Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಚ್ಚುವರಿ ಶುಲ್ಕ ಕೇಳಿ ಯಾತ್ರಿಗಳಿಗೆ...

ಹೆಚ್ಚುವರಿ ಶುಲ್ಕ ಕೇಳಿ ಯಾತ್ರಿಗಳಿಗೆ ಎಸ್‌ಎಂಎಸ್ ಕಳಿಸಿದ ಹಜ್ ಸಮಿತಿ !

ಹಜ್‌ ಯಾತ್ರೆ-2018

ವಾರ್ತಾಭಾರತಿವಾರ್ತಾಭಾರತಿ4 July 2018 8:23 PM IST
share
ಹೆಚ್ಚುವರಿ ಶುಲ್ಕ ಕೇಳಿ ಯಾತ್ರಿಗಳಿಗೆ ಎಸ್‌ಎಂಎಸ್ ಕಳಿಸಿದ ಹಜ್ ಸಮಿತಿ !

ಬೆಂಗಳೂರು, ಜು.4: ಪ್ರಸಕ್ತ ಸಾಲಿನ ಪವಿತ್ರ ಹಜ್‌ ಯಾತ್ರೆ ಕೈಗೊಳ್ಳುತ್ತಿರುವ ರಾಜ್ಯದ ಯಾತ್ರಿಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವಂತೆ ಭಾರತೀಯ ಹಜ್ ಸಮಿತಿ ರವಾನಿಸಿರುವ ಎಸ್‌ಎಂಎಸ್ ಸಂದೇಶವು ಯಾತ್ರಿಗಳಲ್ಲಿ ಗೊಂದಲ ಸೃಷ್ಟಿಸಿದೆ.

ಭಾರತೀಯ ಹಜ್ ಸಮಿತಿ ಹೊರಡಿಸಿರುವ ಸುತ್ತೋಲೆ ಪ್ರಕಾರ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣ ಕೈಗೊಳ್ಳುವ ಯಾತ್ರಿಗಳು ಹಜ್ ಕರ್ಮವನ್ನು ನಿರ್ವಹಿಸಿ ಪುನಃ ಮಂಗಳೂರಿಗೆ ಹಿಂದಿರುಗಲು ಗ್ರೀನ್ ಕೆಟಗರಿಯವರಿಗೆ 2,63,450 ರೂ.ಗಳನ್ನು ನಿಗದಿ ಪಡಿಸಲಾಗಿತ್ತು. ಇದರ ಮೊದಲ ಕಂತು 81 ಸಾವಿರ ರೂ.ಗಳನ್ನು ಪ್ರಸಕ್ತ ಸಾಲಿನ ಜನವರಿಯಲ್ಲಿ ಪಾವತಿಸಲು ತಿಳಿಸಲಾಗಿತ್ತು. ಎರಡನೆ ಕಂತನ್ನು 1,82,450 ರೂ.ಗಳನ್ನು ಮೇ ತಿಂಗಳ ಒಳಗಡೆ ಪಾವತಿಸಲು ಸೂಚಿಸಲಾಗಿತ್ತು. ಆದರೆ, ಈಗ ದಿಢೀರನೆ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಜುಲೈ 10 ರೊಳಗೆ 16,258 ರೂ.ಗಳನ್ನು ಪಾವತಿಸುವಂತೆ ತಿಳಿಸಿರುವುದು ಯಾತ್ರಿಗಳಲ್ಲಿ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

ಈ ಹಿಂದೆ ನಿಗದಿಪಡಿಸಿದಂತೆ ಬೆಂಗಳೂರು ವಿಮಾನ ನಿಲ್ದಾಣದಿಂದ ತೆರಳುವ ಯಾತ್ರಿಗಳು ಗ್ರೀನ್ ಕೆಟಗರಿಗೆ 2,61,250 ರೂ., ಅಝೀಝಿಯಾ ಕೆಟಗರಿಯ ಯಾತ್ರಿಗಳು 2,27,100 ರೂ.ಗಳು. ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಗ್ರೀನ್ ಕೆಟಗರಿಯ ಯಾತ್ರಿಗಳು 2,63,450 ರೂ., ಅಝೀಝಿಯಾ ಕೆಟಗರಿಯ ಯಾತ್ರಿಗಳು 2,29,250 ರೂ.ಗಳನ್ನು ಪಾವತಿಸಬೇಕಿತ್ತು.

ಹೈದರಾಬಾದ್ ವಿಮಾನ ನಿಲ್ದಾಣದಿಂದ ಹೊರಡುವ ಗ್ರೀನ್ ಕೆಟಗರಿಯ ಯಾತ್ರಿಗಳು 2,47,750 ರೂ., ಅಝೀಝಿಯಾ ಕೆಟಗರಿಯ ಯಾತ್ರಿಗಳು 2,13,600 ರೂ. ಹಾಗೂ ಗೋವಾ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸುವ ಗ್ರೀನ್ ಕೆಟಗರಿಯ ಯಾತ್ರಿಗಳು 2,63,100 ರೂ., ಅಝೀಝಿಯಾ ಕೆಟಗರಿಯ ಯಾತ್ರಿಗಳು 2,28,950 ರೂ.ಗಳನ್ನು ಪಾವತಿಸಬೇಕಿತ್ತು.

ಈ ಸಂಬಂಧ ರಾಜ್ಯ ಸದ್ಭಾವನಾ ವೇದಿಕೆಯ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ‘ವಾರ್ತಾ ಭಾರತಿ’ಯೊಂದಿಗೆ ಮಾತನಾಡಿ, ಜು.21 ರಿಂದ 23ರ ವರೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಯಾತ್ರಿಗಳು ಹಜ್‌ ಯಾತ್ರೆಗೆ ಪ್ರಯಾಣ ಬೆಳೆಸುವ ತಯಾರಿಯಲ್ಲಿರುವಾಗ 16,258 ರೂ.ಗಳನ್ನು ಪಾವತಿಸುವಂತೆ ಸಂದೇಶ ಕಳುಹಿಸಿರುವುದು ಯಾತ್ರಿಗಳಿಗೆ ದೊಡ್ಡ ಆಘಾತ ತಂದಿದೆ ಎಂದು ತಿಳಿಸಿದರು.

ಭಾರತೀಯ ಹಜ್ ಸಮಿತಿಯಿಂದ ಸ್ಪಷ್ಟೀಕರಣ ಕೇಳಿದ್ದೇವೆ

ಭಾರತೀಯ ಹಜ್ ಸಮಿತಿಯಿಂದ ರಾಜ್ಯದ ಯಾತ್ರಿಗಳಿಗೆ ಹೆಚ್ಚುವರಿಯಾಗಿ ಹಣ ಪಾವತಿಸುವಂತೆ ಎಸ್‌ಎಂಎಸ್ ಸಂದೇಶ ಬಂದಿರುವ ಕುರಿತು ನಮಗೂ ದೂರುಗಳು ಬಂದಿವೆ. ಈ ಬಗ್ಗೆ ಭಾರತೀಯ ಹಜ್ ಸಮಿತಿಯಿಂದ ಸ್ಪಷ್ಟೀಕರಣ ಕೇಳಿದ್ದು, ನಾಳೆಯೊಳಗೆ ನಮಗೆ ವಿವರಣೆ ಸಿಗಲಿದೆ. ಆನಂತರ, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

-ಸರ್ಫರಾಝ್‌ ಖಾನ್, ಕಾರ್ಯನಿರ್ವಾಹಕ ಅಧಿಕಾರಿ, ರಾಜ್ಯ ಹಜ್ ಸಮಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X