Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳ ಕಳ್ಳರೆಂಬ ಶಂಕೆಯಿಂದ ಐವರನ್ನು...

ಮಕ್ಕಳ ಕಳ್ಳರೆಂಬ ಶಂಕೆಯಿಂದ ಐವರನ್ನು ಥಳಿಸಿ ಹತ್ಯೆ: 15 ಜನರ ಬಂಧನ

ವಾರ್ತಾಭಾರತಿವಾರ್ತಾಭಾರತಿ1 July 2018 9:14 PM IST
share
ಮಕ್ಕಳ ಕಳ್ಳರೆಂಬ ಶಂಕೆಯಿಂದ ಐವರನ್ನು ಥಳಿಸಿ ಹತ್ಯೆ: 15 ಜನರ ಬಂಧನ

ಹೊಸದಿಲ್ಲಿ,ಜು.1: ದೇಶದಲ್ಲಿ ಅಮಾಯಕರನ್ನು ಥಳಿಸಿ ಕೊಲ್ಲುತ್ತಿರುವ ಪ್ರಕರಣಗಳ ಸಾಲಿಗೆ ಹೊಸದಾಗಿ ಇನ್ನೊಂದು ಘಟನೆ ರವಿವಾರ ಸೇರ್ಪಡೆಗೊಂಡಿದೆ. ಧುಲೆ ಜಿಲ್ಲೆಯ ಸಾಕ್ರಿ ತಾಲೂಕಿನ ಬುಡಕಟ್ಟು ಗ್ರಾಮ ರೈನಪಾಡಾದಲ್ಲಿ ಮಕ್ಕಳ ಅಪಹರಣಕಾರರೆಂಬ ಶಂಕೆಯಿಂದ ಗ್ರಾಮಸ್ಥರು ಐವರನ್ನು ಬರ್ಬರವಾಗಿ ಥಳಿಸಿ ಹತ್ಯೆಗೈದಿದ್ದಾರೆ. ಮೃತರಲ್ಲಿ ಓರ್ವನನ್ನು ಸೊಲ್ಲಾಪುರ ಜಿಲ್ಲೆಯ ನಿವಾಸಿ ದಾದಾರಾವ್ ಭೋಸಲೆ ಎಂದು ಗುರುತಿಸಲಾಗಿದ್ದು,ಇನ್ನುಳಿದವರನ್ನು ಇನ್ನಷ್ಟೇ ಗುರುತಿಸಬೇಕಿದೆ. ಈ ಬರ್ಬರ ಹತ್ಯೆಗಳನ್ನು ನಡೆಸಿದ ಗುಂಪಿನಲ್ಲಿದ್ದ 15 ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದಾರೆ.

 ದೇಶದಲ್ಲಿ ಇತ್ತೀಚಿನ ಗುಂಪುಗಳಿಂದ ಥಳಿಸಿ ಹತ್ಯೆ ಪ್ರಕರಣಗಳಂತೆ ಇಲ್ಲಿಯೂ ವಾಟ್ಸಾಪ್ ವದಂತಿಗಳು ಪ್ರಮುಖ ಪಾತ್ರ ವಹಿಸಿವೆ. ಮಕ್ಕಳ ಅಪಹರಣಕಾರರ ಗುಂಪೊಂದು ಬಂದಿರುವ ಬಗ್ಗೆ ವದಂತಿಗಳು ವಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು,ಅವುಗಳನ್ನು ನಂಬಿದ ಜನರು ಮಕ್ಕಳ ಅಪಹರಣಕಾರರೆಂದು ಶಂಕಿಸಿ ಐವರನ್ನು ಹತ್ಯೆ ಮಾಡಿದ್ದಾರೆ. 15 ಜನರನ್ನು ಬಂಧಿಸಲಾಗಿದ್ದು,ತನಿಖೆಯು ಪ್ರಗತಿಯಲ್ಲಿದೆ ಎಂದು ಧುಲೆ ಎಸ್‌ಪಿ ಎಂ.ರಾಮಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಹತ್ಯೆಗೊಳಗಾದವರು ಆಗಷ್ಟೇ ಬಸ್ಸಿನಿಂದ ಇಳಿದಿದ್ದು,ವಾರದ ಸಂತೆಗಾಗಿ ಸೇರಿದ್ದ ಗ್ರಾಮಸ್ಥರು ಮಕ್ಕಳ ಅಪಹರಣಕಾರರೆಂದು ಶಂಕಿಸಿ ಅವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಡಿಜಿಪಿ ಕಚೇರಿಯ ಅಧಿಕಾರಿಯೋರ್ವರು ತಿಳಿಸಿದರು. ಮೃತದೇಹಗಳನ್ನು ಪಿಂಪಳನೇರ್ ಆಸ್ಪತ್ರೆಗೆ ಸಾಗಿಸಲಾಗಿದೆ.

ತನ್ಮಧ್ಯೆಇಂತಹುದೇ ಘಟನೆಯೊಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಮಗುವೊಂದನ್ನು ಅಪಹರಿಸಲು ಯತ್ನಿಸಿದ್ದರು ಎಂಬ ಶಂಕೆಯಿಂದ ಇಬ್ಬರನ್ನು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X