Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಿಕಾ ದಿನಾಚರಣೆ: ವಿಶೇಷ ಶಾಲೆಯ...

ಪತ್ರಿಕಾ ದಿನಾಚರಣೆ: ವಿಶೇಷ ಶಾಲೆಯ ಪ್ರಾಂಶುಪಾಲೆ ಮಾಲತಿ ಉದ್ಯಾವರ್ ಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ3 July 2018 8:51 PM IST
share
ಪತ್ರಿಕಾ ದಿನಾಚರಣೆ: ವಿಶೇಷ ಶಾಲೆಯ ಪ್ರಾಂಶುಪಾಲೆ ಮಾಲತಿ ಉದ್ಯಾವರ್ ಗೆ ಸನ್ಮಾನ

ಭಟ್ಕಳ, ಜು. 3: ಪತ್ರಿಕಾ ದಿನಾಚರಣೆ ಅಂಗವಾಗಿ ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಇಲ್ಲಿನ ವಿಶೇಷ ಶಾಲೆಯ ಪ್ರಾಂಶುಪಾಲೆ ಮಾಲತಿ ಉದ್ಯಾವರ್ ರನ್ನು ಸನ್ಮಾನಿಸಿ ಗೌರವಿಸಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜೀವನದಲ್ಲಿ ಪ್ರತಿ ಬಾರಿ ಸೋಲನ್ನೇ ಕಾಣುತ್ತ ಅವೆಲ್ಲವನ್ನು ಈ ಮಕ್ಕಳ ನಗುವಿನಿಂದ ಮರೆಯುತ್ತಿದ್ದೇನೆ. ಈ ರೀತಿಯ ಮಕ್ಕಳ ಪಾಲನೆ ಪೋಷಣೆಯನ್ನು ತಾಳ್ಮೆ, ಪ್ರೀತಿಯಿಂದ ಮಾಡಿದರೆ ಮಾತ್ರ ಅವರಲ್ಲಿ ಬದಲಾವಣೆ ಸಾಧ್ಯ ಎಂದರು.

ಕೇವಲ 4 ಮಕ್ಕಳಿಂದ ಆರಂಭಗೊಂಡ ಶಾಲೆ ಇದಾಗಿದ್ದು, ಈಗ ಸದ್ಯ ಒಂದು ಕಟ್ಟಡದಲ್ಲಿ ನಡೆಸಿಕೊಂಡು ಹೋಗುತ್ತಿದ್ದೇನೆ. ತುಂಬಾ ಕಷ್ಟದ ಸಂದರ್ಭಗಳಲ್ಲಿ ಸೋಲು, ಅವಮಾನವನ್ನು ಅನುಭವಿಸಿದ್ದರು ಮಕ್ಕಳಿಗಾಗಿ ಶಾಲೆ ಮಾಡಿಯೇ ತೀರಬೇಕೆಂಬ ಛಲದಿಂದ ಮುಂದುವರೆಯುತ್ತಿದ್ದೇನೆ. ಆರಂಭದ ದಿನದಲ್ಲಿ ಇಲ್ಲಿ ಬೇರೆ ಯಾವುದಾದರು ಈ ರೀತಿಯ ಶಾಲೆ ಆರಂಭಗೊಂಡಿದ್ದು ಅವರನ್ನು ಸರಿಯಾಗಿ ನೋಡುಕೊಳ್ಳುತ್ತಿದ್ದರೆ ಆ ಶಾಲೆಗೆ ಅವರನ್ನು ಕಳುಹಿಸುತ್ತಿದ್ದೆ. ಆದರೆ ಒಂದು ಶಾಲೆಯನ್ನು ನಡೆಸುವುದು ಕಷ್ಟ ಸಾಧ್ಯ ಎಂದರು.

ಈ ಮಕ್ಕಳ ಪಾಲಕರಿಗೆ ಮಕ್ಕಳ ಬಗ್ಗೆ ಪ್ರೀತಿ ಇರಬೇಕು. ಇವರು ಎಲ್ಲರಂತಾಗಲು ಅವರ ಪ್ರಯತ್ನವೂ ಬೇಕಾಗುತ್ತದೆ. ಈ ಶಾಲೆಯ ಮಕ್ಕಳು ಒಲಂಪಿಕ್ಸನಲ್ಲಿ ರಾಜ್ಯ ರಾಷ್ಟ್ರಕ್ಕೆ ಹೋಗಿದ್ದು, ಅಂತಾರಾಷ್ಟ್ರೀಯ ಮಟ್ಟಕ್ಕೆ ಪಾಲಕರ ಸಹಕಾರವಿಲ್ಲದೇ ವಾಪಸ್ಸು ಬಂದಿದ್ದೇವು. ಆದರೆ 2020ರ ಒಲಿಂಪಿಕ್ಸ್ ನಲ್ಲಿ ಶಾಲೆಯಿಂದ 10 ಮಕ್ಕಳನ್ನು ಕರೆದುಕೊಂಡು ಹೋಗುವಂತೆ ತಯಾರಿ ಮಾಡುತ್ತಿದ್ದೇನೆ ಎಂದ ಅವರು ಶಾಲೆಯ ಎಲ್ಲಾ ಮಕ್ಕಳಿಗೆ ಶತ ಪ್ರಯತ್ನ ಮಾಡಿ ಸರಕಾರದಿಂದ 3 ಸಾವಿರ ಬರುವಂತೆ ಅನೂಕುಲ ಮಾಡಿಕೊಟ್ಟಿದ್ದೇನೆ ಎಂದರು.

ಪತ್ರಕರ್ತರ ಬೆಂಬಲದೊಂದಿಗೆ ಶಾಲೆ ಚೆನ್ನಾಗಿ ನಡೆದುಕೊಂಡು ಹೋಗುತ್ತಿದ್ದು, ಅವರ ಸಹಕಾರವನ್ನು ಯಾವತ್ತು ಮರೆಯುವಂತಿಲ್ಲ. ಇಂತಹ ಸನ್ಮಾನ ನನಗೆ ಸಿಕ್ಕಿದ್ದು ಸಂತಸವಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಬಿಜೆಪಿ ಮಹಿಳಾ ಮುಖಂಡೆ ಶಿವಾನಿ ಶಾಂತಾರಾಮ ಮಾತನಾಡಿ, ಸಾಮಾಜಿಕ ಕಳಕಳಿ ಇರುವ ಪತ್ರಕರ್ತರು ಸಮಾಜಮುಖಿ ಕೆಲಸದಲ್ಲಿ ಅದು ಇಂತಹ ವಿಶೇಷ ಮಕ್ಕಳ ಪೋಷಣೆ ಮಾಡುತ್ತಿರುವ ಶಾಲೆಯ ಸ್ಥಾಪಕಿಗೆ ಸನ್ಮಾನ ಮಾಡಿರುವುದು ಸಂತಸವಾಗಿದೆ. ಸಾಮಾನ್ಯ ಮಕ್ಕಳನ್ನೇ ಸಾಕಲು ಕಷ್ಟ ಸಾಧ್ಯದ ದಿನದಲ್ಲಿ ಇಂತಹ ವಿಶೇಷ ಮಕ್ಕಳ ಪಾಲನೆ ಪೋಷಣೆ ಮಡುತ್ತಿರುವ ಇವರ ಸೇವೆ ಶ್ರೇಷ್ಠವಾಗಿದೆ. ಇವರಿಗೆ ಸನ್ಮಾನಿಸುವ ಭಾಗ್ಯ ನನ್ನದಗಿದ್ದು ಸಂತೋಷವಾಗಿದೆ. ಮುಂದಿನ ದಿನದಲ್ಲಿ ಶಾಲೆಯ ಅಭಿವೃದ್ಧಿಗೆ ನನ್ನಿಂದಾಗುವ ಸಹಾಯ ಮಾಡಲು ಸಿದ್ಧ ಎಂದರು.

ರಾಜ್ಯ ಕಾರ್ಯಕಾರಣಿ ಸದಸ್ಯ ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ರಾಘವೇಂದ್ರ ಹೆಬ್ಬಾರ್, ತಾಲೂಕಾ ಸಂಘದ ಕಾರ್ಯದರ್ಶಿ ಭಾಸ್ಕರ ನಾಯ್ಕ, ಉಪಸ್ಥಿತರಿದ್ದರು. ಉಪಾಧ್ಯಕ್ಷ ಎಂ.ಆರ್.ಮಾನ್ವಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X