Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೆ. ಗವರ್ನರ್ ಭೇಟಿಯಾಗಲು ಸಮಯ ಕೇಳಿದ...

ಲೆ. ಗವರ್ನರ್ ಭೇಟಿಯಾಗಲು ಸಮಯ ಕೇಳಿದ ಅರವಿಂದ್ ಕೇಜ್ರಿವಾಲ್

ವಾರ್ತಾಭಾರತಿವಾರ್ತಾಭಾರತಿ5 July 2018 7:40 PM IST
share
ಲೆ. ಗವರ್ನರ್ ಭೇಟಿಯಾಗಲು ಸಮಯ ಕೇಳಿದ ಅರವಿಂದ್ ಕೇಜ್ರಿವಾಲ್

ಹೊಸದಿಲ್ಲಿ, ಜು.5: ದಿಲ್ಲಿ ಆಡಳಿತಾತ್ಮಕ ಮುಖ್ಯಸ್ಥ ಯಾರು ಎಂಬ ವಿಷಯದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪಿನಿಂದ ಉಂಟಾಗಿರುವ ಗೊಂದಲವನ್ನು ನಿವಾರಿಸುವ ಉದ್ದೇಶದಿಂದ ಲೆ.ಗವರ್ನರ್ ಅನಿಲ್ ಬೈಜಾಲ್ ಅವರನ್ನು ಭೇಟಿಯಾಗಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಸಮಯ ಕೇಳಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ದಿಲ್ಲಿ ಸರಕಾರದಲ್ಲಿ ನಿಯೋಜನೆಗೊಂಡಿರುವ ಐಎಎಸ್ ಅಧಿಕಾರಿಗಳು ಸರಕಾರದ ಆದೇಶವನ್ನು ಪಾಲಿಸಲು ನಿರಾಕರಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಹೇಳಿಕೆ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಶ್ರೇಷ್ಠ ನ್ಯಾಯಾಲಯದ ಆದೇಶವನ್ನು ಅನುಷ್ಠಾನಕ್ಕೆ ತರಲು ಮತ್ತು ದಿಲ್ಲಿಯ ಅಭಿವೃದ್ಧಿಗಾಗಿ ಬೆಂಬಲ ಮತ್ತು ಸಹಕಾರವನ್ನು ಕೋರಲು ಲೆ.ಗವರ್ನರ್ ಅವರನ್ನು ಭೇಟಿಯಾಗಲು ಸಮಯ ಕೇಳಿದ್ದೇನೆ ಎಂದು ಕೇಜ್ರಿವಾಲ್ ಗುರುವಾರ ಟ್ವೀಟ್ ಮಾಡಿದ್ದಾರೆ. ಶ್ರೇಷ್ಠ ನ್ಯಾಯಾಲಯದ ಆದೇಶದ ಹೊರತಾಗಿಯೂ ದಿಲ್ಲಿಯ ಚುನಾಯಿತ ಸರಕಾರದ ಆದೇಶವನ್ನು ಪಾಲಿಸದಂತೆ ಅಧಿಕಾರಿಗಳನ್ನು ಕೇಂದ್ರ ಮತ್ತು ಲೆ.ಗವರ್ನರ್ ಪ್ರಚೋದಿಸುತ್ತಿದ್ದಾರೆ. ಕೇಂದ್ರವು ದಿಲ್ಲಿ ಸರಕಾರಕ್ಕೆ ಕಿರುಕುಳ ನೀಡುವುದನ್ನು ನಿಲ್ಲಿಸುವುದಿಲ್ಲ ಎನ್ನುವುದನ್ನು ಇದು ತೋರಿಸುತ್ತದೆ ಎಂದು ದಿಲ್ಲಿ ಸಂಪುಟ ಸಚಿವ ಮತ್ತು ಆಪ್ ನಾಯಕ ಗೋಪಾಲ್ ರಾಯ್ ಟ್ವೀಟ್ ಮಾಡುವ ಮೂಲಕ ಲೆ.ಗ ಮತ್ತು ಕೇಂದ್ರದ ವಿರುದ್ಧದ ಸಮರವನ್ನು ಆಪ್ ಮುಂದುವರಿಸಿದೆ. 585 ಪುಟಗಳ ತನ್ನ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯ ಚುನಾಯಿತ ಸರಕಾರಕ್ಕೆ ಮೊದಲ ಆದ್ಯತೆಯನ್ನು ನೀಡಿದ್ದರೂ ಅದರಲ್ಲಿ ಸೇವೆ ಅಥವಾ ಇನ್ಯಾವುದೇ ಇಲಾಖೆಯನ್ನು ನಿರ್ದಿಷ್ಟವಾಗಿ ಹೆಸರಿಸಲಾಗಿಲ್ಲ. ಆಮ್ ಆದ್ಮಿ ಪಕ್ಷದ ಪ್ರಕಾರ, ಜಮೀನು, ಪೊಲೀಸ್ ಮತ್ತು ಸಾರ್ವಜನಿಕ ಸುವ್ಯವಸ್ಥೆ ಈ ಮೂರು ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲ ವಿಷಯಗಳು ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ಬರುತ್ತದೆ. ಆದರೆ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಬುಧವಾರದಂದು ಸಿಸೋಡಿಯಾಗೆ ಬರೆದಿರುವ ಪತ್ರದಲ್ಲಿ, ಈ ಆದೇಶವು ಸೇವಾ ಇಲಾಖೆಯನ್ನು ದಿಲ್ಲಿ ಸರಕಾರದ ವ್ಯಾಪ್ತಿಯಿಂದ ಹೊರಗಿಟ್ಟಿರುವ 2015ರ ಅಧಿಸೂಚನೆಯನ್ನು ರದ್ದು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X