Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸರಕಾರದ ಜಿಎಸ್‌ಟಿ ವಿರೋಧಿಸಿ ಹೇ...

ಕೇಂದ್ರ ಸರಕಾರದ ಜಿಎಸ್‌ಟಿ ವಿರೋಧಿಸಿ ಹೇ ರಾಮ್ ರಾಷ್ಟ್ರೀಯ ಚಳುವಳಿ

ವಾರ್ತಾಭಾರತಿವಾರ್ತಾಭಾರತಿ1 July 2018 8:33 PM IST
share
ಕೇಂದ್ರ ಸರಕಾರದ ಜಿಎಸ್‌ಟಿ ವಿರೋಧಿಸಿ ಹೇ ರಾಮ್ ರಾಷ್ಟ್ರೀಯ ಚಳುವಳಿ

ಬೆಂಗಳೂರು, ಜು. 1: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಜಿಯಾ ತೆರಿಗೆ ಮಾದರಿಯಲ್ಲಿ ಗ್ರಾಮೀಣ ಉತ್ಪಾದಕತೆಯ ಮೇಲೆ ಜಿಎಸ್ಪಿ ವಿಧಿಸಿ ದೇಶವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಹಿರಿಯ ರಂಗಕರ್ಮಿ ಪ್ರಸನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಪುರಭವನದ ಮುಂಬಾಗ ಗ್ರಾಮ ಸೇವಾ ಸಂಘದಿಂದ ಜಿಎಸ್‌ಟಿ ಜಾರಿಯಾಗಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೈಉತ್ಪನ್ನಗಳಿಗೆ ಕರಾಳ ದಿನವನ್ನಾಗಿ ‘ಹೇ ರಾಮ್’ ರಾಷ್ಟ್ರೀಯ ಚಳುವಳಿಗೆ ಚಾಲನೆ ನೀಡಿ, ಅವರು ಮಾತನಾಡಿದರು.

ಕೇಂದ್ರ ಸರಕಾರ ಗ್ರಾಮೀಣ ಕೈ ಉತ್ಪನ್ನಗಳ ಮೇಲೆ ಜಿಎಸ್‌ಟಿ ತೆರಿಗೆ ವಿಧಿಸಿರುವುದರಿಂದ ಬಡವರು ಹಳ್ಳಿಗಳಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ನಗರ ಪ್ರದೇಶಗಳಿಗೆ ಗುಳೇ ಹೋಗುತ್ತಿದ್ದಾರೆ. ಇದು 1947ರಲ್ಲಿ ಮುಹಮದ್ ಅಲಿ ಜಿನ್ಹಾ ದೇಶ ಒಡೆದ ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಬಡವರ ಉತ್ಪಾದಕತೆಯ ಮೇಲೆ ಹೇರಿರುವ ಜಿಎಸ್‌ಟಿ ತೆರಿಗೆಯನ್ನು ಈ ಕೂಡಲೆ ಶೂನ್ಯ ತೆರಿಗೆಗೆ ಇಳಿಸಬೇಕೆಂದು ಆಗ್ರಹಿಸಿದರು.

ಕೃಷಿ ವರಮಾನ ಹೆಚ್ಚಿಸುವಂತಹ ಸ್ವಾಮಿನಾಥನ್ ಸಮಿತಿ ವರದಿ ಜಾರಿ ಸೇರಿದಂತೆ ನಮ್ಮ ಅನೇಕ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು. ಸ್ಮಾರ್ಟ್‌ಸಿಟಿ ಹೆಸರಿನಲ್ಲಿ ಅಂಬಾನಿ, ಅದಾನಿಗಳ ಖಜಾನೆಗಳನ್ನು ತುಂಬಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ದುರ್ಬಳಕೆಗೆ ಬಿಡುವುದಿಲ್ಲ: ಗ್ರಾಮೀಣ ಪ್ರದೇಶದ ಯುವಕರು ಸೇರಿ, ಕೈ ಉತ್ಪಾದಕರು, ಗುಡಿ ಕೈಗಾರಿಕೆಯಲ್ಲಿ ತೊಡಗಿಸಿಕೊಂಡು ಸುಂದರವಾದ ಬದುಕನ್ನು ಕಟ್ಟಿಕೊಂಡರೆ ಮಾತ್ರ ರಾಮರಾಜ್ಯ ಸ್ಥಾಪನೆಯಾಗಬಲ್ಲದು ಎಂದ ಅವರು,  ನಾವು ರಾಮನ ಹೆಸರನ್ನು ದುರ್ಬಳಕೆ ಮಾಡಲು ಬಿಡುವುದಿಲ್ಲ. ಸೀತೆ ಪ್ರಕೃತಿಯ ಪ್ರತೀಕ, ಗ್ರಾಮೀಣಾಭಿವೃದ್ದಿಯಿಂದ ಸುಂದರ ಪ್ರಕೃತಿ ಪ್ರತೀಕ. ಇದನ್ನೆ ನಾಶಮಾಡಿ ರಾಮನ ಹೆಸರು ಹೇಳುವವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ಪ್ರಸನ್ನ ತಿಳಿಸಿದರು.

ಸಿಪಿಐಎಮ್ನ ಕೆ.ಎನ್.ನಾಗರಾಜ್ ಮಾತನಾಡಿ, ಪಾರಂಪರಿಕವಾಗಿ ಬಂದಿರುವ ಗ್ರಾಮೀಣ ಪ್ರದೇಶಗಳ ಕೌಶಲ್ಯಕ್ಕೆ ಉತ್ತೇಜನ ಸಿಗುತ್ತಿಲ್ಲ. ಬಂಡವಾಳಶಾಹಿಗಳ ಹಿತಾಸಕ್ತಿಗೋಸ್ಕರ ಕೋಮುವಾದಕ್ಕೆ ಉತ್ತೇಜನ ನೀಡುವುದು ಹಿಂದೂ ಧರ್ಮದ ಸಂರಕ್ಷಣೆಯಲ್ಲ ಎಂದರು.

ಹೋರಾಟಗಾರ್ತಿ ಕವಿತಾ ಕುರಗಂಟಿ ಮಾತನಾಡಿ, ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿರುವ ಜಿಎಸ್‌ಟಿ ಕಾನೂನು ಬಾಹಿರವಾಗಿದೆ ಎಂದು ಕೇಂದ್ರಕ್ಕೆ ಪತ್ರ ಬರೆಯಲಾಗಿತ್ತು. ವಿದೇಶಿ ಕಂಪೆನಿಗಳಿಗೆ ಒಪ್ಪಂದ ಮಾಡಿಕೊಂಡು ಕೇಂದ್ರಿಕೃತ ವ್ಯವಸ್ಥೆಯನ್ನು ಸೃಷ್ಟಿಸಿದೆ. ಕೃಷಿ ಕ್ಷೇತ್ರದಲ್ಲಿ ಸಾವಯವ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲು ದೃಢೀಕರಣ ಕಡ್ಡಾಯಗೊಳಿಸಿ ನಿಯಂತ್ರಣವನ್ನು ಸಾಧಿಸಲು ಹೊರಟಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಬಹುಭಾಷಾ ಚಿತ್ರನಟ ಕಿಶೋರ್, ಸಾಮಾಜಿಕ ಹೋರಾಟಗಾರ ಸಿ.ಯತಿರಾಜು, ಡಾ.ಎ.ಆರ್.ವಾಸವಿ, ಗೋಪಿಕೃಷ್ಣ, ಜಿಎಸ್ ಆರ್. ಕೃಷ್ಣನ್, ವಿಶಾಲ, ನಾಗರಾಜ ಮೂರ್ತಿ, ಶಾಮಲ ದೇವಿ, ಸನತ್ ಕುಮಾರ್ ಸೇರಿ ಗ್ರಾಮ ಸೇವಾ ಸಂಘದ ಕಾರ್ಯಕರ್ತರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X