ಕೃಷಿ ಪಂಡಿತ, ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು, ಜು.4: 2017-18ನೇ ಸಾಲಿನ ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು.
ಅಲ್ಲದೇ ಅವರ ಸಂಶೋಧನೆಗಳು/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವವರು ತಮ್ಮ ನಾಮನಿರ್ದೇಶನಗಳನ್ನು ನಿಗದಿತ ನಮೂನೆಯಲ್ಲಿ (ಅನುಬಂಧ-1ಎ) ತುಂಬಿ ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಜು.20 ರೊಳಗಾಗಿ ಸಲ್ಲಿಸಬೇಕು.
Next Story