Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಅಸಮರ್ಪಕ ನಿರ್ವಹಣೆಯಿಂದಾಗಿ...

ಮಡಿಕೇರಿ: ಅಸಮರ್ಪಕ ನಿರ್ವಹಣೆಯಿಂದಾಗಿ ಗಬ್ಬೆದ್ದು ನಾರುತ್ತಿರುವ ವಿರಾಜಪೇಟೆ ಪಟ್ಟಣದ ಶೌಚಾಲಯಗಳು

ವಾರ್ತಾಭಾರತಿವಾರ್ತಾಭಾರತಿ1 July 2018 10:39 PM IST
share
ಮಡಿಕೇರಿ: ಅಸಮರ್ಪಕ ನಿರ್ವಹಣೆಯಿಂದಾಗಿ ಗಬ್ಬೆದ್ದು ನಾರುತ್ತಿರುವ ವಿರಾಜಪೇಟೆ ಪಟ್ಟಣದ ಶೌಚಾಲಯಗಳು

ಮಡಿಕೇರಿ, ಜು.1: ಕಳೆದ ನಾಲ್ಕು ವರ್ಷಗಳಿಂದ ಪ್ರಧಾನಿ ನರೇಂದ್ರಮೋದಿ ಅವರು ಮಹಾತ್ಮ ಗಾಂಧಿ ಕಂಡ ಕನಸಿನಿಂದ ಭಾರತ ಸ್ವಚ್ಛವಾಗಬೇಕೆಂದು ಸ್ವಚ್ಛ ಭಾರತ್ ಅಭಿಯಾನ ನಡೆಸುತ್ತಿದ್ದಾರೆ. ಹಲವು ಕಡೆ ಈ ಅಭಿಯಾನ ಯಶಸ್ವಿಯೂ ಆಗಿದೆ. ಆದರೆ ಕೊಡಗಿನಲ್ಲಿ ಮಾತ್ರ ಸ್ವಚ್ಛತೆಯ ಬಗ್ಗೆ ಯಾರಿಗೂ ಕಾಳಜಿ ಇದ್ದಂತ್ತಿಲ್ಲ. ಅದರಲ್ಲೂ ವಿರಾಜಪೇಟೆ ತಾಲೂಕಿನಲ್ಲಿ ಸ್ವಚ್ಛತೆಗೆ ಆದ್ಯತೆ ಇಲ್ಲದಂತಾಗಿದ್ದು, ಪಟ್ಟಣದ ಶೌಚಾಲಯಗಳು ಗಬ್ಬೆದ್ದು ನಾರುತ್ತಿವೆ. ಪಟ್ಟಣ ತುಂಬಾ ಸಾರ್ವಜನಿಕರ ಬಳಕೆಗಾಗಿ ಹಲವು ಕಡೆ ಶೌಚಾಲಯಗಳನ್ನು ನಿರ್ಮಾಣ ಮಾಡಿರುವ ಪಟ್ಟಣ ಪಂಚಾಯತ್ ಅವುಗಳ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ಸೋತಿದೆ ಎಂದು ನಾಗರಿಕರು ಆರೋಪಿಸುತ್ತಾರೆ.

ಖಾಸಗಿ ಬಸ್ ನಿಲ್ದಾಣದ ಶೌಚಾಲಯ ಸರಿಯಾದ ನಿರ್ವಹಣೆಯಿಲ್ಲದೆ ಗಬ್ಬೆದ್ದು ನಾರುತ್ತಿದ್ದು, ರೋಗ ರುಜಿನಗಳು ಹರಡುವ ಭೀತಿ ಎದುರಾಗಿದೆ. ಸುಮಾರು 20 ವರ್ಷಗಳ ಹಿಂದೆ ಬೆಂಗಳೂರಿನ ಜನ್ ಕಲ್ಯಾಣ್ ಫೌಂಡೇಶನ್ ಬೆಂಗಳೂರು ಸಂಸ್ಥೆಗೆ ಗುತ್ತಿಗೆ ಆಧಾರದ ಮೇಲೆ ನಿರ್ವಹಣೆಯ ಜವಬ್ದಾರಿಯನ್ನು ನೀಡಲಾಗಿತ್ತು. ಸಂಸ್ಥೆ ಶೌಚಾಲಯ ನಿರ್ವಹಣೆಗೆಂದು ಕೆಲಸಗಾರರನ್ನು ನೇಮಿಸಿಕೊಂಡು ವೇತನ ಪಾವತಿ ಮಾಡುತ್ತಾ ಕಾರ್ಯನಿರ್ವಹಿಸುತ್ತಿತ್ತು. ಅದರೆ ಇದೀಗ ಚಿತ್ರಣವೇ ಬದಲಾಗಿದ್ದು, ಶೌಚಾಲಯ ನಿರ್ವಹಣೆ ಇಲ್ಲದೆ ಹದಗೆಟ್ಟಿದೆ. ಶೌಚಾಲಯ ಬಳಕೆಗೆ ಸಾರ್ವಜನಿಕರಿಂದ ನಿಗಧಿತ ಹಣ ವಸೂಲಿ ಮಾಡಲಾಗುತ್ತಿದೆ. ಆದರೆ ನಿರ್ವಹಣೆಯ ಕೊರತೆಯಿಂದ ಅಶುಚಿತ್ವದ ವಾತಾವರಣ ಅಸಹ್ಯವನ್ನು ಮೂಡಿಸುತ್ತಿದೆ. ಮಳೆಗಾಲದಲ್ಲಿ ಬಸ್ ನಿಲ್ದಾಣದ ಮೂಲಕ ಹರಿಯುವ ನೀರು ಶೌಚಾಲಯದ ಮುಂಭಾಗದಲ್ಲಿ ಹರಿದು ಅಲ್ಲಲ್ಲಿ ನಿಂತು ದುರ್ವಾಸನೆ ಬೀರುತ್ತಿದೆ. ಜೊತೆಯಲ್ಲಿ ಸೊಳ್ಳೆ, ಕ್ರಮಿ ಕೀಟಗಳ ಕಾಟವೂ ಹೆಚ್ಚಾಗಿದೆ ಎಂದು ನಾಗರಿಗಕರು ದೂರುತ್ತಾರೆ.

ಸಾರ್ವಜನಿಕರು ಶೌಚಾಲಯಕ್ಕೆ ತೆರಳುವಾಗ ಮೂಗು ಮುಚ್ಚಿಕೊಳ್ಳುವುದು ಇಲ್ಲಿ ಖಡ್ಡಾಯವಾಗಿದೆ. ಖಾಸಗಿ ಬಸ್ ನಿಲ್ದಾಣಕ್ಕೆ ಸಾವಿರಾರು ಪ್ರಯಾಣಿಕರು, ಬಸ್ ಸಿಬ್ಬಂದಿಗಳು ಹಾಗೂ ವರ್ತಕರು ಬಂದು ಹೋಗುತ್ತಾರೆ. ಇವರ ಅನುಕೂಲಕ್ಕೆ ಸುಸಜ್ಜಿತ ಶೌಚಾಲಯದ ಅಗತ್ಯವಿದೆ.  ಆದರೆ ಸ್ಥಳೀಯ ಆಡಳಿತ ವ್ಯವಸ್ಥೆ ಜನರ ಹಿತವನ್ನು ಕಡೆಗಣಿಸಿ ಸ್ವಚ್ಛ ಭಾರತ್ ಪರಿಕಲ್ಪನೆಗೆ ಅಪಮಾನ ಮಾಡುತ್ತಿದೆ. ಈಗಿರುವ ಶೌಚಾಲಯದ ಮೇಲ್ಭಾಗದಲ್ಲಿ ನೂತನವಾಗಿ ಹೈಟೆಕ್ ಶೌಚಾಗೃಹ ನಿರ್ಮಾಣವಾಗಿ ಆರು ತಿಂಗಳುಗಳೇ ಕಳೆದಿದೆ. ಆದರೆ ನೂತನ ಶೌಚಾಲಯವನ್ನು ಬಳಸುವ ಭಾಗ್ಯ ಸಾರ್ವಜನಿಕರಿಗೆ ಇನ್ನೂ ದೊರೆತಿಲ್ಲ. ಇದು ಖಾಸಗಿ ಬಸ್ ನಿಲ್ದಾಣದ ಶೌಚಾಲಯದ ಪರಿಸ್ಥಿತಿಯಾದರೆ ಮಾಂಸ ಮಾರುಕಟ್ಟೆಯ ಬಳಿ ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹೈಟೆಕ್ ಶೌಚಾಲಯ ಬಳಕೆಗೆ ಅಯೋಗ್ಯವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

ಕಾಡು ಬಳ್ಳಿ, ಗಿಡಗಳು ಬೆಳೆದು ಅಶುಚಿತ್ವದಿಂದ ಕೂಡಿದ್ದು, ಸಾರ್ವಜನಿಕರು ಶೌಚಾಲಯ ಬಳಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ದೊಡ್ಡಟ್ಟಿ ಚೌಕಿಯ ಬಳಿ ಪಟ್ಟಣ ಪಂಚಾಯತ್ ನಿರ್ಮಾಣ ಮಾಡಿರುವ ಶೌಚಾಲಯವನ್ನು ಕೆಲವು ಪ್ರಭಾವಿಗಳ ಒತ್ತಡಕ್ಕೆ ಮಣಿದು ಮುಚ್ಚಲಾಗಿದೆ ಎನ್ನುವ ಆರೋಪವಿದೆ.
ಸರಕಾರ ಬಯಲು ಶೌಚ ಮುಕ್ತ ಸಮಾಜ ನಿರ್ಮಾಣ ಮಾಡಲು ಕೋಟಿ, ಕೋಟಿ ಹಣ ಬಿಡುಗಡೆ ಮಾಡುತ್ತಿದೆ. ಮತ್ತೊಂದೆಡೆ ಸ್ವಚ್ಛ ಭಾರತ್, ಸ್ವಚ್ಛ ಪರಿಸರ, ಸ್ವಚ್ಛ ಸಮಾಜ ಎಂಬ ಘೋಷಣೆಯೊಂದಿಗೆ ಹಲವು ಯೋಜನೆಗಳು ಜಾರಿಯಲ್ಲಿವೆ. ಸಾಕಷ್ಟು ಹಣ ವಿನಿಯೋಗವಾಗುತ್ತಿದ್ದರೂ ವಿರಾಜಪೇಟೆ ಪಟ್ಟಣದಲ್ಲಿ ಮಾತ್ರ ಯಾರಿಗೂ ಸ್ವಚ್ಛ ವಿರಾಜಪೇಟೆ ಬೇಡವಾಗಿದೆ. ಜನಪ್ರತಿನಿಧಿಗಳು ಯಾರೂ ಸಾರ್ವಜನಿಕ ಶೌಚಾಲಯವನ್ನು ಬಳಸದೆ ಇರುವುದರಿಂದ ಜನ ಹೇಗಿದ್ದರೇನು ಎನ್ನುವ ಜಡ್ಡುಗಟ್ಟಿದ ವಾತಾವರಣ ಆಡಳಿತ ವ್ಯವಸ್ಥೆಯಲ್ಲಿದೆ. ಒಂದು ದಿನವೂ ಪಟ್ಟಣ ಪಂಚಾಯತ್ ಪ್ರತಿನಿಧಿಗಳು ಪಟ್ಟಣದ ಜನಸಂಪರ್ಕ ಸಭೆ ನಡೆಸಿ ನಿಮ್ಮ ಸಮಸ್ಯೆ ಏನು ಎಂದು ಪ್ರಶ್ನಿಸಿಲ್ಲ, ಗಬ್ಬೆದ್ದು ನಾರುತ್ತಿರುವ ಶೌಚಾಲಯಗಳ ಸ್ಥಿತಿಗತಿಯ ಬಗ್ಗೆ ಪಟ್ಟಣ ಪಂಚಾಯತ್‍ಗೆ ಮಾಹಿತಿಯೇ ಇಲ್ಲದಾಗಿದೆ. ಶೌಚಾಲಯದ ಸಮಸ್ಯೆಗಳು ಮಾತ್ರವಲ್ಲದೆ ಕಸದ ಸಮಸ್ಯೆ ಕೂಡ ಪಟ್ಟಣವನ್ನು ಕಾಡುತ್ತಿದೆ. ಇನ್ನಾದರೂ ಪಟ್ಟಣ ಪಂಚಾಯತ್ ಪ್ರತಿನಿಧಿಗಳು ನಾಲ್ಕು ಗೋಡೆಗಳ ನಡುವೆ ಕಾರುಬಾರು ಮಾಡುವ ಬದಲು ಪಟ್ಟಣಕ್ಕೊಂದು ಸುತ್ತು ಬಂದು ಸಾರ್ವಜನಿಕರ ಬೇಡಿಕೆಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X