Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತರು ವಸ್ತುನಿಷ್ಠತೆಯಿಂದ ಕೆಲಸ...

ಪತ್ರಕರ್ತರು ವಸ್ತುನಿಷ್ಠತೆಯಿಂದ ಕೆಲಸ ನಿರ್ವಹಿಸಬೇಕು: ಶಾಸಕ ಎಂ.ಶ್ರೀನಿವಾಸ್

ಕನ್ನಡ ಪತ್ರಿಕಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 July 2018 9:59 PM IST
share
ಪತ್ರಕರ್ತರು ವಸ್ತುನಿಷ್ಠತೆಯಿಂದ ಕೆಲಸ ನಿರ್ವಹಿಸಬೇಕು: ಶಾಸಕ ಎಂ.ಶ್ರೀನಿವಾಸ್

ಮಂಡ್ಯ, ಜು.1: ಪತ್ರಕರ್ತರು ವಸ್ತುನಿಷ್ಠತೆಯಿಂದ ಕಾರ್ಯನಿರ್ವಹಿಸಬೇಕು. ಯಾವ ಮುಲಾಜಿಗೂ ಒಳಗಾಗಬಾರದು ಎಂದು ಶಾಸಕ ಎಂ.ಶ್ರೀನಿವಾಸ್ ಹೇಳಿದ್ದಾರೆ.

ಜಿಲ್ಲಾ ಪತ್ರಕರ್ತರ ಮತ್ತು ಮುದ್ರಣಕಾರರ ಸಹಕಾರ ಸಂಘದ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ರವಿವಾರ ನಡೆದ ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಮೈಸೂರು-ಬೆಂಗಳೂರು ಮಹಾನಗರಗಳ ನಡುವೆ ಇರುವ ಮಂಡ್ಯ ಕುಗ್ರಾಮವಾಗಿದೆ. ನನ್ನ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು. ಇದಕ್ಕೆ ಪತ್ರಕರ್ತರ ಮಾರ್ಗದರ್ಶನ ಸಹಕಾರ ಅಗತ್ಯ ಎಂದು ಅವರು ಮನವಿ ಮಾಡಿದರು.

ಪತ್ರಕರ್ತ ಡಿ.ಎನ್.ಶ್ರೀಪಾದು ಮಾತನಾಡಿ, ಪತ್ರಕರ್ತರು ಕೃಷಿ ಮತ್ತು ನೀರಿನ ಸದ್ಬಳಕೆ ಕುರಿತು ರೈತರಿಗೆ ಮನವರಿಕೆ ಮಾಡಿಕೊಡುವ ಜೊತೆಗೆ ಇತಿಹಾಸ ಹಾಗೂ ಸಂಸ್ಕೃತಿ ಪಸರಿಸುವ ರಾಯಭಾರಿಗಳಾಗಿ ಕೆಲಸ ಮಾಡಬೇಕು ಎಂದರು. ಮೈಷುಗರ್ ಕಾರ್ಖಾನೆ ಕಾರ್ಯನಿರ್ವಹಿಸಿದರೆ ಮತ್ತು ಕಾವೇರಿ ಹರಿದರೆ ಮಾತ್ರ ಈ ಪ್ರದೇಶದ ರೈತರ ಬದುಕು ಹಸನಾಗಲು ಸಾಧ್ಯ. ರೈತರಿಗೆ ಹನಿ ನೀರಾವರಿ ಅವಶ್ಯಕತೆ ಮತ್ತು ಇಸ್ರೇಲ್ ಮಾದರಿ ಕೃಷಿ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದು ಅವರು ಹೇಳಿದರು.

ದೇಶ ಸುತ್ತಿ, ಕೋಶ ಓದು ಎಂಬಂತೆ ಪತ್ರಕರ್ತರು ವೈವಿಧ್ಯಮಯ ಪ್ರದೇಶಗಳಿಗೆ ಭೇಟಿ ನೀಡಿ ಇತಿಹಾಸ ಮತ್ತು ಚರಿತ್ರೆಯನ್ನು ಅರಿಯಬೇಕು. ರಾಗ ದ್ವೇಷಗಳಿಂದ ಕೂಡಿರುವ ನಗರವನ್ನು ಬಿಟ್ಟು ಹಳ್ಳಿ, ಗ್ರಾಮೀಣ ಪ್ರದೇಶಗಳು, ಧಾರ್ಮಿಕ ಸ್ಥಳಗಳಿಗೆ ತೆರಳಿ ಅಲ್ಲಿನ ಜನರ ಸಮಸ್ಯೆ, ಕಷ್ಟ-ಸುಖಗಳತ್ತ ಬೆಳಕು ಚೆಲ್ಲಬೇಕು ಎಂದವರು ಸಲಹೆ ನೀಡಿದರು.

ಸ್ವಾಮಿ ವಿವೇಕಾನಂದ ಅವರಿಗೆ ಗುರುಗಳಾಗಿದ್ದ ಪೆರುಮಾಳ್‍ಗೆ ಸಂಗೀತ ಕಲಿಸಿಕೊಟ್ಟ ಭೈರವಿ ಕೆಂಪೇಗೌಡ  ನಮ್ಮ ಜಿಲ್ಲೆಯವರು. ಪೆರುಮಾಳ್ ಒಬ್ಬ ಪತ್ರಕರ್ತರಾಗಿದ್ದು, ಈ ಕುರಿತು ಹುರುಗಲವಾಡಿ ಲಕ್ಷ್ಮಿನರಸಿಂಹಶಾಸ್ತ್ರಿಯವರು ಬರೆದಿರುವ ಕಥೆಯಲ್ಲಿ ಉಲ್ಲೇಖವಿದೆ ಎಂದರು.

ಇದೇ ವೇಳೆ ವಾರ್ತಾ ಇಲಾಖೆ ಉಪನಿರ್ದೇಶಕ ಪಿ.ಎನ್.ಗುರುಮೂರ್ತಿ ಹಾಗೂ ಪತ್ರಕರ್ತ ಎಂ.ಎನ್. ಯೋಗೇಶ್ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಸಹಕಾರ ಮತ್ತು ಮುದ್ರಣಕಾರರ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್.ಶಿವಪ್ರಕಾಶ್, ಸಂಸ್ಥಾಪಕ ಅಧ್ಯಕ್ಷ ಕೌಡ್ಲೆ ಚನ್ನಪ್ಪ, ಎಂ.ಬಿ. ದಾಸಪ್ರಕಾಶ್, ಬಸವರಾಜ ಹೆಗಡೆ, ಡಿ.ದಶರಥಕುಮಾರ್, ಪ್ರಕಾಶ್ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X