Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು. 6ರಿಂದ 'ಆಳ್ವಾಸ್ ಪ್ರಗತಿ-ಬೃಹತ್...

ಜು. 6ರಿಂದ 'ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳ'

ವಾರ್ತಾಭಾರತಿವಾರ್ತಾಭಾರತಿ4 July 2018 9:05 PM IST
share
ಜು. 6ರಿಂದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳ

ಮೂಡುಬಿದಿರೆ, ಜು. 4: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಜು. 6, 7ರಂದು ‘ಆಳ್ವಾಸ್ ಪ್ರಗತಿ 2018’-10ನೇ ವರ್ಷದ ಬೃಹತ್ ಉದ್ಯೋಗ ಮೇಳವು ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆಯಲಿದೆ. 600 ಹೆಸರಾಂತ ಕಂಪೆನಿಗಳು ಭಾಗವಹಿಸಲಿದ್ದು, 2 ಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ. ಉಚಿತ ನೋಂದಾವಣೆ, ಅತ್ಯಂತ ಪಾರದರ್ಶಕತೆ, ವ್ಯವಸ್ಥಿತ ರೀತಿಯಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 12 ಸಾವಿರ ಅಭ್ಯರ್ಥಿಗಳು ಪ್ರಗತಿಯಲ್ಲಿ ಭಾಗಹಿಸುವ ನಿರೀಕ್ಷೆಯಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್, ಕೆ. ಅಮರನಾಥ್ ಶೆಟ್ಟಿ ಅತಿಥಿಗಳಾಗಿರುವರು. ಸಮಾರಂಭದಲ್ಲಿ ಐಟಿಸಿ ಲಿಮಿಟೆಡ್‌ನ ಸೀನಿಯರ್ ಮ್ಯಾನೇಜರ್ ಎಚ್‌ಆರ್ ಶ್ರೀನಿವಾಸ ರೈ, ಎಂಫಸಿಸ್ ಕಂಪನಿಯ ಸೀನಿಯರ್ ಮ್ಯಾನೇಜರ್ ಎಚ್‌ಆರ್ ವಿದ್ಯಾರಣ್ಯ ಕೊಲ್ಲಿಪಾಲ್, ಯುಎಇ ಎಕ್ಸ್‌ಚೇಂಜ್‌ನ ಎಚ್‌ಆರ್ ಗಣೇಶ್ ರವಿ ಮೂಡುಬಿದಿರೆ ಅವರನ್ನು ಸನ್ಮಾನಿಸಲಾಗುತ್ತಿದೆ. 

ವಿಪುಲ ಉದ್ಯೋಗಾವಕಾಶ ನೀಡುವ ಕ್ಷೇತ್ರಗಳಾದ ಕ್ಷೇತ್ರಗಳಾದ ಐಟಿ, ಐಟಿಈಎಸ್, ಮ್ಯಾನುಫ್ಯಾಕ್ಚರಿಂಗ್, ಸೇಲ್ಸ್ ಹಾಗೂ ರಿಟೇಲ್ಸ್, ಬ್ಯಾಂಕಿಂಗ್ ಹಾಗೂ ಫಿನಾನ್ಸ್, ಹಾಸ್ಪಿಟಾಲಿಟಿ, ಎನ್‌ಜಿಒ ಹಾಗೂ ಶಿಕ್ಷಣ ಕ್ಷೇತ್ರದ ಪ್ರತಿಷ್ಠಿತ ಕಂಪನಿಗಳು ಈ ಬಾರಿಯ ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುತ್ತಿವೆ. ಈ ಮೂಲಕ ಪದವಿ ಹಾಗೂ ಸ್ನಾತ್ತಕೋತ್ತರ ಪದವಿಯ ವಿವಿಧ ಕ್ಷೇತ್ರಗಳಾದ ಮೆಡಿಕಲ್ ಹಾಗೂ ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲೆ, ವಾಣಿಜ್ಯ, ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಹಾಗೂ ಪಿಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅವರ ಕೌಶಲ್ಯ ಹಾಗೂ ಅರ್ಹತೆಗನುಗುಣವಾಗಿ ಸೂಕ್ತ ಅವಕಾಶಗಳನ್ನು ಕಲ್ಪಿಸಿಕೊಡಲಾಗುತ್ತಿದೆ ಎಂದು ಡಾ.ಎಂ ಮೋಹನ ಆಳ್ವ ಮಾಹಿತಿ ನೀಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಪ್ಲೇಸ್‌ಮೆಂಟ್ ಅಧಿಕಾರಿ ಸುಶಾಂತ್ ಅನಿಲ್ ಲೋಬೊ, ಆಳ್ವಾಸ್ ಪಿಆರ್‌ಒ ಡಾ.ಪದ್ಮನಾಭ ಶೆಣೈ, ಆಳ್ವಾಸ್ ಪ್ರಗತಿ ಮಾಧ್ಯಮ ಸಂಯೋಜಕ ಪ್ರಸಾದ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆಯು ಜುಲೈ 6ರರವರೆಗೆ ಮಾತ್ರ ಚಾಲ್ತಿಯಲ್ಲಿರಲಿದೆ. ಎರಡನೇ ದಿನ ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ದೂರದ ಊರುಗಳಿಂದ ಆಗಮಿಸುವ ಉದ್ಯೋಕಾಂಕ್ಷಿಗಳಿಗೆ ಜುಲೈ 5ರಿಂದ ಸಂಸ್ಥೆಯು ವಸತಿ ಸೌಲಭ್ಯವನ್ನು ಕಲ್ಪಿಸುತ್ತಿದೆ.

ಅಪೋಲೋ ಹಾಸ್ಪಿಟಲ್ಸ್, ವೋಕ್‌ಹಾರ್ಟ್, ಐಫನ್‌ಗ್ಲೋಬಲ್ ಫಾರ್ ಮೇದಾಂತ್- ದಿ ಮೆಡಿಸಿಟಿ, ಕೆಎಮ್‌ಸಿ ಹಾಸ್ಪಿಟಲ್‌ಗಳಲ್ಲಿ 300 ಕ್ಕೂ ಹೆಚ್ಚು ಅವಕಾಶಗಳಿದ್ದು, ಬಿಎಸ್ಸಿ/ಜಿಎನ್‌ಎಂ ನರ್ಸ್‌ಗಳನ್ನು ನಿರೀಕ್ಷಿಸಲಾಗುತ್ತಿದೆ. ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರದ ಕಂಪೆನಿಗಳಿಂದ ಪದವಿ ಹಾಗೂ ಸ್ನಾತ್ತಕೋತ್ತರ ಪದವೀಧರರಿಗೆ 1200ಕ್ಕೂ ಹೆಚ್ಚಿನ ಉದ್ಯೋಗಾವಕಾಶಗಳಿದ್ದು ಎಂಬಿಎ ಹಾಗೂ ಎಂಕಾಂ ಪದವೀಧರರನ್ನು ಎದುರು ನೋಡುತ್ತಿವೆ. ಐಟಿಐ ವಿದ್ಯಾರ್ಥಿಗಳಿಗೆ 450 ಕ್ಕೂ ಹೆಚ್ಚಿನ ಉದ್ಯೋಗವಕಾಶ. ಟರ್ನರ್ಸ್‌ ಫಿಟ್ಟರ್ಸ್‌, ಹಾಗೂ ವೆಲ್ಡರ್ಸ್‌ಗಳಿಗೆ ಪ್ರತಿಷ್ಠಿತ ಕಂಪೆನಿಗಳಿಂದ ಉದ್ಯೋಗಾವಕಾಶ. ಮೆಕ್ಯಾನಿಕಲ್ ಹಾಗೂ ಆಟೋಮೋಬೈಲ್ ಪದವಿಧರರಿಗೆ 250ಕ್ಕೂ ಅವಕಾಶಗಳಿದ್ದು ಅಪ್ರೆಂಟೈಸ್‌ಷಿಪ್‌ಗೆ ಅವಕಾಶ ನೀಡಲಾಗುತ್ತಿದೆ.

ಅರ್ಹ ವಿದ್ಯಾರ್ಥಿಗಳು ಹಾಗೂ ಆಸಕ್ತ ಉದ್ಯೋಗಾಕಾಂಕ್ಷಿಗಳನ್ನು ತಲುಪಬೇಕೆನ್ನುವುದು ಆಳ್ವಾಸ್ ಪ್ರಗತಿಯ ಮುಖ್ಯ ಉದ್ದೇಶ. ಇದಕ್ಕಾಗಿ ವೆಬ್‌ಸೈಟ್‌ನ್ನು ಸಿದ್ಧಪಡಿಸಲಾಗಿದ್ದು, ನಿರಂತರ ಮಾಹಿತಿ ನೀಡಲಾಗುತ್ತಿದೆ. ಆಳ್ವಾಸ್ ಪ್ರಗತಿಯ ಹೊಸ ಬೆಳವಣಿಗೆಗಳನ್ನು ಈ ಮೂಲಕ ಅಪ್‌ಡೇಟ್ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಐಟಿಐ, ಪಿಯುಸಿ, ಎಸ್‌ಎಸ್‌ಎಲ್‌ಸಿ ಅಭ್ಯರ್ಥಿಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಉದ್ಯೋಕಾಂಕ್ಷಿಗಳಿಗೆ ಆನ್‌ಲೈನ್ ನೊಂದಾವಣೆ ಕಡ್ಡಾಯ.

ವೆಬ್‌ಸೈಟ್: www.alvaspragati.com  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9611686148, 9663190590, 7892880902, 8494934852, 9008907716, 9008907716 ಅಭ್ಯರ್ಥಿಗಳ ನೊಂದಾವಣಿಗಾಗಿ
http://alvaspragati.com/CandidateRegistrationPage

share
ವಾರ್ತಾಭಾರತಿ
ವಾರ್ತಾಭಾರತಿ
Next Story
X