Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುತ್ರ ಅಂತರ್ಧರ್ಮೀಯ ವಿವಾಹವಾಗಿದ್ದೇ...

ಪುತ್ರ ಅಂತರ್ಧರ್ಮೀಯ ವಿವಾಹವಾಗಿದ್ದೇ ತಪ್ಪಾಯ್ತು: ತಂದೆಯಿಂದ ಉಗುಳು ನೆಕ್ಕಿಸಿದ ದುಷ್ಕರ್ಮಿಗಳು

ವಾರ್ತಾಭಾರತಿವಾರ್ತಾಭಾರತಿ1 July 2018 8:17 PM IST
share
ಪುತ್ರ ಅಂತರ್ಧರ್ಮೀಯ ವಿವಾಹವಾಗಿದ್ದೇ ತಪ್ಪಾಯ್ತು: ತಂದೆಯಿಂದ ಉಗುಳು ನೆಕ್ಕಿಸಿದ ದುಷ್ಕರ್ಮಿಗಳು

ಬುಲಂದ್‌ಶಹರ್ (ಉತ್ತರಪ್ರದೇಶ), ಜು. 2: ಪುತ್ರ ಬೇರೊಂದು ಧರ್ಮದ ಯುವತಿಯನ್ನು ವಿವಾಹವಾದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ತನ್ನ ಉಗುಳನ್ನೇ ನೆಕ್ಕುವಂತೆ ತಂದೆಯನ್ನು ಬಲವಂತಪಡಿಸಿದ ಅಮಾನವೀಯ ಘಟನೆ ಬುಲಂದ್‌ಶಹರ್‌ನ ಸೊಂಡಾ ಹಬೀಬ್‌ಪುರ್ ಗ್ರಾಮದಲ್ಲಿ ನಡೆದಿದೆ.

ಈ ಪ್ರಕರಣದ ಕುರಿತು ಖುರ್ಜಾ ನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಕೃಷ್ಣ ಬುಲಂದ್‌ಶಹರ್‌ನ ಸೊಂಡಾ ಹಬೀಬ್‌ಪುರ್ ಗ್ರಾಮದ ನಿವಾಸಿ. ಅವರ 21 ವರ್ಷದ ಪುತ್ರ ಶಿವಕುಮಾರ್ ಅದೇ ಗ್ರಾಮದ ನಿವಾಸಿ ರಝಿಯಾ (18)ಳೊಂದಿಗೆ ಜೂನ್ 6ರಂದು ಪರಾರಿಯಾಗಿದ್ದ. ಈ ಸಂಬಂಧ ರಝಿಯಾ ಹೆತ್ತವರು ಪೊಲೀಸ್ ದೂರು ನೀಡಿದ್ದರು. ಶ್ರೀಕೃಷ್ಣ ಜೂನ್ 19ರಂದು ಅವರಿಬ್ಬರನ್ನು ದಿಲ್ಲಿಯಲ್ಲಿ ಪತ್ತೆ ಮಾಡಿ ಗ್ರಾಮಕ್ಕೆ ಕರೆ ತಂದಿದ್ದರು ಹಾಗೂ ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯದಲ್ಲಿ ರಝಿಯಾ ತನ್ನ ಸ್ವಂತ ಇಚ್ಛೆಯಿಂದ ಶಿವ ಕುಮಾರ್‌ನೊಂದಿಗೆ ತೆರಳುವುದಾಗಿ ಹೇಳಿದ್ದಳು. ನ್ಯಾಯಾಲಯದ ಅನುಮತಿ ಹಿನ್ನೆಲೆಯಲ್ಲಿ ಶಿವಕುಮಾರ್ ಹಾಗೂ ರಝಿಯಾ ವಿವಾಹವಾಗಿದ್ದರು. ಭೀತಿಯ ಕಾರಣಕ್ಕೆ ಶ್ರೀಕೃಷ್ಣ ತನ್ನ ಮಗನಿಗೆ ಗ್ರಾಮ ತ್ಯಜಿಸುವಂತೆ ಹೇಳಿದ್ದರು. ಅದರಂತೆ ದಂಪತಿ ಗ್ರಾಮ ತ್ಯಜಿಸಿದ್ದರು.

ಜೂನ್ 26ರಂದು ಕೃಷ್ಣ ಅವರ ಸಹೋದರನಿಗೆ ಒಂದು ಫೋನ್ ಕರೆ ಬಂದಿತ್ತು. ಯುವತಿಯ ಕುಟುಂಬ ಈ ಪ್ರಕರಣವನ್ನು ಇತ್ಯರ್ಥ ಮಾಡಲು ಬಯಸಿದ್ದಾರೆ. ಆದುದರಿಂದ ಕೃಷ್ಣ ಅವರನ್ನು ಪಂಚಾಯತ್‌ಗೆ ಕರೆದುಕೊಂಡು ಬರುವಂತೆ ತಿಳಿಸಲಾಗಿತ್ತು. ಕೃಷ್ಣ ತನ್ನ ಇಬ್ಬರು ಸಹೋದರರೊಂದಿಗೆ ಸ್ಥಳಕ್ಕೆ ತಲುಪಿದಾಗ ಅಲ್ಲಿ ಯಾವುದೇ ಪಂಚಾಯತ್ ಕರೆದಿರಲಿಲ್ಲ.

ಅಲ್ಲಿ ಸುಮಾರು 100 ಜನರು ಸೇರಿದ್ದರು. ಹೆಚ್ಚಿನವರು ಸ್ಥಳೀಯ ಮೇಲ್ಜಾತಿ ಜನರು ಹಾಗೂ ಯುವತಿಯ ಕುಟುಂಬದವರು. ಅಲ್ಲಿ ಕೃಷ್ಣ ಅವರು ಖುರ್ಚಿಯಲ್ಲಿ ಕುಳಿತುಕೊಂಡಾಗ ಸ್ಥಳೀಯ ನಾಯಕನೋರ್ವ ಅವರ ಕಿವಿ ಎಳೆದು ನೆಲದಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದ ಎಂದು ಮೂಲಗಳು ತಿಳಿಸಿವೆ.  ‘‘ನನ್ನ ಉಗುಳನ್ನೇ ನೆಕ್ಕುವಂತೆ ಹೇಳಲಾಯಿತು. ನಾನು ಹಾಗೆ ಮಾಡಲು ಒಪ್ಪಲಿಲ್ಲ. ಅದಕ್ಕಾಗಿ ಅವರು ನನಗೆ ಥಳಿಸಿದರು. ಅಂತಿಮವಾಗಿ ನಾನು ನನ್ನ ಉಗುಗಳನ್ನು ನೆಕ್ಕಿದೆ’’ ಎಂದು ಕೃಷ್ಣಾ ತಿಳಿಸಿದ್ದಾರೆ.

‘‘ಇದಲ್ಲದೆ ಕುಟುಂಬದೊಂದಿಗೆ ಗ್ರಾಮ ತ್ಯಜಿಸುವಂತೆ ತಿಳಿಸಲಾಯಿತು. ಇಲ್ಲದೇ ಇದ್ದರೆ ಘೋರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಒಡ್ಡಲಾಯಿತು. ನಾನು ಗ್ರಾಮ ತ್ಯಜಿಸಲು ನಿರಾಕರಿಸಿದಾಗ ಅವರು ನನಗೆ ಥಳಿಸಿದರು. ಇಬ್ಬರು ನನ್ನನ್ನು ದೂರ ಕರೆದೊಯ್ಯುವ ವರೆಗೆ ನನಗೆ ಥಳಿಸಿದರು’’ ಎಂದು ಅವರು ಹೇಳಿದ್ದಾರೆ. ಈಗ ಕೃಷ್ಣ ಗ್ರಾಮ ತ್ಯಜಿಸಿದ್ದಾರೆ ಹಾಗೂ ಪೊಲೀಸ್ ಠಾಣೆ ಸಮೀಪ ವಾಸಿಸುತ್ತಿದ್ದಾರೆ. ಅವರ ಕುಟುಂಬ ಅದೇ ಗ್ರಾಮದಲ್ಲಿ ವಾಸಿಸುತ್ತಿದೆ. ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ.

 ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಹಾಗೂ ಯುವತಿಯ ತಂದೆ ಭುರಾ ಖಾನ್, ನಾರಾಯಣ ಸೋಲಂಕಿ, ಖಿಲ್ಲು, ಕುಲ್‌ದೀಪ್ ಹಾಗೂ ವಿಷ್ಣು ಅವರನ್ನು ಆರೋಪಿಗಳು ಎಂದು ಗುರುತಿಸಲಾಗಿದೆ. ಭುರಾ ಖಾನ್ ಹಾಗೂ ಖಿಲ್ಲು ಅವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕ್ಷಕ ಕೃಷ್ಣ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X