Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಸ್ವಾರ್ಥ ಮನೋಭಾವವಿದ್ದರೆ ಭ್ರಷ್ಟಾಚಾರ...

ನಿಸ್ವಾರ್ಥ ಮನೋಭಾವವಿದ್ದರೆ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯ: ಪ್ರೊ ನರೇಂದ್ರ ನಾಯಕ್

ವಾರ್ತಾಭಾರತಿವಾರ್ತಾಭಾರತಿ1 July 2018 10:38 PM IST
share
ನಿಸ್ವಾರ್ಥ ಮನೋಭಾವವಿದ್ದರೆ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯ: ಪ್ರೊ ನರೇಂದ್ರ ನಾಯಕ್

ಮೂಡುಬಿದಿರೆ, ಜು.1: ನಾನಂತೂ ಜೀವಮಾನದಲ್ಲಿ ಯಾರಿಗೂ ಲಂಚ ಕೊಟ್ಟಿಲ್ಲ, ಯಾರಿಂದಲೂ ಲಂಚ ಸ್ವೀಕರಿಸಿಲ್ಲ. ಲಂಚ ಸ್ವೀಕರಿಸುವುದು ಮತ್ತು ಲಂಚ ಕೊಡುವುದು ಎರಡೂ ಅಪರಾಧವೇ. ದೃಢ ಸಂಕಲ್ಪವಿದ್ದರೆ, ಕೊಂಚ ವಿವೇಚನೆ, ತಾಳ್ಮೆ, ನ್ಯಾಯಕ್ಕಾಗಿ ಹೋರಾಡುವ ಕೆಚ್ಚು ಎಲ್ಲಕ್ಕಿಂತಲೂ ಮುಖ್ಯವಾಗಿ ನಿಸ್ವಾರ್ಥ ಮನೋಭಾವವಿದ್ದರೆ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯ’ ಎಂದು ಮಂಗಳೂರಿನ ಬಳಕೆದಾರರ ಶಿಕ್ಷಣ ಪ್ರತಿಷ್ಠಾನದ ಸಂಚಾಲಕ, ವಿಚಾರವಾದಿ ಪ್ರೊ ನರೇಂದ್ರ ನಾಯಕ್ ಹೇಳಿದರು.

ಮೂಡುಬಿದಿರೆಯ ಭ್ರಷ್ಟಾಚಾರ ವಿರೋಧ ಜಾಗೃತ ಸೇವಾದಳದ ನಾಲ್ಕನೇ ವಾರ್ಷಿಕೋತ್ಸವದಂಗವಾಗಿ ಸಮಾಜಮಂದಿರದ ಸ್ವರ್ಣ ಮಂದಿರದಲ್ಲಿ ರವಿವಾರ ಅಪರಾಹ್ನ ಏರ್ಪಡಿಸಲಾದ ‘ಮೂಡುಬಿದಿರೆ ಪುರಸಭಾ ಆಡಳಿತ ವೈಫಲ್ಯದ ಜನಜಾಗೃತಿ ಅಭಿಯಾನ’ದಲ್ಲಿ ‘ಭ್ರಷ್ಟಾಚಾರ ನಿರ್ಮೂಲನದಲ್ಲಿ ಬಳಕೆದಾರರ ಪಾತ್ರ’ ಕುರಿತು ಉಪನ್ಯಾಸವಿತ್ತ ಅವರು ‘ತಳಮಟ್ಟದಿಂದ ರಾಷ್ಟ್ರಮಟ್ಟದ ವರೆಗೆ ಭ್ರಷ್ಟಾಚಾರದಿಂದ ಬಳಕೆದಾರರ ಹಕ್ಕುಗಳು ಮೊಟಕಾಗುತ್ತವೆ, ಬಳಕೆದಾರರು ಅನ್ಯಾಯಕ್ಕೊಳಗಾಗಬೇಕಾಗುತ್ತದೆ’ ಎಂದು ಅನೇಕ ನಿದರ್ಶನಗಳ ಮೂಲಕ ತಮ್ಮ ಮತ್ತು ಇತರರ ಪ್ರಕರಣಗಳನ್ನು ಉದಾಹರಿಸಿ ಮಾತನಾಡಿದರು.

ಭ್ರಷ್ಟಾಚಾರ ವಿರೋಧ ಜಾಗೃತ ದಳದ ಗೌರವಾಧ್ಯಕ್ಷ, ಬಳಕೆದಾರರ ಜಾಗೃತಿ ವೇದಿಕೆಯ ಅಧ್ಯಕ್ಷ ಯು. ಪದ್ಮನಾಭ ಶೆಟ್ಟಿ ನಿಡ್ಡೋಡಿ ಅವರು ಅಧ್ಯಕ್ಷತೆ ವಹಿಸಿದ್ದರು.

ಸಿವಿಲ್ ಎಂಜಿನಿಯರ್ ಎಂ. ರಾಮಚಂದ್ರ ಆಳ್ವ ಸಹಿತ ಅತಿಥಿಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಸಿವಿಲ್ ಎಂಜಿನಿಯರ್ ಎಂ. ಸುರೇಂದ್ರ ಪ್ರಸಾದ್ ಅವರು ’ಟೌನ್ ಪ್ಲಾನಿಂಗ್ ಮತ್ತು ಬಿಲ್ಡಿಂಗ್ ಬೈ-ಲಾ’ ಕುರಿತು, ಡಾ. ಎಂ. ಕೆ. ಗರ್ಡಾಡಿ ಅವರು ‘ನಗರ ನೈರ್ಮಲ್ಯ ಮತ್ತು ಆರೋಗ್ಯ’ ಕುರಿತು ಹಾಗೂ ಭಾರತೀಯ ಮಜ್ದೂರ್ ಸಂಘದ ಮಾಜಿ ಅಧ್ಯಕ್ಷ ಡಿ. ಬಾಲಕೃಷ್ಣ ಅವರು ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಕರಿಗೆ ಸಿಗುತ್ತಿರುವ ಪ್ರಯೋಜನಗಳು’ ಕುರಿತು ಮಾಹಿತಿ ನೀಡಿದರು.

ಕಲೆಯೂ ಭ್ರಷ್ಟಾಚಾರ ವಿರೋಧಿಯಾಗಿದೆ: ಯಕ್ಷಗಾನ ಕವಿ, ಪ್ರಸಂಗಕರ್ತ, ಛಾಂದಸ ಗಣೇಶ್ ಕೊಲೆಕಾಡಿ ಅವರನ್ನು ಸೇವಾದಳದ ವತಿಯಿಂದ ಗೌರವಧನ ಸಹಿತ ಸಮ್ಮಾನಿಸಲಾಯಿತು. ‘ಕಲೆಯ ಆಶಯವೂ ಭ್ರಷ್ಟಾಚಾರ ವಿರೋಧಿಯೇ. ರಾವಣ ಭ್ರಷ್ಟಾಚಾರದ ಪ್ರತೀಕವಾದರೆ ರಾಮ ಅದರ ವಿರುದ್ಧ ಹೋರಾಟ ನಡೆಸಿದಾತ; ಹೀಗೆಯೇ ಯಾವುದೇ ಯಕ್ಷಗಾನದ ಕಥಾನಕಗಳಲ್ಲಿ ಪ್ರತಿನಾಯಕ ಭ್ರಷ್ಟಾಚಾರಿಯೂ ನಾಯಕ ಭ್ರಷ್ಟಾಚಾರದ ವಿರುದ್ಧ ಹೋರಾಡುವವನೂ ಆಗಿ ಚಿತ್ರಿಸಲ್ಪಡುತ್ತಾರೆ. ಒಳ್ಳೆಯ ಜೀವಿಯಾಗಿ ಬದುಕಬೇಕೆಂಬುದೇ ಎಲ್ಲ ಕಲೆಗಳ ಸಾರ, ಸಂದೇಶ’ ಎಂದು ಗಣೇಶ್ ಕೊಲಕಾಡಿ ತಮ್ಮ ಗಿತ್ತ ಸಮ್ಮಾನಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಮೂಡುಬಿದಿರೆ ಬಳಕೆದಾರರ ವೇದಿಕೆಯ ಸಂಚಾಲಕ ಡಾ. ರಮಾನಾಥ್ ಪ್ರಭು, ವಕೀಲ ನಾರಾಯಣ ಕಡಲಕೆರೆ, ಹರೀಶ್ ಉಪಸ್ಥಿತರಿದ್ದರು. ಸೇವಾದಳದ ಅಧ್ಯಕ್ಷ ಹರಿಪ್ರಸಾದ್ ನಾಯಕ್ ಪ್ರಸ್ತಾವನೆಗೈದರು. ಶಿಕ್ಷಕ ಜಗನ್ನಾಥ್ ಸ್ವಾಗತಿಸಿ, ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X