ್  

70 ಐರ್ಲೆಂಡ್ , ಡಬ್ಲಿನ್, 2018*
80 ಇಂಗ್ಲೆಂಡ್ , ಕೊಲಂಬೊ  ಆರ್ ಪಿಎಸ್  2012
82 ಶ್ರೀಲಂಕಾ , ವಿಶಾಖಪಟ್ಟಣ , 2016
83 ಪಾಕಿಸ್ತಾನ , ಮಿರ್ಪುರ , 2016
86  ಆಸ್ಟ್ರೇಲಿಯ  ಮಿರ್ಪುರ, 2014
87 ಶ್ರೀಲಂಕಾ , ಕಟಕ್, 2017

ಟ್ವೆಂಟಿ -20: ಭಾರತಕ್ಕೆ  ವಿವಿಧ ತಂಡಗಳ ವಿರುದ್ಧ ಭಾರೀ ಅಂತರದಲ್ಲಿ ಗೆಲುವು

143- ಐರ್ಲೆಂಡ್, ಡಬ್ಲಿನ್, 2018*
93 -  ಶ್ರೀಲಂಕಾ, ಕಟಕ್, 2017
90 -ಇಂಗ್ಲೆಂಡ್, ಕೊಲಂಬೊ  ಆರ್ ಪಿಎಸ್ , 2012
88 -ಶ್ರೀಲಂಕಾ ,  ಇಂದೋರ್, 2017
76 -ಐರ್ಲೆಂಡ್, ಡಬ್ಲಿನ್ , 2018

share
ವಾರ್ತಾಭಾರತಿ
ವಾರ್ತಾಭಾರತಿ
Next Story
X