Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸದನದಲ್ಲಿ ಪ್ರತಿಧ್ವನಿಸಿದ ಮರಳು ಮಾಫಿಯಾ

ಸದನದಲ್ಲಿ ಪ್ರತಿಧ್ವನಿಸಿದ ಮರಳು ಮಾಫಿಯಾ

ವಾರ್ತಾಭಾರತಿವಾರ್ತಾಭಾರತಿ3 July 2018 9:38 PM IST
share
ಸದನದಲ್ಲಿ ಪ್ರತಿಧ್ವನಿಸಿದ ಮರಳು ಮಾಫಿಯಾ

ಬೆಂಗಳೂರು, ಜು.2: ರಾಜ್ಯದಲ್ಲಿ ಕಬ್ಬಿಣ ಅದಿರು ರಫ್ತಿಗಿಂತ ದೊಡ್ಡ ಹಗರಣವಾಗಿ ಮರಳು ಮಾಫಿಯಾ ತಲೆ ಎತ್ತಿದೆ. ಪೊಲೀಸರು ಹಾಗೂ ತಹಶೀಲ್ದಾರ್‌ಗಳು ಮೇಯಲು ಇದು ಹುಲ್ಲುಗಾವಲು ಇದ್ದಂತೆ ಎಂದು ಬಿಜೆಪಿ ಸದಸ್ಯ ಮಾಧುಸ್ವಾಮಿ ಆರೋಪಿಸಿದರು.

ಮಂಗಳವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾ ನಿರ್ಣಯದ ಪ್ರಸ್ತಾವದ ಮೇಲಿನ ಚರ್ಚೆಯಲ್ಲಿ ವಿಪಕ್ಷ ನಾಯಕ ಯಡಿಯೂರಪ್ಪ ಮಾತನಾಡುವ ವೇಳೆ ಮಧ್ಯಪ್ರವೇಶಿಸಿ ಅವರು ಮಾತನಾಡಿದರು.

ಚಿಕ್ಕನಾಯಕನಹಳ್ಳಿ, ಶಿರಾ, ಹೊಸದುರ್ಗ, ಹಿರಿಯೂರು ತಾಲೂಕುಗಳಲ್ಲಿ ಒಂದು ತೋಟವು ಉಳಿದಿಲ್ಲ. ಇಡೀ ರಾಜ್ಯದಲ್ಲಿ ಇದೇ ರೀತಿಯ ಪರಿಸ್ಥಿತಿ ತಲೆದೋರಿದೆ. ಪಕ್ಷಾತೀತವಾಗಿ ತಮಗೆ ಕೈ ಮುಗಿದು ಕೇಳುತ್ತೇವೆ. ಈ ಮರಳು ಮಾಫಿಯಾಗೆ ಕಡಿವಾಣ ಹಾಕಿ ಎಂದು ಅವರು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಜನತಾ ಮನೆಗಳನ್ನು ನಿರ್ಮಿಸಿಕೊಳ್ಳಲು ಒಂದು ಟ್ರಾಕ್ಟರ್ ಮರಳು ಸಿಗುತ್ತಿಲ್ಲ. ಮುಖ್ಯಮಂತ್ರಿಗಳು ಹಿಂದಿನ ಸರಕಾರದ ಅವಧಿಯಲ್ಲಿ ವಿಪಕ್ಷದಲ್ಲಿದ್ದಾಗ ಮರಳು ಮಾಫಿಯಾ ಬಗ್ಗೆ ಏನು ಮಾತನಾಡಿದ್ದಾರೆ ಎಂಬುದನ್ನು ಅವರು ನೆನಪು ಮಾಡಿಕೊಳ್ಳಬೇಕು ಎಂದು ಮಾಧುಸ್ವಾಮಿ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮರಳು ನೀತಿಯನ್ನು ಹೊಸದಾಗಿ ಜಾರಿಗೆ ತರುವುದಾಗಿ ಹೇಳಿ ಅದರಲ್ಲಿ ಬದಲಾವಣೆ ಮಾಡಿದವರು ಯಾರು? ಶಾಸಕರು ಇಲ್ಲಿ ಪೊಲೀಸರ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಆದರೆ, ಯಾರಿಂದ ಈ ಸಮಸ್ಯೆ ಸೃಷ್ಟಿಯಾಗಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ಸಮಸ್ಯೆಯನ್ನು ನಾನೊಬ್ಬನೆ ಪರಿಹರಿಸಲು ಸಾಧ್ಯವಿಲ್ಲ. ಈ ಸದನದ ಎಲ್ಲ ಸದಸ್ಯರು ನನಗೆ ಸಹಕಾರ ನೀಡಬೇಕು ಎಂದರು.

ಆಗ ಮಧ್ಯಪ್ರವೇಶಿಸಿದ ಯಡಿಯೂರಪ್ಪ, ಮರಳು ಮಾಫಿಯಾ ತಡೆಯಲು ನೀವು ಕೈಗೊಳ್ಳುವ ಕ್ರಮಕ್ಕೆ ನಮ್ಮ ಪಕ್ಷದ ಎಲ್ಲ ಸದಸ್ಯರು ಬೆಂಬಲ ನೀಡುತ್ತೇವೆ. ಸಾಮಾನ್ಯ ಜನರ ನೆಮ್ಮದಿ, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಬಾರದು. ಅಧಿಕಾರಿಗಳು, ರಾಜಕಾರಣಿಗಳು ಯಾರೇ ಈ ಮಾಫಿಯಾದಲ್ಲಿ ಪಾಲ್ಗೊಂಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X