Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ...

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ: ಜು.6ಕ್ಕೆ ಗುಲಾಬಿ ಶೆಡ್ತಿ ಪಾಟಿಸವಾಲು ಪ್ರಕ್ರಿಯೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ3 July 2018 9:58 PM IST
share

ಉಡುಪಿ, ಜು.3: ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ವಿಚಾರಣಾ ಪ್ರಕ್ರಿಯೆಯು ಎರಡನೆ ದಿನವಾದ ಮಂಗ ಳವಾರವೂ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಮುಂದುವರೆದರೂ, ಆರೋಪಿ ಪರ ವಕೀಲರ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಾಗಿದ್ದ ಪಾಟಿ ಸವಾಲು ಹಾಗೂ ಹೇಳಿಕೆ ಸಂಗ್ರಹವನ್ನು ಜು.6ಕ್ಕೆ ಮುಂದೂಡಲಾಯಿತು.

ಸೋಮವಾರ ಪ್ರಕರಣದ ಪ್ರಮುಖ ಸಾಕ್ಷಿ ಹಾಗೂ ದೂರುದಾರರಾದ ಮೃತ ಭಾಸ್ಕರ್ ಶೆಟ್ಟಿಯ ತಾಯಿ ಗುಲಾಬಿ ಶೆಡ್ತಿ ಹೇಳಿಕೆಯನ್ನು ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ ಪಡೆದುಕೊಂಡಿದ್ದು ಅವರನ್ನು ಆರೋಪಿ ಪರ ಹಿರಿಯ ವಕೀಲ ಮೈಸೂರಿನ ಅಶ್ವಿನಿ ಕುಮಾರ್ ಜೋಶಿ ಪಾಟಿ ಸವಾಲಿಗೆ ಒಳಪಡಿಸುವ ಪ್ರಕ್ರಿಯೆಯನ್ನು ಮಂಗಳವಾರಕ್ಕೆ ನಿಗದಿಪಡಿಸಲಾಗಿತ್ತು.

ಅಲ್ಲದೆ ಪ್ರಕರಣದ ಮೊದಲ ತನಿಖಾಧಿಕಾರಿಯಾಗಿದ್ದ ಆಗಿನ ಮಣಿಪಾಲ ಪೊಲೀಸ್ ನಿರೀಕ್ಷಕ ಎಸ್.ವಿ.ಗಿರೀಶ್ ಅವರಿಂದ ಸರಕಾರಿ ಅಭಿಯೋಜಕಿ ಸಾಕ್ಷ ಹೇಳಿಕೆ ಪಡೆದುಕೊಳ್ಳುವುದು ಕೂಡ ಮಂಗಳವಾರಕ್ಕೆ ನಿಗದಿಯಾಗಿತ್ತು. ಈ ಮಧ್ಯೆ ಕಣ್ಣಿನ ತೀವ್ರ ತೊಂದರೆಗೆ ಒಳಗಾದ ಹಿರಿಯ ವಕೀಲ ಅಶ್ವಿನಿ ಕುಮಾರ್ ಜೋಶಿ ಪ್ರಕರಣದ ವಾದ ಮಂಡನೆಯಿಂದ ನಿವೃತ್ತಿಗೊಂಡಿದ್ದು ಅವರ ಬದಲು ಮಂಗಳೂರಿನ ವಕೀಲ ನಾರಾಯಣ ಪೂಜಾರಿ ಆರೋಪಿ ಪರ ವಕಲಾತು ವಹಿಸಿಕೊಂಡಿದ್ದರು.

ಇಂದು ನ್ಯಾಯಾಲಯದ ಕಲಾಪ ಆರಂಭಗೊಂಡಾಗ ವಕೀಲ ನಾರಾಯಣ ಪೂಜಾರಿ ಆರೋಪಿ ಪರ ವಕಲಾತು ವಹಿಸಿ, ಗುಲಾಬಿ ಶೆಡ್ತಿಯವರ ಪಾಟಿ ಸವಾಲಿಗೆ ಕಾಲಾವಕಾಶ ನೀಡುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಇದಕ್ಕೆ ಸರಕಾರಿ ಅಭಿಯೋಜಕಿ ಶಾಂತಿಬಾಯಿ ಆಕ್ಷೇಪಣೆ ಸಲ್ಲಿಸಿದರು. ಈ ವಿಚಾರದಲ್ಲಿ ವಾದ ಪ್ರತಿವಾದಗಳು ನಡೆದವು. ಇದನ್ನು ಆಲಿಸಿದ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ, ಗುಲಾಬಿ ಶೆಡ್ತಿಯ ಪಾಟಿ ಸವಾಲು ಹಾಗೂ ಪೊಲೀಸ್ ಅಧಿಕಾರಿ ಎಸ್.ವಿ.ಗಿರೀಶ್ ಅವರ ಹೇಳಿಕೆ ಪ್ರಕ್ರಿಯೆಯನ್ನು ಜು.6ಕ್ಕೆ ಮುಂದೂಡಿ ಆದೇಶ ನೀಡಿದರು.
  
ಇಂದು ಕೂಡ ತೆರೆದ ನ್ಯಾಯಾಲಯದಲ್ಲಿಯೇ ವಿಚಾರಣೆ ನಡೆದಿದ್ದು ಪ್ರೊಜೆಕ್ಟರ್‌ಗಳನ್ನು ಅಳವಡಿಸಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಅವರೊಂದಿಗೆ ವಿಡಿಯೋ ಕಾನ್ಫೆರೆನ್ಸ್ ನಡೆಸಲಾಯಿತು. ನ್ಯಾಯಾಲಯದ ಪ್ರವೇಶ ದ್ವಾರದಲ್ಲಿ ಲೋಹ ಶೋಧಕ ಯಂತ್ರವನ್ನು ಅಳವಡಿಸಿ, ನ್ಯಾಯಾಲಯ ದೊಳಗೆ ವಕೀಲರ ಹೊರತು ಯಾರಿಗೂ ಪ್ರವೇಶ ಕಲ್ಪಿಸಲಿಲ್ಲ. ಭದ್ರತೆಯ ಉಸ್ತು ವಾರಿಯನ್ನು ಉಡುಪಿಯ ಡಿವೈಎಸ್ಪಿ ಕುಮಾರಸ್ವಾಮಿ, ಮಣಿಪಾಲ ಪೊಲೀಸ್ ನಿರೀಕ್ಷಕ ಸುದರ್ಶನ್ ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಂಡಿರುವ ಸಾಕ್ಷನಾಶ ಆರೋಪಿಗಳಾದ ಶ್ರೀನಿವಾಸ ಭಟ್ ಹಾಗೂ ರಾಘವೇಂದ್ರ, ಆರೋಪಿ ವಕೀಲ ರಾದ ಅರುಣ್ ಬಂಗೇರ, ಅರುಣ್ ಕುಮಾರ್ ಶೆಟ್ಟಿ, ವಿಕ್ರಂ ಹೆಗ್ಡೆ, ಎ.ಸಂಜೀವ ಮೊದಲಾದವರು ಉಪಸ್ಥಿತರಿದ್ದರು.

ಇಂದು ನಡೆಯಬೇಕಾಗಿದ್ದ ಪಾಟಿ ಸವಾಲು ಹಾಗೂ ಹೇಳಿಕೆ ಪಡೆಯುವ ಪ್ರಕ್ರಿಯೆ ಜು.6ಕ್ಕೆ ಮುಂದೂಡಿದ ಹಿನ್ನೆಲೆಯಲ್ಲಿ ಈಗಾಗಲೇ ಜು.4, 5 ಮತ್ತು 6ರಂದು ನಿಗದಿಯಾದ ಇತರ ಸಾಕ್ಷಿಗಳ ವಿಚಾರಣೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರದ್ದು ಪಡಿಸಿ ಆದೇಶ ನೀಡಿದೆ.

ಮೊದಲ ಹಂತದಲ್ಲಿ ಜು.3ರಿಂದ 6ರವರೆಗೆ ಸಾಕ್ಷಿಗಳ ವಿಚಾರಣೆಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಇದೀಗ ಆರೋಪಿ ಪರ ವಕೀಲರು ಪಾಟಿ ಸವಾಲಿಗೆ ಕಾಲಾವಕಾಶ ಕೇಳಿರುವುದರಿಂದ ಈ ನಡುವಿನ ಮೂರು ದಿನಗಳ ಸಾಕ್ಷಿಗಳ ಹೇಳಿಕೆ ಪಡೆದುಕೊಳ್ಳುವುದನ್ನು ರದ್ದು ಪಡಿಸಲಾಗಿದೆ. ಆದರೆ ಜು.16ರಿಂದ 19ರವರೆಗಿನ ಸಾಕ್ಷಿಗಳ ವಿಚಾರಣೆಯು ಈಗಾಗಲೇ ನಿರ್ಧರಿಸಿದಂತೆ ನಡೆಯಲಿದೆ. ಮುಂದೆ ರದ್ದುಗೊಂಡ ಸಾಕ್ಷಿಗಳ ವಿಚಾರಣೆಗೆ ನಿಗದಿ ಪಡಿಸಿ ಸಮನ್ಸ್ ಜಾರಿಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X