Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಗಬೆಟ್ಟು ಗ್ರಾಮ ಸಭೆ: ಪ್ರಾಥಮಿಕ...

ಸಂಗಬೆಟ್ಟು ಗ್ರಾಮ ಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾತಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 July 2018 7:00 PM IST
share
ಸಂಗಬೆಟ್ಟು ಗ್ರಾಮ ಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾತಿಗೆ ಆಗ್ರಹ

 ಬಂಟ್ವಾಳ, ಜು.2: ಸಂಗಬೆಟ್ಟು ಗ್ರಾಪಂ ವ್ಯಾಪ್ತಿಯ ಸಿದ್ದಕಟ್ಟೆ ಪ್ರದೆಶವು ಬೆಳೆಯುತ್ತಿರುವ ನಗರವಾಗಿದ್ದು, ಸುತ್ತಮುತ್ತಲಿನ ಐದಾರು ಗ್ರಾಮಗಳ ಜನರಿಗೆ ಸಂಪರ್ಕ ಪ್ರದೇಶವಾಗಿದೆ. ಈ ನಿಟ್ಟಿನಲ್ಲಿ ಹಲವಾರು ಗ್ರಾಮ ಸಭೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮಂಜೂರಾತಿಗೆ ನಿರ್ಣಯ ಕೈಗೊಂಡರೂ, ಇದುವೆರಗೂ ಮಂಜೂರಾತಿ ಆಗದಿರುವುದು ಜನಪ್ರತಿನಿಧಿಗಳ ನಿರುತ್ಸಾಹಕ್ಕೆ ಕಾರಣವಾಗಿದೆ. ಆದ್ದರಿಂದ ವೈದ್ಯಾಧಿಕಾರಿಗಳೆ ಸಂಬಂಧಿಸಿದ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸೋಮವಾರ ನಡೆದ ಗ್ರಾಮ ಸಭೆಯಲ್ಲಿ ಆಗ್ರಹಿಸಲಾಯಿತು. ಇದಕ್ಕೆ ಗ್ರಾಮಸ್ಥರು ಧ್ವನಿಗೂಡಿಸಿದರು.

ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಮಾತನಾಡಿ, ಜನಸಂಖ್ಯೆಯ ಅಧಾರದ ಮೇಲೆ ಮತ್ತು ಈಗಾಗಲೇ ಹತ್ತಿರದಲ್ಲೆೀ ರಾಯಿಯಲ್ಲಿರುವುದರಿಂದ ಮಂಜೂರಾತಿಗೆ ಅವಕಾಶ ಕಡಿಮೆ, ಮುಂದಿನದ್ದು ಶಾಸಕರಿಗೆ ಮತ್ತು ಸರಕಾರಕ್ಕೆ ಬಿಟ್ಟ ವಿಚಾರ ಎಂದರು.
ಮತ್ತೊಮ್ಮೆ ಮಂಜೂರಾತಿಗೆ ನೂತನ ಶಾಸಕರಿಗೆ ಹಾಗೂ ಸರಕಾರಕ್ಕೆ ಪತ್ರ ಬರೆಯಲು ನಿರ್ಣಯಿಸಲಾಯಿತು.

ಆಧಾರ್‌ಕಾರ್ಡ್ ಕೇಂದ್ರವನ್ನು ಸಿದ್ದಕಟ್ಟೆ ಪಂಚಾಯತ್‌ನಲ್ಲಿ ಪ್ರಾರಂಭಿಸಬೇಕು. ಲೋಕೋಪಯೋಗಿ ರಸ್ತೆ ಬದಿ ಚರಂಡಿ ಕಾಮಗಾರಿ, ಮೆಸ್ಕಾಂ ಸಮಸ್ಯೆ ಪರಿಹರಿಸುವ ಒತ್ತಾಯ, ಗಾಡಿ ಪಲ್ಕೆ ಹಿಂದೂ ರುದ್ರಭೂಮಿ ಅಭಿವೃದ್ಧಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಂಪೂರ್ಣ ಕಾರ್ಯಗತ ಮಾಡಲು ಅಧಿಕಾರಿಗಳಿಗೆ ಒತ್ತಡ, ಪುಚ್ಚಮೊಗರು ಸೇತುವೆ ಗುಣಮಟ್ಟ ಪರಿಶೀಲನೆ ಮಾಡಲು ಸೂಚನೆ ನೀಡಬೇಕು ಮುಂತಾದ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಸಭೆಯಲ್ಲಿ ಒತ್ತಾಯಿಸಿದರು.

ತಾಪಂ ಸದಸ್ಯ ಪ್ರಭಾಕರ ಪ್ರಭು ಮಾತನಾಡಿ, ಪ್ರತಿ ಗ್ರಾಮ ಸಭೆ ಯಶಸ್ವಿಯಾಗಬೇಕಾದರೆ ಜನರ ಸಂಪೂರ್ಣ ಸಹಭಾಗಿತ್ವದೊಂದಿಗೆ ಗ್ರಾಮಾಭಿವೃದ್ಧಿಯ ಬಗ್ಗೆ ಸಲಹೆ ಸೂಚನೆ, ಇಲಾಖಾ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ತಿಳಿಸಿದರು.

ಸಭೆಯಲ್ಲಿ ಮಾಜಿ ತಾಪಂ ಸದಸ್ಯ ರತ್ನಾಕುಮಾರ್ ಚೌಟ, ಸತೀಶ್ ಪೂಜಾರಿ, ಮುಹಮ್ಮದ್ ಆಲಿ, ರತ್ನಾಕರ ಪೂಜಾರಿ, ಉಮನಾಥ ನಾಯಕ್, ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು, ಚರ್ಚೆಯಲ್ಲಿ ಭಾಗವಹಿಸಿದರು

ಗ್ರಾಪಂ ಅಧ್ಯಕ್ಷೆ ಗುಲಾಬಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿ, ಜಿಪಂ ಇಂಜಿನಿಯರ್ ಕೃಷ್ಣ ಸಭೆಯ ನೇತೃತ್ವ ವಹಿಸಿದ್ದರು. ವಿವಿಧ ಇಲಾಖೆ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಗ್ರಾಪಂ ಸದಸ್ಯರಾದ ಮಾದವ ಶೆಟ್ಟಿಗಾರ್, ಉಷಾ, ಪದ್ಮಲತಾ ವಿಮಲ ಮೋಹನ್, ಎಸ್.ಪಿ. ಶ್ರೀಧರ್, ಸುಲೋಚನಾ, ಮಯ್ಯದಿ, ಸುರೇಶ್ ಕುಲಾಲ್, ನಳಿನಿ, ದೇವಪ್ಪ ಕರ್ಕೇರ, ಶಾರದ, ಸುಭಾಷಿಣಿ ಮೊದಲಾದವರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫರ್ನಾಂಡಿಸ್ ಸ್ವಾಗತಿಸಿ, ಪಂಚಾಯತ್ ಸಿಬ್ಬಂದಿ ಮಹಾಬಲ ನಾಯ್ಕ, ಸುರೇಶ್, ವರದಿ ಮಂಡಿಸಿದರು. ಗ್ರಾಪಂ ಸದಸ್ಯ ಶೇಖರ್ ನಾಯ್ಕ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X