Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವದಂತಿಗಳಿಂದ ನಡೆಯುವ ಗುಂಪು ಹತ್ಯೆಯಿಂದ...

ವದಂತಿಗಳಿಂದ ನಡೆಯುವ ಗುಂಪು ಹತ್ಯೆಯಿಂದ ಆಘಾತ: ಸರಕಾರದ ಪತ್ರಕ್ಕೆ ವಾಟ್ಸ್ಆ್ಯಪ್ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ4 July 2018 3:19 PM IST
share
ವದಂತಿಗಳಿಂದ ನಡೆಯುವ ಗುಂಪು ಹತ್ಯೆಯಿಂದ ಆಘಾತ: ಸರಕಾರದ ಪತ್ರಕ್ಕೆ ವಾಟ್ಸ್ಆ್ಯಪ್ ಪ್ರತಿಕ್ರಿಯೆ

ಹೊಸದಿಲ್ಲಿ, ಜು. 4: ವಾಟ್ಸ್ಆ್ಯಪ್ ಸಂದೇಶಗಳ ಮೂಲಕ ಪಸರಿಸಲಾಗುವ ವದಂತಿಗಳಿಂದ ಹಿಂಸಾ ಘಟನೆಗಳು ನಡೆಯುತ್ತಿವೆ ಎಂದು ಸರಕಾರ ವಾಟ್ಸ್ಆ್ಯಪ್ಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿರಿಸಿರುವ ಸಂಸ್ಥೆ ತಾನು ಈ ಸಮಸ್ಯೆ ನಿಭಾಯಿಸಲು ಎರಡು ಹಂತದ ಕ್ರಮಗಳನ್ನು ಕೈಗೊಂಡಿದ್ದಾಗಿ ವಿವರಿಸಿದೆ.

‘‘ಭಾರತ ಸರಕಾರದಂತೆ ನಾವು ಕೂಡ ಈ ಹಿಂಸಾ ಕೃತ್ಯಗಳಿಗೆ ದಂಗಾಗಿದ್ದೇವೆ ಹಾಗೂ ಎತ್ತಲಾಗಿರುವ ಕೆಲವೊಂದು ಪ್ರಮುಖ ವಿಚಾರಗಳಿಗೆ ಕ್ಷಿಪ್ರವಾಗಿ ಸ್ಪಂದಿಸಲು ಇಚ್ಛಿಸುತ್ತೇವೆ. ಈ ಸರಕಾರ, ನಾಗರಿಕ ಸಮಾಜ ಮತ್ತು ತಂತ್ರಜ್ಞಾನ ಕಂಪೆನಿಗಳು ಜತೆಯಾಗಿ ಈ ಸವಾಲನ್ನು ಎದುರಿಸಬೇಕೆಂದು ನಾವು ನಂಬಿದ್ದೇವೆ’’ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ವಾಟ್ಸ್ಆ್ಯಪ್ ತಿಳಿಸಿದೆ.

‘‘ವಾಟ್ಸ್ಆ್ಯಪ್ ನಲ್ಲಿ ಯಾರನ್ನು ಬೇಕಾದರೂ ಒಂದೇ ಟ್ಯಾಪ್ ಮೂಲಕ ಬ್ಲಾಕ್ ಮಾಡಬಹುದಾಗಿದೆ. ಇತ್ತೀಚೆಗೆ ನಾವು ಗ್ರೂಪ್ ಚ್ಯಾಟ್ ಗಳಿಗೆ ಹಲವಾರು ಬದಲಾವಣೆ ತಂದಿದ್ದು, ಅನಗತ್ಯ ಮಾಹಿತಿ ಪಸರಿಸದಂತೆ ತಡೆಯುವುದು ಇದರ ಉದ್ದೇಶ. ನೀವು ಎತ್ತಿರುವ ಕೆಲವೊಂದು ವಿಚಾರಗಳಿಗೆ ಇದು ಪರಿಹಾರವಾಗಬಹುದೆಂದು ನಾವು ನಂಬಿದ್ದೇವೆ, ಗ್ರೂಪ್ ಒಂದನ್ನು ಬಿಟ್ಟು ಹೋದವರನ್ನು ಇತರರು ಮತ್ತೆ ಗ್ರೂಪ್ ಗೆ ಸೇರಿಸುವುದನ್ನು ಅದು ತಡೆಯುತ್ತದೆ. ಗ್ರೂಪ್ ನೊಳಗೆ ಯಾರು ಸಂದೇಶಗಳನ್ನು ಕಳುಹಿಸಬಹುದೆಂಬುದನ್ನು ನಿಯಂತ್ರಿಸುವ ಅಧಿಕಾರವನ್ನು ಅಡ್ಮಿನ್ ಗಳಿಗೆ ನೀಡುವ ಹೊಸ ಸೆಟ್ಟಿಂಗ್ ಅನ್ನೂ ಬಿಡುಗಡೆಗೊಳಿಸಲಾಗಿದೆ. ಅನಗತ್ಯ ಸಂದೇಶಗಳು ಹಾಗೂ ಫಾರ್ವರ್ಡ್ ಮೆಸೇಜ್ ಗಳು ಪಸರಿಸದಂತೆ ಇದು ನಿಯಂತ್ರಿಸುತ್ತದೆ’’ ಎಂದು ವಾಟ್ಸ್ಆ್ಯಪ್ ತನ್ನ ಇಮೇಲ್ ಪತ್ರದಲ್ಲಿ ತಿಳಿಸಿದೆ.

ವಾಟ್ಸ್ಆ್ಯಪ್ ಭಾರತದಲ್ಲಿ ಹೊಸ ಲೇಬಲ್ ಆರಂಭಿಸಲು ನಿರ್ಧರಿಸಿದ್ದು ಫಾವರ್ಡ್ ಮಾಡಲಾದ ಸಂದೇಶಗಳು ಹಾಗೂ ಕಳುಹಿಸಿದಾತನೇ ಬರೆದ ಸಂದೇಶಗಳನ್ನು ಅದು ಬೊಟ್ಟು ಮಾಡಿ ತೋರಿಸುತ್ತದೆ. ತಪ್ಪು ಮಾಹಿತಿ ಪಸರಿಸದಂತೆ ತಡೆಯಲು ಭಾರತದ ಪ್ರಮುಖ ಶೈಕ್ಷಣಿಕ ತಜ್ಞರೊಡನೆ ಜತೆಯಾಗಿ ಕೆಲಸ ಮಾಡುವ ಉದ್ದೇಶವೂ ತನಗಿದೆ ಎಂದು ವಾಟ್ಸ್ಆ್ಯಪ್ ಹೇಳಿದೆ.

ಜುಲೈ 2ರಂದು ಭಾರತ ಸರಕಾರ ವಾಟ್ಸ್ಆ್ಯಪ್ ಗೆ ಪತ್ರ ಬರೆದು ಬೇಜವಾಬ್ದಾರಿಯ ಹಾಗೂ ಸ್ಫೋಟಕ ಸಂದೇಶಗಳನ್ನು ತಡೆಯುವ ತುರ್ತು ಅಗತ್ಯವನ್ನು ಒತ್ತಿ ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X