ಭಟ್ಕಳ: ರಿಕ್ಷಾ ಢಿಕ್ಕಿ; ಬೈಕ್ ಸವಾರ ಮೃತ್ಯು

ಭಟ್ಕಳ, ಜು. 5: ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೊ ರಿಕ್ಷಾ ಹಾಗು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹಾಡುವಳ್ಳಿ ಯಲ್ಲಿ ಗುರುವಾರ ನಡೆದಿದೆ.
ಮೃತರನ್ನು ಹಾಡುವಳ್ಳಿಯ ಕುಂದೂರು ಗ್ರಾಮ ನಿವಾಸಿ ಸುರೇಶ್ ಜಟ್ಟಪ್ಪ ನಾಯ್ಕ (30) ಎಂದು ಗುರುತಿಸಲಾಗಿದೆ.
ಭಟ್ಕಳದ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ನಾಯ್ಕ ಗುರುವಾರ ಬೆಳಗ್ಗೆ ಎಂದಿನಂತೆ ಬೈಕ್ ನಲ್ಲಿ ಭಟ್ಕಳಕ್ಕೆ ಹೋಗುತಿದ್ದಾಗ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೊ ರಿಕ್ಷಾ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.
ಘಟನೆ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನರು ಮೃತ ವ್ಯಕ್ತಿಯನ್ನು ನೋಡಲು ಸರ್ಕಾರಿ ಆಸ್ಪತ್ರೆಯಲ್ಲಿ ಸೇರಿದ್ದರು. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story