Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿಕ್ಷಕಿಯರಿಂದ ಅವಮಾನಿತ 88 ಬಾಲಕಿಯರಿಗೆ...

ಶಿಕ್ಷಕಿಯರಿಂದ ಅವಮಾನಿತ 88 ಬಾಲಕಿಯರಿಗೆ ಪರಿಹಾರ ನೀಡುವಂತೆ ಅರುಣಾಚಲ ಸರಕಾರಕ್ಕೆ ಎನ್ ಎಚ್ ಆರ್ ಸಿ ಆದೇಶ

ವಾರ್ತಾಭಾರತಿವಾರ್ತಾಭಾರತಿ3 July 2018 8:25 PM IST
share
ಶಿಕ್ಷಕಿಯರಿಂದ ಅವಮಾನಿತ 88 ಬಾಲಕಿಯರಿಗೆ ಪರಿಹಾರ ನೀಡುವಂತೆ ಅರುಣಾಚಲ ಸರಕಾರಕ್ಕೆ ಎನ್ ಎಚ್ ಆರ್ ಸಿ ಆದೇಶ

ಹೊಸದಿಲ್ಲಿ,ಜು.3: ಕಳೆದ ವರ್ಷ ದಂಡನಾ ಕ್ರಮವಾಗಿ ತಮ್ಮ ಶಾಲಾ ಶಿಕ್ಷಕಿಯರಿಂದ ಬಲವಂತದಿಂದ ವಿವಸ್ತ್ರಗೊಳಿಸಲ್ಪಟ್ಟಿದ್ದ 88 ಬಾಲಕಿಯರಿಗೆ ತಲಾ 5,000 ರೂ.ಗಳ ಪರಿಹಾರ ಧನವನ್ನು ಪಾವತಿಸುವಂತೆ ರಾಷ್ಟ್ರೀಯ ಮಾವ ಹಕ್ಕುಗಳ ಆಯೋಗ(ಎನ್ ಎಚ್ ಆರ್ ಸಿ)ವು ಅರುಣಾಚಲ ಪ್ರದೇಶ ಸರಕಾರಕ್ಕೆ ನಿರ್ದೇಶ ನೀಡಿದೆ.

ಪಾಪಮ್ ಪಾರೆ ಜಿಲ್ಲೆಯ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ ಆರು ಮತ್ತು ಏಳನೇ ತರಗತಿಗಳ ವಿದ್ಯಾರ್ಥಿನಿಯರು ತಮ್ಮ ಮುಖ್ಯ ಶಿಕ್ಷಕಿ ಮತ್ತು ಇನ್ನೋರ್ವ ವಿದ್ಯಾರ್ಥಿನಿಯ ವಿರುದ್ಧ ಕಾಗದದ ತುಂಡೊಂದರಲ್ಲಿ ಅಶ್ಲೀಲ ಶಬ್ದಗಳನ್ನು ಬರೆದಿದ್ದರೆಂಬ ಆರೋಪದಲ್ಲಿ ಕಳೆದ ವರ್ಷದ ನ.23ರಂದು ಅವರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿತ್ತು.

ಘಟನೆಯನ್ನು ಸ್ವಯಂಪ್ರೇರಿತವಾಗಿ ಗಮನಕ್ಕೆ ತೆಗೆದುಕೊಂಡಿದ್ದ ಆಯೋಗವು ಅರುಣಾಚಲ ಪ್ರದೇಶ ಸರಕಾರ ಮತ್ತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ನೋಟಿಸ್‌ಗಳನ್ನು ಜಾರಿಗೊಳಿಸಿತ್ತು. ಮೂವರು ಶಿಕ್ಷಕಿಯರು ದಂಡನಾ ಕ್ರಮವಾಗಿ ಇಡೀ ಶಾಲೆಯ ಎದುರು ಈ ವಿದ್ಯಾರ್ಥಿನಿಯರ ಬಟ್ಟೆಗಳನ್ನು ಬಲವಂತದಿಂದ ಕಳಚಿಸಿದ್ದರು,ತನ್ಮೂಲಕ ಅವರ ಘನತೆಯನ್ನು ಕಿತ್ತುಕೊಂಡಿದ್ದರು ಎಂದಿರುವ ಆಯೋಗವು,ನಾಲ್ಕು ವಾರಗಳಲ್ಲಿ ತನ್ನ ಆದೇಶದ ಪಾಲನಾ ವರದಿಯನ್ನು ಮತ್ತು ಈ ಬಾಲಕಿಯರಿಗೆ ಪರಿಹಾರವನ್ನು ಪಾವತಿಸಿದ ಬಗ್ಗೆ ಪುರಾವೆಗಳನ್ನು ಸಲ್ಲಿಸುವಂತೆ ಅರುಣಾಚಲ ಸರಕಾರಕ್ಕೆ ಸೂಚಿಸಿದೆ. ತಾವು ಅಶ್ಲೀಲ ಶಬ್ದಗಳನ್ನು ಬರೆದಿದ್ದನ್ನು ಬಾಲಕಿಯರು ನಿರಾಕರಿಸಿದ್ದರೂ ಅವರನ್ನು ದಂಡಿಸಲಾಗಿತ್ತು ಎಂದು ಅದು ಬೆಟ್ಟು ಮಾಡಿದೆ.

ಶಾಲೆಯ ಮೂವರು ಶಿಕ್ಷಕಿಯರು ಅಮಾನವೀಯವಾಗಿ ಮತ್ತು ಕ್ರೂರವಾಗಿ ವರ್ತಿಸಿದ್ದರು ಎನ್ನುವುದನ್ನು ರಾಜ್ಯ ಸರಕಾರವು ದೃಢೀಕರಿಸಿದ ಬಳಿಕ ಆಯೋಗವು ಈ ನಿರ್ದೇಶವನ್ನು ಹೊರಡಿಸಿದೆ.

ವಿಚಾರಣೆಯ ಬಳಿಕ ಓರ್ವ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದ್ದು,ಇತರ ಇಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ . ಪೊಲೀಸರು ಈ ಬಗ್ಗೆ ಐಪಿಸಿ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಶಿಕ್ಷಕಿಯರನ್ನು ಬಂಧಿಸಲಾಗಿದ್ದು,ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X