ತೆಂಗಿನ ಮರದಿಂದ ಬಿದ್ದು ಮೃತ್ಯು
ಶಂಕರನಾರಾಯಣ, ಜು.2: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.1ರಂದು ಮಧ್ಯಾಹ್ನ ವೇಳೆ ಬೆಳ್ವೆ ಗ್ರಾಮದ ಸುರ್ಗೋಳ್ಳಿ ಎಂಬಲ್ಲಿ ನಡೆದಿದೆ.
ಮೃತರನ್ನು ಸೂರ್ಗೊಳಿಯ ರಂಗ(55) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ತೆಂಗಿನ ಕಾಯಿ ಕೊಯ್ಯಲು ಮರ ಹತ್ತಿದಾಗ ಆಕಸ್ಮಿಕವಾಗಿ ಕೈ ತಪ್ಪಿಕೆಳಗೆ ಬಿದ್ದರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





