Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೆಲೆಸ್ತೀನ್ ನಿರಾಶ್ರಿತರ ನಿಧಿಗೆ ದೇಣಿಗೆ...

ಫೆಲೆಸ್ತೀನ್ ನಿರಾಶ್ರಿತರ ನಿಧಿಗೆ ದೇಣಿಗೆ ಮುಂದುವರಿಸಿ

ಅಮೆರಿಕದ ಮಾಜಿ ವಿಶ್ವಸಂಸ್ಥೆ ರಾಯಭಾರಿಗಳಿಂದ ಟ್ರಂಪ್ ಆಡಳಿತಕ್ಕೆ ಒತ್ತಡ

ವಾರ್ತಾಭಾರತಿವಾರ್ತಾಭಾರತಿ3 July 2018 10:30 PM IST
share
ಫೆಲೆಸ್ತೀನ್ ನಿರಾಶ್ರಿತರ ನಿಧಿಗೆ ದೇಣಿಗೆ ಮುಂದುವರಿಸಿ

ವಾಶಿಂಗ್ಟನ್, ಜು. 3: ಫೆಲೆಸ್ತೀನ್ ನಿರಾಶ್ರಿತರಿಗೆ ನೆರವು ನೀಡುವ ವಿಶ್ವಸಂಸ್ಥೆಯ ಘಟಕ ಸಂಸ್ಥೆಗೆ ಕೊಡುತ್ತಿರುವ ದೇಣಿಗೆಯನ್ನು ಮುಂದುವರಿಸುವಂತೆ ಅಮೆರಿಕದ 7 ಮಾಜಿ ವಿಶ್ವಸಂಸ್ಥೆ ರಾಯಭಾರಿಗಳು ಅಮೆರಿಕದ ಟ್ರಂಪ್ ಆಡಳಿತಕ್ಕೆ ಸೋಮವಾರ ಕರೆ ನೀಡಿದ್ದಾರೆ.

ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾಮಗಾರಿ ಸಂಸ್ಥೆ (ಯುಎನ್‌ಆರ್‌ಡಬ್ಲ್ಯುಎ)ಗೆ ನೀಡುವ ನೆರವನ್ನು ತಡೆಹಿಡಿಯುವುದರಿಂದ ಇಸ್ರೇಲ್ ಮತ್ತು ಜೋರ್ಡಾನ್ ಸೇರಿದಂತೆ, ಮಧ್ಯಪ್ರಾಚ್ಯ ವಲಯದಲ್ಲಿರುವ ಅಮೆರಿಕದ ಮಿತ್ರ ದೇಶಗಳು ರಾಷ್ಟ್ರೀಯ ಭದ್ರತೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ವಿದೇಶ ಕಾರ್ಯದರ್ಶಿ ಮೈಕ್ ಪಾಂಪಿಯೊಗೆ ಬರೆದ ಪತ್ರವೊಂದರಲ್ಲಿ ಮಾಜಿ ರಾಯಭಾರಿಗಳು ಹೇಳಿದ್ದಾರೆ.

ಈ ಏಳು ಮಾಜಿ ರಾಯಭಾರಿಗಳಲ್ಲಿ ಡೆಮಾಕ್ರಟಿಕ್ ಮತ್ತು ರಿಪಬ್ಲಿಕನ್- ಎರಡೂ ಆಡಳಿತಗಳ ರಾಯಭಾರಿಗಳಿದ್ದಾರೆ.

‘‘ಬಜೆಟ್ ಕೊರತೆಯನ್ನು ನೀಗಿಸುವುದಕ್ಕಾಗಿ ಫೆಲೆಸ್ತೀನ್ ನಿಧಿಗೆ ನೀಡುತ್ತಿರುವ ನೆರವನ್ನು ಮುಂದುವರಿಸುವಂತೆ ನಾವು ನಿಮ್ಮನ್ನು ಒತ್ತಾಯಿಸುತ್ತೇವೆ’’ ಎಂದು ಮಾಜಿ ವಿಶ್ವಸಂಸ್ಥೆ ರಾಯಭಾರಿಗಳು ಹೇಳಿದ್ದಾರೆ.

ಅಧ್ಯಕ್ಷ ಜಾರ್ಜ್ ಎಚ್. ಡಬ್ಲ್ಯು. ಬುಶ್ ಅಡಿಯಲ್ಲಿ ಸೇವೆ ಸಲ್ಲಿಸಿದ ಥಾಮಸ್ ಪಿಕರಿಂಗ್ ಮತ್ತು ಎಡ್ವರ್ಡ್ ಪರ್ಕಿನ್ಸ್, ಅಧ್ಯಕ್ಷ ಬಿಲ್ ಕ್ಲಿಂಟನ್ ಅವಧಿಯಲ್ಲಿ ಸೇವೆ ಸಲ್ಲಿಸಿರುವ ಮ್ಯಾಡಲೀನ್ ಆಲ್‌ಬ್ರೈಟ್ ಮತ್ತು ಬಿಲ್ ರಿಚರ್ಡ್‌ಸನ್, ಜಾರ್ಜ್ ಡಬ್ಲ್ಯು. ಬುಶ್ ಕಾಲದಲ್ಲಿ ವಿಶ್ವಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುವ ಜಾನ್ ನೀಗ್ರೊಪಾಂಟ್ ಮತ್ತು ಬರಾಕ್ ಒಬಾಮ ಅವಧಿಯಲ್ಲಿ ಸೇವೆ ಸಲ್ಲಿಸಿರುವ ಸುಸಾನ್ ರೈಸ್ ಮತ್ತು ಸಮಂತಾ ಪವರ್.

ಗಂಭೀರ ಬಜೆಟ್ ಬಿಕ್ಕಟ್ಟು

ವಿಶ್ವಸಂಸ್ಥೆಯ ಫೆಲೆಸ್ತೀನ್ ನೆರವು ಸಂಸ್ಥೆಯು ಗಂಭೀರ ಬಜೆಟ್ ಕೊರತೆಯನ್ನು ಎದುರಿಸುತ್ತಿದೆ. ಅಮೆರಿಕ ತನ್ನ ದೇಣಿಗೆಯನ್ನು ನಿಲ್ಲಿಸಿರುವುದು ಇದಕ್ಕೆ ಆಂಶಿಕ ಕಾರಣವಾಗಿದೆ.

ಯುಎನ್‌ಆರ್‌ಡಬ್ಲುಎಗೆ 250 ಮಿಲಿಯ ಡಾಲರ್ (ಸುಮಾರು 1,700 ಕೋಟಿ ರೂಪಾಯಿ) ಮೊತ್ತದ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಮೊತ್ತ ಲಭ್ಯವಿಲ್ಲ್ಲದಿದ್ದರೆ ಗಾಝಾ ಪಟ್ಟಿ, ಪಶ್ಚಿಮ ದಂಡೆ, ಜೋರ್ಡಾನ್, ಲೆಬನಾನ್ ಮತ್ತು ಸಿರಿಯಗಳಲ್ಲಿರುವ 50 ಲಕ್ಷ ಫೆಲೆಸ್ತೀನಿಯರಿಗೆ ನೀಡಲಾಗುತ್ತಿರುವ ಆಹಾರ ನೆರವು, ವೈದ್ಯಕೀಯ ಚಿಕಿತ್ಸೆ ಮತ್ತು ಸ್ವಚ್ಛತೆ ಮುಂತಾದ ಮೂಲ ಸೌಕರ್ಯಗಳನ್ನು ಒದಗಿಸುವ ಕಾರ್ಯಕ್ರಮಗಳನ್ನು ಗಣನೀಯವಾಗಿ ಕಡಿತಗೊಳಿಸಬೇಕಾಗುತ್ತದೆ ಎಂದು ಅದು ಎಚ್ಚರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X