Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೆನ್ಲಾಕ್ ಆಸ್ಪತ್ರೆಯಿಂದ ಹೊರದಬ್ಬಿದರು:...

ವೆನ್ಲಾಕ್ ಆಸ್ಪತ್ರೆಯಿಂದ ಹೊರದಬ್ಬಿದರು: ರೋಗಿಯ ಆರೋಪ

ಹೊರದಬ್ಬಲಿಲ್ಲ-ನಿಯಮ ಪಾಲಿಸಲು ಸೂಚಿಸಿದ್ದೇವೆ: ಡಿಎಂಒ

ವಾರ್ತಾಭಾರತಿವಾರ್ತಾಭಾರತಿ3 July 2018 7:19 PM IST
share
ವೆನ್ಲಾಕ್ ಆಸ್ಪತ್ರೆಯಿಂದ ಹೊರದಬ್ಬಿದರು: ರೋಗಿಯ ಆರೋಪ

ಮಂಗಳೂರು, ಜು.3: ಇಬ್ಬರು ಪುಟ್ಟ ಮಕ್ಕಳು, ಹೆಂಡತಿ ಹಾಗೂ ತಾಯಿ ತನ್ನೊಂದಿಗಿರುತ್ತಾರೆ ಎಂಬ ಏಕೈಕ ಕಾರಣಕ್ಕೆ ತನ್ನನ್ನು ಅಮಾನವೀಯವಾಗಿ ಹೊರಗೆ ದಬ್ಬಲಾಗಿದೆ ಎಂದು ಕಳೆದ ನಾಲ್ಕು ದಿನದಿಂದ ವೆನ್ಲಾಕ್ ಆಸ್ಪತ್ರೆಯಿಂದ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ಸಮೀಪದ ಪೆರ್ಲಂಪಾಡಿಯ ರಾಜ್‌ಕುಮಾರ್ ಆರೋಪಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ತಾನು ಜೆಸಿಬಿ ಆಪರೇಟರ್ ಆಗಿ ಬೈಕಂಪಾಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಜೂ. 28ರ ರಾತ್ರಿ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಆ್ಯಂಬುಲೆನ್ಸ್‌ನಲ್ಲಿ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನನ್ನೊಂದಿಗೆ ಒಂದುವರೆ ವರ್ಷ ಪ್ರಾಯದ ಹೆಣ್ಮಗು, 5 ವರ್ಷದ ಗಂಡು ಮಗು ಇದ್ದಾರೆ. ಹಗಲಲ್ಲಿ ಹೆಂಡತಿ ಕೆಲಸಕ್ಕೆ ಹೋದರೆ ರಾತ್ರಿ ಬರುತ್ತಾರೆ. ಆವಾಗ ನನ್ನ ತಾಯಿ ಹಾಗೂ ಇಬ್ಬರು ಮಕ್ಕಳು ನನ್ನೊಂದಿಗೆ ಇರುತ್ತಾರೆ. ರಾತ್ರಿ ಹೆಂಡತಿ ಬರುವಾಗ ಮಕ್ಕಳು ಮತ್ತು ತಾಯಿ ಸಮೀಪದ ಛತ್ರದಲ್ಲಿ ಆಶ್ರಯ ಪಡೆಯುತ್ತಾರೆ. ಇದನ್ನೇ ನೆಪವಾಗಿಟ್ಟುಕೊಂಡು ಕನಿಷ್ಠ ನನ್ನನ್ನು ಡಿಸ್‌ಜಾರ್ಜ್ ಕೂಡಾ ಮಾಡದೆ ಇಂದು ಕೈಗೆ ಚುಚ್ಚಿದ ಸಿರಿಂಜ್ ಸಮೇತ ಅಮಾನವೀಯವಾಗಿ ಹೊರದಬ್ಬಿದ್ದಾರೆ’ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಎಂಒ ಡಾ. ರಾಜೇಶ್ವರಿ ದೇವಿ, ಒಬ್ಬ ರೋಗಿಯನ್ನು ಉಪಚರಿಸಲು ಒಂದು ಪಾಸ್ ನೀಡುತ್ತೇವೆ. ಪುರುಷ ಇರುವಲ್ಲಿ ಪುರುಷರಿಗೆ ಮತ್ತು ಮಹಿಳೆ ಇರುವಲ್ಲಿ ಮಹಿಳೆಯರು ಮಾತ್ರ ಇರಲು ಅವಕಾಶವಿದೆ. ಇದು ಆಸ್ಪತ್ರೆಯ ನಿಯಮ. ಇದನ್ನು ಪಾಲಿಸುವುದು ರೋಗಿಯ ಕರ್ತವ್ಯವಾಗಿದೆ. ಪೆರ್ಲಂಪಾಡಿಯ ರಾಜ್‌ಕುಮಾರ್‌ರ ಕುಟುಂಬ ಜೂ. 28ರಿಂದ ವೆನ್ಲಾಕ್‌ನಲ್ಲೇ ಇದ್ದಾರೆ. ಇದು ನಿಯಮಕ್ಕೆ ವಿರುದ್ಧವಾಗಿದೆ. ಅಲ್ಲದೆ, ಪುರುಷ ವಾರ್ಡ್‌ನಲ್ಲಿ ಮಹಿಳೆಯರು ರಾತ್ರಿ ತಂಗಲು ಅವಕಾಶವಿಲ್ಲ. ಈ ನಿಯಮವನ್ನು ಪಾಲಿಸುವಂತೆ ಸೂಚಿಸಿದ್ದಕ್ಕೆ ಸ್ವತಃ ಅವರೇ ಹೊರಗೆ ಹೋಗಿ ವೆನ್ಲಾಕ್ ಆಸ್ಪತ್ರೆಯ ವಿರುದ್ಧ ಆರೋಪಿಸುತ್ತಿದ್ದಾರೆ. ಈ ಆರೋಪದಲ್ಲಿ ಹುರುಳಿಲ್ಲ ಮತ್ತು ನಾವು ರೋಗಿಯನ್ನು ಹೊರದಬ್ಬಲೂ ಇಲ್ಲ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X