Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರೊ.ಕೆ.ಎಸ್.ರಂಗಪ್ಪ ಒಬ್ಬ ಪುಕ್ಕಲ:...

ಪ್ರೊ.ಕೆ.ಎಸ್.ರಂಗಪ್ಪ ಒಬ್ಬ ಪುಕ್ಕಲ: ಗೋ.ಮಧುಸೂದನ್

ವಾರ್ತಾಭಾರತಿವಾರ್ತಾಭಾರತಿ3 July 2018 10:35 PM IST
share
ಪ್ರೊ.ಕೆ.ಎಸ್.ರಂಗಪ್ಪ ಒಬ್ಬ ಪುಕ್ಕಲ: ಗೋ.ಮಧುಸೂದನ್

ಮೈಸೂರು,ಜು.3: ಕಳೆದ ಮೂರು ವರ್ಷಗಳಿಂದ ಮೂಡಿದ್ದ ನನ್ನೆಲ್ಲ ಪ್ರಶ್ನೆಗಳಿಗೂ ಮೈಸೂರು ವಿ.ವಿ. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರು ಇಂದು ಉತ್ತರಿಸುತ್ತಾರೆಂದು ಅತಿ ಭರವಸೆ ನಿರೀಕ್ಷಿಸಿದ್ದ ನನಗೂ ಸೇರಿದಂತೆ ಪತ್ರಕರ್ತರಿಗೂ ತೀವ್ರ ನಿರಾಸೆಯಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಹೇಳಿದರು.

ಕಾನೂನಾತ್ಮಕ ತೊಡಕಿನಿಂದ ಮೈಸೂರು ಪತ್ರಕರ್ತರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ರಂಗಪ್ಪ ಹಾಗೂ ಗೋ.ಮ ಸಂವಾದ ಕಾರ್ಯಕ್ರಮವು ರದ್ದಾಗಿದ್ದರೂ ಸಹ ಸಾಮಾಜಿಕ ಕಳಕಳಿಯಿಂದ ತಾವೇ ಸ್ವತಃ ಬಂದು ನನ್ನೆಲ್ಲ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದ್ದು ಜವಾಬ್ದಾರಿ ಸ್ಥಾನದಲ್ಲಿರುವ ತಮ್ಮ ಆದ್ಯ ಕರ್ತವ್ಯವಾಗಬೇಕಿತ್ತು. ಆದರೆ ನನ್ನ ಪ್ರಶ್ನೆಗಳನ್ನೇ ಎದುರಿಸದೇ ಹೆದರಿ ಓಡಿ ಹೋಗಿರುವ ರಂಗಪ್ಪ ಒಬ್ಬ ಪುಕ್ಕಲ ಎಂದು ಟೀಕಿಸಿದರು.

ಪತ್ರಕರ್ತರ ಸಂಘದ ಪ್ರಾಯೋಜಕತ್ವದ ಹೊರತಾಗಿಯೂ ಇಂದು ಏಕಾಂಗಿಯಾಗಿ ಸುದ್ದಿಗೋಷ್ಠಿ ನಡೆಸಿದ ಗೋ.ಮ ಅವರು, ರಂಗಪ್ಪ ಅಧಿಕಾರವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ 26 ಗಂಭೀರ ಪ್ರಶ್ನಾ ಪಟ್ಟಿಯ ದಾಖಲೆ ಬಿಡುಗಡೆಗೊಳಿಸಿ ಆರೋಪಗಳ ಸುರಿಮಳೆಗೈದರು.

ವಿಜ್ಞಾನಿ, ಅನ್ವೇಷಕನಾದ ರಂಗಪ್ಪನವರು ಕೇವಲ 30 ನಿಮಿಷಕ್ಕಾದರೂ ಬಂದು ನನ್ನ ಪ್ರಶ್ನೆಗಳಿಗೆ ಉತ್ತರ ನೀಡಬಹುದಿತ್ತು, ಅದರ ಹೊರತಾಗಿ ಪಲಾಯನ ನಡೆಸಿದ್ದು ತಾವೊಬ್ಬ ನೀಚ, ಮೋಸಗಾರ, ಸಾವಿರಾರು ವಿದ್ಯಾರ್ಥಿಗಳ ಬಾಳನ್ನು ಅಂಧಕಾರಕ್ಕೆ ನೂಕಿದ ನಯವಂಚಕನೆಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಸಂಘದ ಪ್ರಯೋಜಕತ್ವದ ಹೊರತಾಗಿಯು ಸ್ವಯಂ ನಡೆಸಿದ ಸುದ್ದಿಗೋಷ್ಠಿಯಲ್ಲಿ 10.30ವರೆಗೆ ಪ್ರೊ.ರಂಗಪ್ಪನವರಿಗೆ ಕಾದು ನಂತರ ಮಾತಿಗಿಳಿದ ಅವರು, ಕೆ.ಎಸ್.ಓ.ಯು ದಲ್ಲಿ ನಡೆದ ಎಲ್ಲಾ ಅವ್ಯವಹಾರಗಳನ್ನು ದಾಖಲೆ ಸಮೇತ ಒಂದೊಂದಾಗಿ ಪ್ರಶ್ನೆಗಳನ್ನು ಸವಿಸ್ತರವಾಗಿ ವಿವರಿಸಿದರು. ಉನ್ನತ ವಿಶೇಷ ಶಿಕ್ಷಣಾಧಿಕಾರಿಯಾಗಿ ನೇಮಕಗೊಂಡು ತಮ್ಮಲ್ಲೆ ಕೇಸ್ ಗಳನ್ನು ಮುಚ್ಚಿ ಹಾಕಲು ಹವಣಿಸುತ್ತಿದ್ದು, ಇವರನ್ನು ಅಧಿಕಾರದಿಂದ ದೂರವಿಡಬೇಕೆಂದು ಮಾಜಿ ಪ್ರಧಾನಿ ದೇವೇಗೌಡರಲ್ಲಿ ಮನವಿ ಮಾಡಿದರು.

ದೂರು ದಾಖಲಿಸಲು ರಾಜ್ಯಪಾಲರ ಆದೇಶ: ಕೋಟ್ಯಾಂತರ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ರಂಗಪ್ಪನವರನ್ನು ಮೊದಲ ಆರೋಪಿಯನ್ನಾಗಿ ಮಾಡಿ ಜಯಲಕ್ಷ್ಮೀಪುರಂನ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಲು ರಾಜ್ಯಪಾಲರು ಆದೇಶಿಸಿದ್ದಾರೆ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯನವರ ಅವಧಿಯಲ್ಲಿ ನಡೆದ ಸಿಐಡಿ ತನಿಖೆಯ ಬಿ-ರಿಪೋರ್ಟ್ ಅನ್ನು ಕೆ.ಎಸ್.ಓ.ಯು ಸಮ್ಮತಿಸದ ಹಿನ್ನಲೆಯಲ್ಲಿ ವರದಿಯು ಹಳ್ಳ ಹಿಡಿದಿದೆ. ಅಲ್ಲದೇ ಮುಕ್ತ ವಿವಿಯಲ್ಲಿ ನಡೆದ ಅವ್ಯವಹಾರದ ಕ್ಯಾನ್ಸರ್ ಅನ್ನು ಶತಮಾನೋತ್ಸವ ಕಂಡ ಮೈಸೂರು ವಿವಿಯಲ್ಲಿಯೂ ಹರಡಲು ಯತ್ನಿಸಿದ ಕ್ಯಾನ್ಸರ್ ರಂಗಪ್ಪ ಎಂದು ಲೇವಡಿ ಮಾಡಿದರು.

ಕಾನೂನು ಬಾಹಿರವಾಗಿ ಹಲವು ಲಕ್ಷಾಂತರ ಪ್ರಮಾಣ ಪತ್ರ ವಿತರಣೆ ಮಾಡಿದ್ದಾರೆ. ಕಷ್ಟ ಕಟ್ಟು ಓದಿದ ವಿದ್ಯಾರ್ಥಿಗಳಿಗೆ ಯಾವುದೇ ಬೆಲೆ ಇಲ್ಲದಂತಾಗಿದೆ. ವಿದ್ಯಾರ್ಥಿಗಳ ಮಾರ್ಕ್ಸ್ ಕಾರ್ಡ್ ಗಳು ರಂಗಪ್ಪರವರ ಬೇಜವ್ದಾರಿಯಿಂದ ರದ್ದಿ ಹಾಗೂ ಬೋಂಡಾ ಕಟ್ಟುವ ಪೇಪರ್ ಆಗಿದೆ ಎಂದು ವ್ಯಂಗ್ಯವಾಡಿದರು.

ವೇದಿಕೆ ಸಿದ್ದಗೊಳಿಸಿ ಚರ್ಚೆಗೆ ಸಿದ್ಧ : ಸವಾಲು

ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ಕುತೂಹಲ ಕೆರಳಿಸಿದ್ದ ಚರ್ಚೆ ರದ್ದಾಗಿದ್ದು, ಹಲವು ಪತ್ರಕರ್ತರಿಗೆ ನಿರಾಸೆಯಾಗಿದೆ. ಆದ್ರೆ ನಾನೇ ಏಕಾಂಗಿಯಾಗಿಯೇ ಪ್ರಶ್ನೆ ಮಾಡುತ್ತೇನೆ. ಸವಾಲು ಸ್ವೀಕರಿಸಿ ರಂಗಪ್ಪನವರೇ ವೇದಿಕೆ ಸಿದ್ದಗೊಳಿಸಲಿ. ಅಲ್ಲಿಗೆ ಹೋಗಿ ಚರ್ಚೆ ಮಾಡಲು ಸಿದ್ಧನಿದ್ದು, ತಮ್ಮೆಲ್ಲ ಪ್ರಶ್ನೆಗಳು ತಾವು ಉತ್ತರಿಸಬೇಕೆಂದು ಪುನರುಚ್ಚಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X