Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಕರ ರಕ್ಷಣೆಗೆ ಕಾನೂನು ಜಾರಿಗೆ...

ಶಿಕ್ಷಕರ ರಕ್ಷಣೆಗೆ ಕಾನೂನು ಜಾರಿಗೆ ಪ್ರಯತ್ನ: ಆಯನೂರು ಮಂಜುನಾಥ್

ವಾರ್ತಾಭಾರತಿವಾರ್ತಾಭಾರತಿ30 Jun 2018 9:31 PM IST
share
ಶಿಕ್ಷಕರ ರಕ್ಷಣೆಗೆ ಕಾನೂನು ಜಾರಿಗೆ ಪ್ರಯತ್ನ: ಆಯನೂರು ಮಂಜುನಾಥ್

ಉಡುಪಿ, ಜೂ.30: ತಪ್ಪು ಮಾಡದಿದ್ದರೂ ಸುಳ್ಳು ಆರೋಪಗಳನ್ನು ಹೊರಿಸಿ ಶಿಕ್ಷಕರ ಮೇಲೆ ಅನಾವಶ್ಯಕವಾಗಿ ಹಲ್ಲೆಗಳು ನಡೆಯುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈದ್ಯರಂತೆ ಶಿಕ್ಷಕರ ರಕ್ಷಣೆಗೆ ಕಾನೂನನ್ನು ನನ್ನ ಆರು ವರ್ಷಗಳ ಅವಧಿಯೊಳಗೆ ಸದನದಲ್ಲಿ ಜಾರಿಗೆ ತರುವಂತೆ ಪ್ರಯತ್ನಿಸಲಾ ಗುವುದು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಉಡುಪಿ ಜಿಲ್ಲಾ ಘಟಕ ಮತ್ತು ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ ಆಶ್ರಯ ದಲ್ಲಿ ಶನಿವಾರ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ 2018-19ನೆ ಸಾಲಿನ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು ಸರ್ವಸದಸ್ಯರ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜನಸಾಮಾನ್ಯರಿಗೆ ಸಿಗುವ ಸಾಮಾಜಿಕ ರಕ್ಷಣಾ ಯೋಜನೆಗಳು ಶಿಕ್ಷಕರಿಗೆ ಸಿಗುತ್ತಿಲ್ಲ. ಶಿಕ್ಷಕಿಯರಿಗೆ ಹೆರಿಗೆ ರಜೆ ಇಲ್ಲ, ರಜೆ ಕೊಟ್ಟರೂ ಸಂಬಳ ಇಲ್ಲ. ಹೀಗೆ ಶಿಕ್ಷಕರು ಎಲ್ಲ ರೀತಿಯ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಪಾಠ ಮಾಡಲು ಇರುವ ಶಿಕ್ಷಕರನ್ನು ಅಡುಗೆ ಸೇರಿದಂತೆ ಎಲ್ಲ ಕೆಲಸಗಳಿಗೂ ಬಳಸಿ ಕೊಳ್ಳಲಾಗುತ್ತಿದೆ. ಶಿಕ್ಷಕರು ಒತ್ತಡ ಹಾಗೂ ಬಿಡುವಿಲ್ಲದೆ ಮಾಡುತ್ತಿರುವ ಕೆಲಸ ಗಳಿಂದ ಅವರ ಜ್ಞಾನ ವೃದ್ಧಿ ಸಾಧ್ಯವಾಗುತ್ತಿಲ್ಲ. ಯಾವುದೇ ಇಲಾಖೆಯಲ್ಲಿ ಇರದ ಕೆಲಸ ಹೊರೆ ಈ ಶಿಕ್ಷಕರ ಕ್ಷೇತ್ರದಲ್ಲಿ ಯಾಕೆ ಎಂದು ಅವರು ಪ್ರಶ್ನಿಸಿದರು.

ತಮ್ಮ ಮೇಲೆ ನಡೆಯುತ್ತಿರುವ ಶೋಷಣೆ, ಅನ್ಯಾಯವನ್ನು ಪ್ರತಿಭಟಿಸಲು ಆಗದ ಶಿಕ್ಷಕರಿಗೆ, ಮಕ್ಕಳಿಗೆ ಝಾನ್ಸಿ ರಾಣಿ ರೀತಿ ಹೋರಾಟ ಮಾಡಬೇಕು, ಟಿಪ್ಪು ಸುಲ್ತಾನ್ ರೀತಿ ಇರಬೇಕು ಎಂದು ಪಾಠ ಮಾಡಲು ಏನು ನೈತಿಕತೆ ಇದೆ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತಂದರೆ ಮಾತ್ರ ಶಿಕ್ಷಕರ ಎಲ್ಲರ ಎಲ್ಲ ಸಮಸ್ಯೆ ಬಗೆಹರಿಯಲು ಸಾಧ್ಯ. ಗುಲಾಮಿತನದಿಂದ ಶಿಕ್ಷಕರ ಕ್ಷೇತ್ರವನ್ನು ಮುಕ್ತ ಮಾಡಬೇಕಾಗಿರುವುದು ಇಂದಿನ ಅಗತ್ಯ ಎಂದರು.

ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೆಗೌಡ ಮಾತ ನಾಡಿದರು. ಅಧ್ಯಕ್ಷತೆಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ವಹಿಸಿದ್ದರು. ಈ ಸಂದರ್ಭದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರ ಸಂಘದ ವಿವಿಧ ಬೇಡಿಕೆಗಳನ್ನು ಶಾಸಕರುಗಳಿಗೆ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಚ್.ಕೆ.ಮಂಜುನಾಥ್, ಮುಖ್ಯೋಪಾಧ್ಯಾಯರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎನ್.ಚಂದ್ರೆಗೌಡ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮಾತನಾಡಿದರು.

ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾಧ್ಯಕ್ಷ ದಿನಕರ ಆರ್.ಶೆಟ್ಟಿ ಉಪಸ್ಥಿತ ರಿದ್ದರು. ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ ಸ್ವಾಗತಿಸಿದರು. ಅಶೋಕ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಅವೈಜ್ಞಾನಿಕ ಸುತ್ತೋಲೆ: ಬೋಜೇಗೌಡ ಗರಂ

ಶಿಕ್ಷಕರ ರಜಾದಿನಗಳನ್ನು ಕಡಿತಗೊಳಿಸುವ, ವಾರದಲ್ಲಿ 16ಗಂಟೆಗಳ ಬದಲು 24 ಗಂಟೆಗಳ ಕಾಲ ಪಾಠ ಮಾಡಬೇಕೆಂಬ ಅವೈಜ್ಞಾನಿಕ ಸುತ್ತೋಲೆಗಳನ್ನು ಐಎಎಸ್ ಅಧಿಕಾರಿಗಳು ಹೊರಡಿಸುತ್ತಿದ್ದು, ಇದರಿಂದ ಶಿಕ್ಷಕರು ಹಾಗೂ ಉಪನ್ಯಾಸಕರು ಬಹಳಷ್ಟು ತೊಂದರೆ ಅನುಭವಿಸುವಂತಾಗಿದೆ. ಐಎಎಸ್ ಅಧಿಕಾರಿಗಳು ಇತಿಮಿತಿಯಲ್ಲಿ ಹೋಗದಿದ್ದರೆ ಅವರ ವಿರುದ್ಧ ಸದನದಲ್ಲಿ ಧ್ವನಿ ಎತ್ತಲಾಗುವುದು ಎಂದು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್. ಎಲ್.ಬೋಜೇಗೌಡ ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X