Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ: ಸಾಲ ಮರುಪಾವತಿಗೆ ಎಸ್‍ಬಿಐ...

ಮೂಡಿಗೆರೆ: ಸಾಲ ಮರುಪಾವತಿಗೆ ಎಸ್‍ಬಿಐ ಬ್ಯಾಂಕ್ ನೋಟಿಸ್; ರೈತರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ4 July 2018 7:20 PM IST
share
ಮೂಡಿಗೆರೆ: ಸಾಲ ಮರುಪಾವತಿಗೆ ಎಸ್‍ಬಿಐ ಬ್ಯಾಂಕ್ ನೋಟಿಸ್; ರೈತರಲ್ಲಿ ಆತಂಕ

ಚಿಕ್ಕಮಗಳೂರು, ಜು.4: ರಾಷ್ಟೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಮಾಡಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಪದೇ ಪದೇ ಹೇಳಿಕೆ ನೀಡುತ್ತಿದ್ದರೂ ಮೂಡಿಗೆರೆ ಪಟ್ಟಣದ ಕೆಲ ರಾಷ್ಟ್ರೀಕೃತ ಬ್ಯಾಂಕ್‍ಗಳು ರೈತರಿಗೆ ಸಾಲ ಮರುಪಾವತಿಸಿ, ಇಲ್ಲವೇ ಕಾನೂನು ಕ್ರಮ ಎದುರಿಸಿ ಎಂಬ ಸಾರಾಂಶದ ನೋಟಿಸ್‍ಗಳನ್ನು ಜಾರಿ ಮಾಡುವ ಮೂಲಕ ತಾಲೂಕಿನ ರೈತರನ್ನು ಗೊಂದಲಕ್ಕೀಡು ಮಾಡುತ್ತಿವೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಮೂಡಿಗೆರೆ ಪಟ್ಟಣದಲ್ಲಿರುವ ಎಸ್‍ಬಿಐ ಬ್ಯಾಂಕ್ ಕಳೆದ ಜೂನ್ ತಿಂಗಳಿನಿಂದ ತಾಲೂಕಿನ ನೂರಾರು ರೈತರಿಗೆ ಸಾಲ ಮರು ಪಾವತಿ ಮಾಡುವಂತೆ ಕೋರಿರುವ ನೋಟಿಸ್ ಗಳನ್ನು ಜಾರಿ ಮಾಡಿದ್ದು, ಸಾಲ ಪಡೆದ ರೈತರು ಮೂಡಿಗೆರೆ ಎಸ್‍ಬಿಐ ಬ್ಯಾಂಕ್ ಶಾಖೆಯಿಂದ ನೋಟಿಸ್ ಪಡೆದ ನಂತರ ಐದು ದಿನಗಳೊಳಗೆ ಬ್ಯಾಂಕ್ ಅಧಿಕಾರಿಗಳಿನ್ನು ಸಂಪರ್ಕಿಸಿ ಸಾಲ ಮರುಪಾವತಿಸಿ ಸಾಲ ನವೀಕರಿಸಿಕೊಳ್ಳಬೇಕು. ತಪ್ಪಿದಲ್ಲಿ ಕಾನೂನು ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ನೋಟಿಸ್‍ನಲ್ಲಿ ರೈತರಿಗೆ ಎಚ್ಚರಿಕೆ ನೀಡಲಾಗಿದೆ.

ಆದರೆ ತಾಲೂಕಿನ ನೂರಾರು ರೈತರು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರ ಸಾಲ ಮನ್ನಾ ಆಗಲಿದೆ ಎಂಬ ಸಮ್ಮಿಶ್ರ ಸರಕಾರದ ಭರವಸೆಯ ಆಧಾರದ ಮೇಲೆ ತಾವು ಮಾಡಿದ ಸಾಲ ಮನ್ನಾ ಆಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದು, ಎಸ್‍ಬಿಐ ಸದ್ಯ ದಿಢೀರನೆ ಸಾಲ ಮರುಪಾವತಿಸುವಂತೆ ನೋಟಿಸ್ ನೀಡಿರುವುದರಿಂದ ಗೊಂದಲಕ್ಕೊಳಗಾಗಿದ್ದಾರೆ. ಅಲ್ಲದೇ ಗುರುವಾರ ಸಮ್ಮಿಶ್ರ ಸರಕಾರದ ಬಜೆಟ್ ಮಂಡನೆಯಾಗಲಿದ್ದು, ಬಜೆಟ್‍ನಲ್ಲಿ ಸಾಲ ಮನ್ನಾ ಯೋಜನೆ ಜಾರಿಯಾಗಬಹುದೆಂಬ ವಿಶ್ವಾಸ ರೈತರಲ್ಲಿದೆ. ಆದರೆ ನೋಟಿಸ್‍ಗೆ ಹೆದರಿ ಸಾಲ ಮರುಪಾವತಿಸಿದಲ್ಲಿ ಸಾಲ ಮನ್ನಾ ಯೋಜನೆಯ ಲಾಭ ರೈತರಿಗೆ ಧಕ್ಕದಂತಾಗುತ್ತದೆ ಎಂಬ ಆತಂಕ ಇಲ್ಲಿನ ರೈತರಲ್ಲಿ ಮನೆ ಮಾಡಿದೆ. 

ಬ್ಯಾಂಕ್ ಅಧಿಕಾರಿಗಳು ಬಜೆಟ್ ಮಂಡನೆ ವಿಷಯ ತಿಳಿದಿದ್ದರೂ ತಾಲೂಕಿನಾದ್ಯಂತ ನೂರಾರು ರೈತರಿಗೆ ನೋಟಿಸ್ ನೀಡಿ ಗೊಂದಲ ಸೃಷ್ಟಿಸಿದ್ದಾರೆ. ಒಂದೆಡೆ ರಾಜ್ಯ ಸರಕಾರ ಸಾಲ ಮನ್ನಾ ಯೋಜನೆ ಶೀಘ್ರ ಜಾರಿಯಾಗಲಿದೆ ಎಂದು ಹೇಳಿಕೆ ನೀಡುತ್ತಿದೆ. ಮತ್ತೊಂದೆಡೆ ಬ್ಯಾಂಕ್ ಅಧಿಕಾರಿಗಳು ಸಾಲ ಮರುಪಾವತಿಸಿ, ಇಲ್ಲವೇ ಕಾನೂನು ಕ್ರಮ ಎದುರಿಸಿ ಎಂದು ನೋಟಿಸ್ ನೀಡುತ್ತಿದೆ. ಈ ದ್ವಂಧ್ವ ನೀತಿಯಿಂದಾಗಿ ಸಾವಿರಾರು ರೈತರು ಆತಂಕಕ್ಕೊಳಗಾಗಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಹೀಗೆ ನೋಟಿಸ್ ಜಾರಿ ಮಾಡುವುದನ್ನು ನಿಲ್ಲಿಸಿ, ರೈತರ ಆತಂಕವನ್ನು ದೂರ ಮಾಡಬೇಕೆಂದು ತಾಲೂಕಿನ ರೈತ ಮುಖಂಡರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X