Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರಿಗೆ ಕೇಂದ್ರ ಸರಕಾರದ ಕೊಡುಗೆ: ಭತ್ತ...

ರೈತರಿಗೆ ಕೇಂದ್ರ ಸರಕಾರದ ಕೊಡುಗೆ: ಭತ್ತ ಸೇರಿ 14 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ4 July 2018 7:01 PM IST
share
ರೈತರಿಗೆ ಕೇಂದ್ರ ಸರಕಾರದ ಕೊಡುಗೆ: ಭತ್ತ ಸೇರಿ 14 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಹೊಸದಿಲ್ಲಿ, ಜು.4: ಭತ್ತ ಸೇರಿದಂತೆ 14 ಮುಂಗಾರು ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸುವ ಮೂಲಕ ಕೇಂದ್ರ ಸರಕಾರ ರೈತರಿಗೆ ಭರ್ಜರಿ ಕೊಡುಗೆ ಪ್ರಕಟಿಸಿದೆ. ಲೋಕಸಭೆ ಚುನಾವಣೆಗೆ ಒಂದು ವರ್ಷಕ್ಕಿಂತಲೂ ಕಡಿಮೆ ಅವಧಿ ಉಳಿದಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಕೈಗೊಂಡಿರುವ ಈ ನಿರ್ಧಾರದಿಂದಾಗಿ 15,000 ಕೋಟಿ ರೂ. ವಾರ್ಷಿಕ ಹೊರೆ ಬೀಳಲಿದೆ.

ಭತ್ತ (ಸಾಮಾನ್ಯ ಗ್ರೇಡ್)ದ ಬೆಂಬಲ ಬೆಲೆಯನ್ನು ಪ್ರತೀ ಕ್ವಿಂಟಾಲ್‌ಗೆ 200 ರೂ. ಹೆಚ್ಚಿಸಿ 1,750 ರೂ.(ಕ್ವಿಂಟಾಲ್‌ಗೆ) ನಿಗದಿಗೊಳಿಸಲಾಗಿದ್ದರೆ ‘ಎ’ ಗ್ರೇಡ್ ಭತ್ತದ ಬೆಂಬಲ ಬೆಲೆಯನ್ನು ಪ್ರತೀ ಕ್ವಿಂಟಾಲ್‌ಗೆ 160 ರೂ. ಹೆಚ್ಚಿಸಿ 1,750 ರೂ. ನಿಗದಿಗೊಳಿಸಲಾಗಿದೆ. ಸಾಮಾನ್ಯ ಗ್ರೇಡ್ ಮತ್ತು ಎ ಗ್ರೇಡ್ ಭತ್ತದ ಕನಿಷ್ಟ ಬೆಂಬಲ ಬೆಲೆ ಕ್ರಮವಾಗಿ ಕ್ವಿಂಟಾಲ್‌ಗೆ 1,550 ರೂ. ಹಾಗೂ 1,590 ರೂ. ಆಗಿದೆ. ಹತ್ತಿ (ಸಾಧಾರಣ ಉದ್ದ)ಯ ಕನಿಷ್ಟ ಬೆಂಬಲ ಬೆಲೆ ಕ್ವಿಂಟಾಲ್‌ಗೆ ರೂ.4,020ರಿಂದ ರೂ.5,150ಕ್ಕೆ , ಹತ್ತಿ(ಉದ್ದದ)ಯ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 4,320 ರೂ.ನಿಂದ 5,450 ರೂ.ಗೆ ಹೆಚ್ಚಿಸಲಾಗಿದೆ. ಧಾನ್ಯಗಳಲ್ಲಿ ತೊಗರಿಯ ಕನಿಷ್ಟ ಬೆಂಬಲ ಬೆಲೆ 5,450 ರೂ.ನಿಂದ 5,675 ರೂ.ಗೆ, ಹೆಸರು ಬೇಳೆಯ ಕನಿಷ್ಟ ಬೆಂಬಲ ಬೆಲೆ ಕ್ವಿಂಟಾಲ್‌ಗೆ ರೂ. 5,575ರಿಂದ ರೂ.6,975ಕ್ಕೆ ಹೆಚ್ಚಿಸಲಾಗಿದೆ. ಉದ್ದಿನ ಬೇಳೆಯ ಕನಿಷ್ಟ ಬೆಂಬಲ ಬೆಲೆ ಕ್ವಿಂಟಾಲ್‌ಗೆ 5,400 ರೂ.ನಿಂದ 5,600 ರೂ.ಗೆ ಹೆಚ್ಚಿಸಲಾಗಿದೆ.

ಆಹಾರಧಾನ್ಯಗಳನ್ನು ಸಂಗ್ರಹಿಸಿ ವಿತರಣೆ ಮಾಡುವ ಸರಕಾರಿ ಇಲಾಖೆ ಭಾರತೀಯ ಆಹಾರ ನಿಗಮ(ಎಫ್‌ಸಿಐ) ರೈತರಿಂದ ಕನಿಷ್ಟ ಬೆಂಬಲ ಬೆಲೆಯಲ್ಲಿ ಗೋಧಿ ಮತ್ತು ಅಕ್ಕಿಯನ್ನು ಖರೀದಿಸಿ ಇವನ್ನು ಆಹಾರ ಭದ್ರತಾ ಕಾನೂನಿನಡಿ ಸರಬರಾಜು ಮಾಡುತ್ತದೆ. ಭತ್ತವು ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿದ್ದು ನೈರುತ್ಯ ಮುಂಗಾರು ಆರಂಭವಾಗುತ್ತಿರುವಂತೆಯೇ ಭತ್ತದ ಕೃಷಿ ಕಾರ್ಯಕ್ಕೂ ಚಾಲನೆ ದೊರಕಿದೆ. ಸರಕಾರದ ಕೃಷಿ ಸಲಹಾ ಸಮಿತಿ ಸೂಚಿಸಿರುವ ಬೆಂಬಲ ಬೆಲೆ ದರಕ್ಕಿಂತ ಹೆಚ್ಚಿನ ದರವನ್ನು ಕೃಷಿ ಸಚಿವಾಲಯವು ಪ್ರಸ್ತಾಪಿಸಿತ್ತು ಎಂದು ಮೂಲಗಳು ತಿಳಿಸಿವೆ .

2017-18ರ ಕೃಷಿ ವರ್ಷ(2017ರ ಜುಲೈಯಿಂದ 2018ರ ಜೂನ್‌ವರೆಗೆ) ಭಾರತವು 279.51 ಮಿಲಿಯನ್ ಟನ್‌ಗಳಷ್ಟು ಪ್ರಮಾಣದ ಆಹಾರಧಾನ್ಯವನ್ನು ಉತ್ಪಾದಿಸಿದ್ದು, ಇದು ನೂತನ ದಾಖಲೆಯಾಗಿದೆ. ಈ ಬಾರಿ ಮುಂಗಾರು ಮಳೆ ಸಾಮಾನ್ಯ ಮಟ್ಟದಲ್ಲಿರಲಿದೆ ಎಂಬ ಮುನ್ಸೂಚನೆಯ ಹಿನ್ನೆಲೆಯಲ್ಲಿ ಈ ಬಾರಿಯೂ ಆಹಾರಧಾನ್ಯ ಉತ್ಪನ್ನ ಗರಿಷ್ಟ ಪ್ರಮಾಣದಲ್ಲಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ರೈತರ ಬೆಳೆಗಳಿಗೆ ಉತ್ಪನ್ನ ವೆಚ್ಚದ 1.5ರಷ್ಟು ಪ್ರಮಾಣದ ದರ ಒದಗಿಸುವುದಾಗಿ 2014ರ ಲೋಕಸಭಾ ಚುನಾವಣೆ ಸಂದರ್ಭ ಬಿಜೆಪಿ ಭರವಸೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X