ಎ.ಜೆ.ಆಸ್ಪತ್ರೆಯಿಂದ ಹಿರಿಯ ವೈದ್ಯರಿಗೆ ಸನ್ಮಾನ
ಮಂಗಳೂರು, ಜೂ.30: ಜುಲೈ 1ರಂದು ಜಗತ್ತಿನಾದ್ಯಂತ ಆಚರಿಸಲ್ಪಡುವ ವಿಶ್ವ ವೈದ್ಯರ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದ ಅಂಗವಾಗಿ ಶನಿವಾರ ನಗರದ ಎ.ಜೆ.ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಾದ ಡಾ. ಪ್ರಭಾಕರ ರಾವ್ , ಎ.ಜೆ.ಆಸ್ಪತ್ರೆಯ ವಿಶ್ರಾಂತ ಡೀನ್ ಡಾ.ರಮೇಶ್ ಪೈ, ಡಾ.ಲತಾ ಶರ್ಮಾ ಬಜ್ಪೆ ಪರಿಸರದಲ್ಲಿ 40 ವರ್ಷಗಳಿಂದ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಜಯರಾಮ ಶೆಟ್ಟಿ, ದೇರಬೈಲ್ ಕೊಂಚಾಡಿಯಲ್ಲಿ 37 ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಡಾ. ಕುಮಾರ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ,ಎ.ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ.ಪ್ರಶಾಂತ್ ಮಾರ್ಲ, ನಿರ್ದೇಶಕ ಮತ್ತು ವೈದ್ಯಕೀಯ ವಿಭಾಗದ ಆಡಳಿತಾಧಿಕಾರಿ ಡಾ.ಅಮಿತ್ ಮಾರ್ಲ, ಎ.ಜೆ.ವೈದ್ಯಕೀಯ ವಿಜ್ಞಾನ ವಿಭಾಗದ ಡೀನ್ ಡಾ.ಅಶೋಕ್ ಹೆಗ್ಡೆ, ಎ.ಜೆ.ಇನ್ಸಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ವಿಭಾಗದ ಪ್ರಾಂಶುಪಾಲ ಡಾ.ರಾಘವೇಂದ್ರ ಕಿಣಿ ಮೊದಲಾದವರು ಹಿರಿಯ ವೈದ್ಯರನ್ನು ಸನ್ಮಾನಿಸಿದರು.
ಎ.ಜೆ.ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಸಿಸ್ಟೆಂಟ್ ಪ್ರೊಫೆಸರ್ ಡಾ.ದೀಪ್ತಿ ವಿ.ಎಚ್ ಕಾರ್ಯಕ್ರಮ ನಿರೂಪಿಸಿದರು. ಅಸಿಸ್ಟೆಂಟ್ ಪ್ರೊಫೆಸರ್ ಡಾ.ಶಿಲ್ಪಾ ಮುಲ್ಕಿ ವಂದಿಸಿದರು.