Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನನ್ನು ಸಿಎಂ ಮಾಡಲು ರಾಜ್ಯಪಾಲರು...

ನನ್ನನ್ನು ಸಿಎಂ ಮಾಡಲು ರಾಜ್ಯಪಾಲರು ಕರೆಯಬೇಕಿತ್ತು !

ಹೈಕೋರ್ಟ್‌ನಲ್ಲಿ ವ್ಯಕ್ತಿಯಿಂದ ಪಿಐಎಲ್ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ4 July 2018 10:11 PM IST
share
ನನ್ನನ್ನು ಸಿಎಂ ಮಾಡಲು ರಾಜ್ಯಪಾಲರು ಕರೆಯಬೇಕಿತ್ತು !

ಬೆಂಗಳೂರು, ಜು.4: 'ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನ್ನನ್ನು ಮುಖ್ಯಮಂತ್ರಿ ಮಾಡಲು ರಾಜ್ಯಪಾಲರು ಕರೆಯಬೇಕಿತ್ತು. ಆದರೆ ಕರೆದಿಲ್ಲ. ಹೀಗಾಗಿ, ರಾಜ್ಯಪಾಲರು ಈ ಕುರಿತು ಕೋರ್ಟ್ ವಿವರಣೆ ಪಡೆದು ನನಗೆ ನ್ಯಾಯ ಒದಗಿಸಬೇಕು'. ಹೀಗೆಂದು ತೀರ್ಥಹಳ್ಳಿಯ 66 ವರ್ಷದ ಟಿ.ಡಿ.ಆರ್.ಹರಿಶ್ಚಂದ್ರ ಗೌಡ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.

ಈ ಅರ್ಜಿ ಬುಧವಾರ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತು. ವಿಚಾರಣೆ ವೇಳೆ ಅರ್ಜಿದಾರ ಹರಿಶ್ಚಂದ್ರಗೌಡ ಸ್ವತಃ ಕನ್ನಡದಲ್ಲಿ ವಾದ ಮಂಡಿಸಲು ಮುಂದಾದರು. ಆಗ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರನ್ನು ತಡೆದು, ನೀವು ಕನ್ನಡದಲ್ಲೇ ವಾದ ಮಾಡುವುದಾದರೆ ಈ ಪ್ರಕರಣವನ್ನು ಬೇರೊಂದು ನ್ಯಾಯಪೀಠಕ್ಕೆ ವರ್ಗಾಯಿಸಲಾಗುವುದು. ಯಾಕೆಂದರೆ ಮುಖ್ಯ ನ್ಯಾಯಮೂರ್ತಿಗಳಿಗೆ ಕನ್ನಡ ಬರುವುದಿಲ್ಲ ಎಂದು ವಿವರಿಸಿದರು. ಇದಕ್ಕೆ ಹರಿಶ್ಚಂದ್ರಗೌಡ 'ಆಗಲಿ ಮೈ ಲಾರ್ಡ್‌ಶಿಪ್, ಧನ್ಯವಾದಗಳು' ಎಂದು ಎರಡೂ ಕೈಯೆತ್ತಿ ನ್ಯಾಯಪೀಠ್ಕಕೆ ನಮಸ್ಕರಿಸಿ ಕೋರ್ಟ್ ಹಾಲ್‌ನಿಂದ ಹೊರನಡೆದರು.

ಅರ್ಜಿಯಲ್ಲಿ ಏನಿದೆ: ನಾನು ತುಳಿತಕ್ಕೊಳಗಾದವರು ಹಾಗೂ ಬಡವರ ಪರ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ. ಎಐಸಿಸಿ ಸದಸ್ಯನೂ ಹೌದು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನಿಧನಾನಂತರ 42 ವರ್ಷಗಳಿಂದೀಚೆಗೆ ನಾನೊಬ್ಬನೇ ನೆಹರೂ ಕುಟುಂಬದ ಏಕೈಕ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ದಲಿತರ ಮೀಸಲು ಸೌಲಭ್ಯವನ್ನು 10 ವರ್ಷ ಮುಂದುವರಿಸುವಂತೆ 1980ರಲ್ಲಿ ಸಂಜಯ ಗಾಂಧಿಗೆ ಹಾಗೂ 1990ರಲ್ಲಿ ವಿ.ಪಿ.ಸಿಂಗ್ ಅವರಿಗೆ ಸಲಹೆ ಕೊಟ್ಟವನೇ ನಾನು. ಇದನ್ನು ಅವರಿಬ್ಬರೂ ಒಪ್ಪಿ 20 ವರ್ಷ ಮೀಸಲು ಅವಧಿ ವಿಸ್ತರಿಸಿದರು. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿಯವರ ಪ್ರಾಣವನ್ನು ನಾಲ್ಕು ಬಾರಿ ಉಳಿಸಿದ್ದೇನೆ.

1980ರಲ್ಲಿ ಸಂಜಯ ಗಾಂಧಿ 1981ರಲ್ಲಿ ಇಂದಿರಾ ಗಾಂಧಿ, 1992ರಲ್ಲಿ ಪಿ.ವಿ.ನರಸಿಂಹ ರಾವ್, 2002ರಲ್ಲಿ ಸೋನಿಯಾ ಗಾಂಧಿ ನನ್ನನ್ನು ಮುಖ್ಯಮಂತ್ರಿ ಮಾಡಲು ನಿರ್ಧರಿಸಿದ್ದರು. ದೇವೇಗೌಡರು ಮತ್ತು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ನಾನೇ ಕಾರಣ. ಯಡಿಯೂರಪ್ಪ ಅವರಿಗೆ ಬಹುಮತ ಇಲ್ಲದ ಕಾರಣ ಹರಿಶ್ಚಂದ್ರ ಮುಖ್ಯಮಂತ್ರಿಯಾಗುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ.ಪರಮೇಶ್ವರ್ ಹಾಗೂ ಜೆಡಿಎಸ್‌ನ ದೇವೇಗೌಡರೂ ನನಗೆ ಸರಕಾರ ರಚಿಸಲು ಬೆಂಬಲ ಸೂಚಿಸಿದ್ದರು. ಮೊನ್ನೆಯ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಲಿಲ್ಲ. ಹೀಗಾಗಿ ರಾಜ್ಯಪಾಲರು ಕಾಂಗ್ರೆಸ್ ಪಕ್ಷವನ್ನು ಕರೆಯಬೇಕಿತ್ತು. ಕಾಂಗ್ರೆಸ್ ನನ್ನನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಹೇಳಿತ್ತು. ಹೀಗಾಗಿ ನಾನು ರಾಜ್ಯಪಾಲರಿಗೆ ಮನವಿ ನೀಡಿದ್ದೆ. ಆದರೆ, ಅವರು ಅದನ್ನು ಪರಿಗಣಿಸಿಲ್ಲ ಎಂಬುದು ಅರ್ಜಿದಾರರ ಆಕ್ಷೇಪ.

ಈ ಪ್ರಕರಣ ಇದೇ 6ರಂದು ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಮುಹಮ್ಮದ್ ನವಾಜ್ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X