Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಜಿಲ್ಲಾ ವಲಯ ಕಾರ್ಯಕ್ರಮಗಳಿಗೆ...

ಉಡುಪಿ: ಜಿಲ್ಲಾ ವಲಯ ಕಾರ್ಯಕ್ರಮಗಳಿಗೆ 444.57ಕೋಟಿ ರೂ. ಅನುದಾನ

ವಾರ್ತಾಭಾರತಿವಾರ್ತಾಭಾರತಿ3 July 2018 8:22 PM IST
share

ಉಡುಪಿ, ಜು.3: 2018-19ನೇ ಸಾಲಿನ ಜಿಲ್ಲಾ ವಲಯ ಕಾರ್ಯಕ್ರಮ ಗಳಿಗೆ ಸರಕಾರ, ಉಡುಪಿ ಜಿಲ್ಲಾ ಪಂಚಾಯತ್‌ಗೆ ಒಟ್ಟು 444.57 ಕೋಟಿ ರೂ.ಗಳ ಅನುದಾನದ ಗುರಿಯನ್ನು ನಿಗದಿ ಪಡಿಸಿದೆ. ಇವುಗಳಲ್ಲಿ ಜಿಪಂ ಕಾರ್ಯಕ್ರಮಗಳಿಗೆ 166.15 ಕೋಟಿ ರೂ, ತಾಪಂ ಕಾರ್ಯಕ್ರಮಗಳಿಗೆ 277.75 ಕೋಟಿ ರೂ. ಹಾಗೂ ಗ್ರಾಪಂ ಕಾರ್ಯಕ್ರಮಗಳಿಗೆ 67 ಲಕ್ಷ ರೂ. ಅನುದಾನ ನಿಗದಿಯಾಗಿದೆ.

ಜಿಪಂ ಕಾರ್ಯಕ್ರಮಗಳಲ್ಲಿ 48.52 ಕೋಟಿ ರೂ. ವೇತನಗಳಿಗೆ ನಿಗದಿ ಯಾದರೆ ಉಳಿದ 117.63 ಕೋಟಿ ರೂ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮೀಸಲಿರಿಸಲಾಗಿದೆ. ತಾಪಂ ಕಾರ್ಯಕ್ರಮಗಳಲ್ಲಿ 189.26 ಕೋಟಿ ರೂ.ವೇತನಕ್ಕೆ ಉಳಿದ 88.49 ಕೋಟಿ ರೂ.ವೇತನೇತರ ಕಾರ್ಯಕ್ರಮಗಳಿಗೆ ಮೀಸಲಾಗಿದೆ.

ಜಿಪಂ ಕಾರ್ಯಕ್ರಮಗಳಲ್ಲಿ 65.04 ಕೋಟಿ ರೂ. ಅನುದಾನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳಿಗೆ ನಿಗದಿ ಪಡಿಸಲಾಗಿದೆ. ಅಕ್ಷರ ದಾಸೋಹಕ್ಕೆ ಮೀಸಲಾಗಿರುವ 29.91 ಕೋಟಿ ರೂ.ಗಳಲ್ಲಿ 86,198 ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಸರಕಾರಿ ಪ್ರಾಥಮಿಕ ಶಾಲೆಗಳ 6 ಮತ್ತು 7ನೇ ತರಗತಿಗಳಲ್ಲಿರುವ ಹೆಣ್ಣುಮಕ್ಕಳ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ವಿನಿಯೋಗಿ ಸಲಾಗುವುದು.

51 ಸರಕಾರಿ ಪ್ರೌಢ ಶಾಲೆಗಳ ಕಟ್ಟಡ ನಿರ್ವಹಣಾ ಕಾಮಗಾರಿಗಳಿಗೆ 85 ಲಕ್ಷ ರೂ. ಹಾಗೂ 56 ಶಾಲೆ ಮತ್ತು ಕಚೇರಿಗಳಿಗೆ ಪೀಠೋಪಕರಣಗಳನ್ನು ಒದಗಿಸಲು ಸಾಮಗ್ರಿಗಳ ಸರಬರಾಜು ವಲಯದಡಿ 30ಲಕ್ಷ ರೂ.ಗಳನ್ನು ಕಾಯ್ದಿರಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಕ್ರೀಡಾಂಗಣ ನಿರ್ವಹಣೆಗೆ 68.50 ಲಕ್ಷ ಲಭ್ಯವಿದ್ದು, ಇದರಲ್ಲಿ ಜಿಲ್ಲಾ ಕ್ರೀಡಾಂಗಣ, ಈಜುಕೊಳ, ಟೆನಿಸ್ ಕೋರ್ಟ್ ಅಲ್ಲದೇ ಕಾರ್ಕಳ ಮತ್ತು ಹೆಜಮಾಡಿ ಕ್ರೀಡಾಂಗಣಗಳ ನಿರ್ವಹಣೆಯೂ ಸೇರಿದೆ. ಕ್ರೀಡಾಕೂಟ ಮತ್ತು ರ್ಯಾಲಿಗಳ ಸಂಘಟನೆಗೆ 30 ಲಕ್ಷ ರೂ.ಗಳನ್ನು ನಿಗದಿಮಾಡಲಾಗಿದೆ. ಕ್ರೀಡಾ ಶಾಲೆಯ ನಿರ್ವಹಣೆಗೆ 19.50 ಲಕ್ಷ ರೂ. ಹಾಗೂ ಒಳಾಂಗಣ ಕ್ರೀಡಾಂಗಣದ ನಿರ್ವಹಣೆಗೆ 30 ಲಕ್ಷ ರೂ. ಹಂಚಿಕೆಯಾಗಿದೆ. ಕ್ರೀಡೋಪಕರಣಗಳ ಖರೀದಿಗೆ 1.14 ಲಕ್ಷ ರೂ. ನೀಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಬಯಲು ರಂಗಮಂದಿರದ ನಿರ್ಮಾಣಕ್ಕೆ 6 ಲಕ್ಷ ರೂ.ನಿಗದಿಯಾಗಿದೆ. ಜಿಲ್ಲಾ ಆಯುಷ್ ಕಚೇರಿಗೆ 2.14 ಕೋಟಿ ರೂ.ಅನುದಾನ ಹಂಚಿಕೆಯಾಗಿದೆ. ಕಟ್ಟಡ ವಲಯದಡಿ ಬೆಳಪು, ಕಾಳಾವಾರ, ಗುಲ್ವಾಡಿ, ಬೆಳ್ಳಾಲ, ಕೆರ್ವಾಶೆ ಹಾಗೂ ಅಮಾಸೆಬೈಲು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಟ್ಟಡ ಕಾಮಗಾರಿಗೆ 15ಲಕ್ಷ ರೂ. ನೀಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆಗೆ 4.94 ಕೋಟಿ ರೂ.ಹಂಚಿಕೆಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 1.63ಕೋಟಿ ರೂ., ಪುರಸ್ಕಾರಕ್ಕೆ 85 ಲಕ್ಷರೂ., ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ 1.51ಕೋಟಿ ರೂ. ಒದಗಿಸಲಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ (ಐಟಿಡಿಪಿ) 6.47 ಕೋಟಿ ರೂ. ಹಂಚಿಕೆಯಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 13.44 ಕೋಟಿ ರೂ.ಹಂಚಿಕೆಯಾಗಿದ್ದು, ಇದರಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ 9.96 ಕೋಟಿ ರೂ., ವಿದ್ಯಾರ್ಥಿಗಳ ವಿವಿಧ ಶುಲ್ಕ ಪಾವತಿಗೆ 8.53ಕೋಟಿ ರೂ., 14 ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ 31.91ಲಕ್ಷ ರೂ ನೀಡಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮದಡಿ 61.67 ಲಕ್ಷ ರೂ.ಹಂಚಿಕೆ ಮಾಡಲಾಗಿದೆ.

ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳಿಗೆ 85.67 ಲಕ್ಷ ರೂ., ಕೃಷಿ ಇಲಾಖೆಗೆ 1.86 ಕೋಟಿ ರೂ., ತೋಟಗಾರಿಕಾ ಇಲಾಖೆಗೆ 1.88ಕೋಟಿ ರೂ., ಪಶುಸಂಗೋಪನಾ ಇಲಾಖೆಗೆ 2.26 ಕೋಟಿ ರೂ.ಗಳ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ.ಮೀನುಗಾರಿಕಾ ಇಲಾಖೆಗೆ 1.02ಕೋಟಿ ರೂ, ಸಾಮಾಜಿಕ ಅರಣ್ಯ ವಿಭಾಗಕ್ಕೆ 1.94ಕೋಟಿ ರೂ.ಗಳನ್ನು ನೀಡಲಾಗಿದೆ.
ಈ ಕ್ರಿಯಾಯೋಜನೆಗೆ ಶನಿವಾರ ನಡೆದ ಉಡುಪಿ ಜಿಲ್ಲಾ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X